ವರದಕ್ಷಿಣೆ ಬೇಡಿಕೆಯನ್ನು ಪೂರೈಸಲು ಸಾಧ್ಯವಾಗಲಿಲ್ಲ ಎಂಬ ಕಾರಣಕ್ಕೆ ಪ್ರಿಯಕರ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಕೇರಳದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಡಾ.ರುವೈಸಾ ಅವರನ್ನು ಕರುನಾಗಪಲ್ಲಿಯಲ್ಲಿ ಬಂಧಿಸಿ, ವಿಚಾರಣೆ ನಡೆಸಿದ್ದಾರೆ.
ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಆರೋಪಿ ಡಾ. ರುವೈಸಾ ಅವರನ್ನು ವೈದ್ಯಕೀಯ ಕಾಲೇಜು ಪ್ರಾಂಶುಪಾಲರು ಅಮಾನತುಗೊಳಿಸಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ಕಚೇರಿ ತಿಳಿಸಿದೆ.
ಆರೋಪಿ ರುವೈಸಾ ಮತ್ತು ಆತನ ಸಂಬಂಧಿಕರ ಅತಿಯಾದ ವರದಕ್ಷಿಣೆ ಬೇಡಿಕೆಯಿಂದ ಖಿನ್ನತೆಗೆ ಒಳಗಾಗಿ ಶಹಾನಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆಕೆಯ ಕುಟುಂಬದವರು ಆರೋಪಿಸಿದ್ದಾರೆ. ಅವರ ಹೇಳಿಕೆಗಳು ಮತ್ತು ಸಂತ್ರಸ್ತೆ ಬರೆದಿರುವ ಮರಣ ಪತ್ರ ಆಧರಿಸಿ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.