<p><strong>ಕೋಲ್ಕತ್ತ:</strong> ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ಖಾಯಂ ಉಪಕುಲಪತಿಗಳ ನೇಮಕಾತಿ ಕುರಿತು ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರೊಂದಿಗಿನ ಸಭೆ ಫಲಪ್ರದವಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. </p><p>ಆದಾಗ್ಯೂ, ಉಪಕುಲಪತಿಗಳ ನೇಮಕಾತಿಗೆ ಸಮಿತಿಯನ್ನು ರಚಿಸುವ ಕುರಿತಂತೆ ಸುಪ್ರೀಂ ಕೋರ್ಟ್ನ ಆದೇಶಕ್ಕೆ ಸಂಬಂಧಿಸಿ ಚರ್ಚೆ ನಡೆದಿದೆಯೇ ಎಂಬುದಕ್ಕೆ ಮಮತಾ ಬ್ಯಾನರ್ಜಿ ಅವರಿಂದ ಉತ್ತರ ಲಭ್ಯವಾಗಿಲ್ಲ. </p><p>'ಸಭೆ ಚೆನ್ನಾಗಿ ನಡೆಯಿತು. ಚರ್ಚೆ ಫಲಪ್ರದವಾಗಿದೆ' ಎಂದು ಸೋಮವಾರ ಸಭೆ ರಾಜಭವನದಲ್ಲಿ ಸುಮಾರು ಒಂದು ತಾಸಿನವರೆಗೂ ನಡೆದ ಸಭೆಯ ಬಳಿಕ ಮಮತಾ ಬ್ಯಾನರ್ಜಿ ತಿಳಿಸಿದರು. </p><p>ಯಾವುದೇ ಟೀಕೆ, ಸಂಘರ್ಷಗಳು ಇರಬಾರದು. ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಭಿನ್ನಮತವಿದೆ ಎಂದು ಹಲವರು ಹೇಳುತ್ತಾರೆ. ಆದರೆ ಇದು ಸತ್ಯವಲ್ಲ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. </p><p>ವಿಶ್ವವಿದ್ಯಾಲಯಗಳಲ್ಲಿ ಉಪಕುಲಪತಿಗಳ ನೇಮಕ ಸೇರಿದಂತೆ ಹಲವು ವಿಷಯಗಳಲ್ಲಿ ರಾಜ್ಯಪಾಲರು ಮತ್ತು ಮಮತಾ ಬ್ಯಾನರ್ಜಿ ಸರ್ಕಾರದ ನಡುವೆ ತಿಕ್ಕಾಟ ಉಂಟಾಗಿತ್ತು. ವಿಸಿ ನೇಮಕಾತಿ ಮುನ್ನ ರಾಜ್ಯಪಾಲರು ಸಮಾಲೋಚನೆ ಮಾಡಿಲ್ಲ. ರಾಜ್ಯ ಶಿಕ್ಷಣ ವ್ಯವಸ್ಥೆಯಲ್ಲಿ ರಾಜ್ಯಪಾಲರ ಹಸ್ತಕ್ಷೇಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ಖಾಯಂ ಉಪಕುಲಪತಿಗಳ ನೇಮಕಾತಿ ಕುರಿತು ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರೊಂದಿಗಿನ ಸಭೆ ಫಲಪ್ರದವಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. </p><p>ಆದಾಗ್ಯೂ, ಉಪಕುಲಪತಿಗಳ ನೇಮಕಾತಿಗೆ ಸಮಿತಿಯನ್ನು ರಚಿಸುವ ಕುರಿತಂತೆ ಸುಪ್ರೀಂ ಕೋರ್ಟ್ನ ಆದೇಶಕ್ಕೆ ಸಂಬಂಧಿಸಿ ಚರ್ಚೆ ನಡೆದಿದೆಯೇ ಎಂಬುದಕ್ಕೆ ಮಮತಾ ಬ್ಯಾನರ್ಜಿ ಅವರಿಂದ ಉತ್ತರ ಲಭ್ಯವಾಗಿಲ್ಲ. </p><p>'ಸಭೆ ಚೆನ್ನಾಗಿ ನಡೆಯಿತು. ಚರ್ಚೆ ಫಲಪ್ರದವಾಗಿದೆ' ಎಂದು ಸೋಮವಾರ ಸಭೆ ರಾಜಭವನದಲ್ಲಿ ಸುಮಾರು ಒಂದು ತಾಸಿನವರೆಗೂ ನಡೆದ ಸಭೆಯ ಬಳಿಕ ಮಮತಾ ಬ್ಯಾನರ್ಜಿ ತಿಳಿಸಿದರು. </p><p>ಯಾವುದೇ ಟೀಕೆ, ಸಂಘರ್ಷಗಳು ಇರಬಾರದು. ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಭಿನ್ನಮತವಿದೆ ಎಂದು ಹಲವರು ಹೇಳುತ್ತಾರೆ. ಆದರೆ ಇದು ಸತ್ಯವಲ್ಲ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. </p><p>ವಿಶ್ವವಿದ್ಯಾಲಯಗಳಲ್ಲಿ ಉಪಕುಲಪತಿಗಳ ನೇಮಕ ಸೇರಿದಂತೆ ಹಲವು ವಿಷಯಗಳಲ್ಲಿ ರಾಜ್ಯಪಾಲರು ಮತ್ತು ಮಮತಾ ಬ್ಯಾನರ್ಜಿ ಸರ್ಕಾರದ ನಡುವೆ ತಿಕ್ಕಾಟ ಉಂಟಾಗಿತ್ತು. ವಿಸಿ ನೇಮಕಾತಿ ಮುನ್ನ ರಾಜ್ಯಪಾಲರು ಸಮಾಲೋಚನೆ ಮಾಡಿಲ್ಲ. ರಾಜ್ಯ ಶಿಕ್ಷಣ ವ್ಯವಸ್ಥೆಯಲ್ಲಿ ರಾಜ್ಯಪಾಲರ ಹಸ್ತಕ್ಷೇಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>