<p><strong>ಶಿಲ್ಲಾಂಗ್:</strong> ಮೇಘಾಲಯಕ್ಕೆ ಹನಿಮೂನ್ಗೆ ತೆರಳಿದ್ದ ವೇಳೆ ಪತಿ ರಾಜ ರಘುವಂಶಿ ಅವರನ್ನು ಕೊಲೆ ಮಾಡಿದ ಆರೋಪ ಹೊತ್ತಿರುವ ಸೋನಮ್ ರಘುವಂಶಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.</p>.<p>ಸೊಹ್ರಾ ಉಪವಿಭಾಗದ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 17ಕ್ಕೆ ನಿಗದಿಪಡಿಸಿದೆ.</p>.<p>ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ತುಷಾರ್ ಚಂದ್ರ ಮಾತನಾಡಿ, ಶುಕ್ರವಾರ ಜಾಮೀನು ಅರ್ಜಿ ಸಲ್ಲಿಸಲಾಗಿದೆ. ಆದರೆ ಪ್ರಕರಣದ ದಾಖಲೆಗಳನ್ನು ಪರಿಶೀಲಿಸಲು ಪ್ರಾಸಿಕ್ಯೂಷನ್ ಸಮಯ ಕೇಳಿದೆ ಎಂದಿದ್ದಾರೆ.</p>.<p>ರಾಜ ರಘುವಂಶಿ ಹತ್ಯೆ ಪ್ರಕರಣ ಸಂಬಂಧ ಸಲ್ಲಿಸಲಾದ ಆರೋಪ ಪಟ್ಟಿಯಲ್ಲಿ ದೋಷಗಳಿವೆ ಎಂದು ಸೋನಮ್ ಪರ ವಕೀಲರು ಪ್ರತಿಪಾದಿಸಿದ್ದಾರೆ.</p>.Honeymoon in Shillong | ಹನಿಮೂನ್ ಹತ್ಯೆ: ಚಿತ್ರ ನಿರ್ಮಿಸಲು ಕುಟುಂಬ ಒಪ್ಪಿಗೆ.<h2>ಪ್ರಕರಣದ ಹಿನ್ನೆಲೆ</h2>.<p>ಇಂದೋರ್ ಮೂಲದ ಸಾರಿಗೆ ಉದ್ಯಮಿ ರಾಜ ರಘುವಂಶಿ, ಸೋನಮ್ ಅವರನ್ನು ಮೇ 11ರಂದು ವಿವಾಹವಾಗಿದ್ದರು. ಮಧುಚಂದ್ರಕ್ಕಾಗಿ ದಂಪತಿ ಮೇಘಾಲಯಕ್ಕೆ ತೆರಳಿದ್ದರು. ಮೇ 23ರಂದು ಇವರು ನಾಪತ್ತೆಯಾಗಿದ್ದರು. ಜೂನ್ 2ರಂದು ರಘುವಂಶಿ ಅವರ ಶವ ಶಿಲ್ಲಾಂಗ್ ಸಮೀಪದ ಜಲಪಾತದ ಕಮರಿಯಲ್ಲಿ ಪತ್ತೆಯಾಗಿತ್ತು. </p>.<p>ಬಳಿಕ ಪೊಲೀಸರು ಸೋನಮ್ಗಾಗಿ ಶೋಧ ಮುಂದುವರಿಸಿದ್ದರು. ಜೂನ್ 9ರಂದು ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿತ್ತು. ಉತ್ತರ ಪ್ರದೇಶದ ಗಾಜಿಪುರದ ನಂದಗಂಜ್ ಪೊಲೀಸ್ ಠಾಣೆಯಲ್ಲಿ ಸೋನಮ್ ಪೊಲೀಸರಿಗೆ ಶರಣಾಗಿದ್ದರು.</p>.ಮೇಘಾಲಯ ಹನಿಮೂನ್ ದುರಂತ | ಕಮರಿಯಲ್ಲಿ ಸಿಕ್ಕ ಪತಿ ಶವ, ಪತ್ನಿ ನಿಗೂಢ ನಾಪತ್ತೆ!.<p>ಸೋನಮ್ ಮತ್ತು ಆಕೆಯ ಪ್ರಿಯಕರ ರಾಜ್ ಕುಶ್ವಾಹ ರಾಜ ರಘುವಂಶಿ ಹತ್ಯೆಗೆ ಯೋಜನೆ ರೂಪಿಸಿದ್ದರು ಎಂದು ಆರೋಪಿಸಲಾಗಿದೆ.</p>.<p>ಪ್ರಕರಣ ಸಂಬಂಧ ಸೋನಮ್, ಆಕೆಯ ಪ್ರಿಯಕರ ರಾಜ್ ಕುಶ್ವಾಹ, ವಿಶಾಲ್, ಆಕಾಶ್, ಆನಂದ್ ಸೇರಿದಂತೆ ಒಟ್ಟು 8 ಜನರನ್ನು ಪೊಲೀಸರು ಬಂಧಿಸಿದ್ದರು.