<p><strong>ಮೇರಠ್</strong>: ಅಪಘಾತದಲ್ಲಿ ಗಾಯಗೊಂಡು ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದ 30 ವರ್ಷದ ವ್ಯಕ್ತಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದ ಕಾರಣ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. </p>.<p>ಕೆಲಸದ ವೇಳೆ ನಿದ್ದೆಗೆ ಜಾರಿ, ಕರ್ತವ್ಯ ಲೋಪವೆಸಗಿದ್ದ ಇಬ್ಬರು ಕಿರಿಯ ವೈದ್ಯರನ್ನು ಸ್ಥಳೀಯಾಡಳಿತವು ಅಮಾನತುಗೊಳಿಸಿದೆ. ವೈದ್ಯರು ನಿದ್ದೆ ಮಾಡುತ್ತಿದ್ದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿದೆ.</p>.<p>ವೈದ್ಯರ ನಿರ್ಲಕ್ಷ್ಯದ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆಸ್ಪತ್ರೆ ಹಾಗೂ ಜಿಲ್ಲಾಡಳಿತವು ಪ್ರತ್ಯೇಕ ತನಿಖೆಗೆ ಆದೇಶಿಸಿದೆ.</p>.<p>‘ಇಲ್ಲಿನ ಹಸನ್ಪುರ ಗ್ರಾಮದ ನಿವಾಸಿ ಸುನಿಲ್ ಅವರು ಭಾನುವಾರ ರಾತ್ರಿ 12.30ಕ್ಕೆ ಅಪಘಾತಕ್ಕೊಳಗಾಗಿದ್ದರು. ತಕ್ಷಣವೇ ಅವರನ್ನು ಇಲ್ಲಿನ ಲಾಲಾ ಲಜಪತ್ರಾಯ್ ಮೆಮೊರಿಯಲ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ (ಎಲ್ಆರ್ಎಂ) ಕರೆತರಲಾಗಿತ್ತು. ಅವರು ಸೋಮವಾರ ಬೆಳಿಗ್ಗೆ 8 ಗಂಟೆಗೆ ಮೃತಪಟ್ಟರು’ ಎಂದು ಗ್ರಾಮದ ಮುಖಂಡ ಜಗ್ಗಿ ಪ್ರಧಾನ್ ತಿಳಿಸಿದರು.</p>.<p>‘ಸುನಿಲ್ ಅತ್ಯಂತ ಗಂಭೀರ ಸ್ವರೂಪದ ಗಾಯಕ್ಕೆ ತುತ್ತಾಗಿದ್ದರೂ ಯಾವ ಸಿಬ್ಬಂದಿಯೂ ಚಿಕಿತ್ಸೆ ನೀಡಲು ಮುಂದೆ ಬಂದಿರಲಿಲ್ಲ. ವೈದ್ಯರು ಹಾಗೂ ದಾದಿಯರು ನಿದ್ದೆ ಮಾಡುತ್ತಿದ್ದರು’ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೇರಠ್</strong>: ಅಪಘಾತದಲ್ಲಿ ಗಾಯಗೊಂಡು ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದ 30 ವರ್ಷದ ವ್ಯಕ್ತಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದ ಕಾರಣ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. </p>.<p>ಕೆಲಸದ ವೇಳೆ ನಿದ್ದೆಗೆ ಜಾರಿ, ಕರ್ತವ್ಯ ಲೋಪವೆಸಗಿದ್ದ ಇಬ್ಬರು ಕಿರಿಯ ವೈದ್ಯರನ್ನು ಸ್ಥಳೀಯಾಡಳಿತವು ಅಮಾನತುಗೊಳಿಸಿದೆ. ವೈದ್ಯರು ನಿದ್ದೆ ಮಾಡುತ್ತಿದ್ದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡಿದೆ.</p>.<p>ವೈದ್ಯರ ನಿರ್ಲಕ್ಷ್ಯದ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆಸ್ಪತ್ರೆ ಹಾಗೂ ಜಿಲ್ಲಾಡಳಿತವು ಪ್ರತ್ಯೇಕ ತನಿಖೆಗೆ ಆದೇಶಿಸಿದೆ.</p>.<p>‘ಇಲ್ಲಿನ ಹಸನ್ಪುರ ಗ್ರಾಮದ ನಿವಾಸಿ ಸುನಿಲ್ ಅವರು ಭಾನುವಾರ ರಾತ್ರಿ 12.30ಕ್ಕೆ ಅಪಘಾತಕ್ಕೊಳಗಾಗಿದ್ದರು. ತಕ್ಷಣವೇ ಅವರನ್ನು ಇಲ್ಲಿನ ಲಾಲಾ ಲಜಪತ್ರಾಯ್ ಮೆಮೊರಿಯಲ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ (ಎಲ್ಆರ್ಎಂ) ಕರೆತರಲಾಗಿತ್ತು. ಅವರು ಸೋಮವಾರ ಬೆಳಿಗ್ಗೆ 8 ಗಂಟೆಗೆ ಮೃತಪಟ್ಟರು’ ಎಂದು ಗ್ರಾಮದ ಮುಖಂಡ ಜಗ್ಗಿ ಪ್ರಧಾನ್ ತಿಳಿಸಿದರು.</p>.<p>‘ಸುನಿಲ್ ಅತ್ಯಂತ ಗಂಭೀರ ಸ್ವರೂಪದ ಗಾಯಕ್ಕೆ ತುತ್ತಾಗಿದ್ದರೂ ಯಾವ ಸಿಬ್ಬಂದಿಯೂ ಚಿಕಿತ್ಸೆ ನೀಡಲು ಮುಂದೆ ಬಂದಿರಲಿಲ್ಲ. ವೈದ್ಯರು ಹಾಗೂ ದಾದಿಯರು ನಿದ್ದೆ ಮಾಡುತ್ತಿದ್ದರು’ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>