</p>.<p>ಕಳೆದ ವಾರ, ಪೊಲೀಸರು ಆರೋಪಿಗಳ ವಿರುದ್ಧ 790 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದರು.</p>.ಮೇಘಾಲಯ ‘ಹನಿಮೂನ್’ ಹತ್ಯೆ ಕೇಸ್: ಪ್ರಕರಣ ಭೇದಿಸಲು ನೆರವಾದ ಟೂರಿಸ್ಟ್ ಗೈಡ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಲ್ಲಾಂಗ್:</strong> ಮೇಘಾಲಯಕ್ಕೆ ಹನಿಮೂನ್ಗೆ ತೆರಳಿದ್ದ ವೇಳೆ ಪತಿ ರಾಜ ರಘುವಂಶಿ ಅವರನ್ನು ಕೊಲೆ ಮಾಡಿದ ಆರೋಪ ಹೊತ್ತಿರುವ ಸೋನಮ್ ರಘುವಂಶಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.</p>.<p>ಸೊಹ್ರಾ ಉಪವಿಭಾಗದ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 17ಕ್ಕೆ ನಿಗದಿಪಡಿಸಿದೆ.</p>.<p>ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ತುಷಾರ್ ಚಂದ್ರ ಮಾತನಾಡಿ, ಶುಕ್ರವಾರ ಜಾಮೀನು ಅರ್ಜಿ ಸಲ್ಲಿಸಲಾಗಿದೆ. ಆದರೆ ಪ್ರಕರಣದ ದಾಖಲೆಗಳನ್ನು ಪರಿಶೀಲಿಸಲು ಪ್ರಾಸಿಕ್ಯೂಷನ್ ಸಮಯ ಕೇಳಿದೆ ಎಂದಿದ್ದಾರೆ.</p>.<p>ರಾಜ ರಘುವಂಶಿ ಹತ್ಯೆ ಪ್ರಕರಣ ಸಂಬಂಧ ಸಲ್ಲಿಸಲಾದ ಆರೋಪ ಪಟ್ಟಿಯಲ್ಲಿ ದೋಷಗಳಿವೆ ಎಂದು ಸೋನಮ್ ಪರ ವಕೀಲರು ಪ್ರತಿಪಾದಿಸಿದ್ದಾರೆ.</p>.Honeymoon in Shillong | ಹನಿಮೂನ್ ಹತ್ಯೆ: ಚಿತ್ರ ನಿರ್ಮಿಸಲು ಕುಟುಂಬ ಒಪ್ಪಿಗೆ.<h2>ಪ್ರಕರಣದ ಹಿನ್ನೆಲೆ</h2>.<p>ಇಂದೋರ್ ಮೂಲದ ಸಾರಿಗೆ ಉದ್ಯಮಿ ರಾಜ ರಘುವಂಶಿ, ಸೋನಮ್ ಅವರನ್ನು ಮೇ 11ರಂದು ವಿವಾಹವಾಗಿದ್ದರು. ಮಧುಚಂದ್ರಕ್ಕಾಗಿ ದಂಪತಿ ಮೇಘಾಲಯಕ್ಕೆ ತೆರಳಿದ್ದರು. ಮೇ 23ರಂದು ಇವರು ನಾಪತ್ತೆಯಾಗಿದ್ದರು. ಜೂನ್ 2ರಂದು ರಘುವಂಶಿ ಅವರ ಶವ ಶಿಲ್ಲಾಂಗ್ ಸಮೀಪದ ಜಲಪಾತದ ಕಮರಿಯಲ್ಲಿ ಪತ್ತೆಯಾಗಿತ್ತು. </p>.<p>ಬಳಿಕ ಪೊಲೀಸರು ಸೋನಮ್ಗಾಗಿ ಶೋಧ ಮುಂದುವರಿಸಿದ್ದರು. ಜೂನ್ 9ರಂದು ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿತ್ತು. ಉತ್ತರ ಪ್ರದೇಶದ ಗಾಜಿಪುರದ ನಂದಗಂಜ್ ಪೊಲೀಸ್ ಠಾಣೆಯಲ್ಲಿ ಸೋನಮ್ ಪೊಲೀಸರಿಗೆ ಶರಣಾಗಿದ್ದರು.</p>.ಮೇಘಾಲಯ ಹನಿಮೂನ್ ದುರಂತ | ಕಮರಿಯಲ್ಲಿ ಸಿಕ್ಕ ಪತಿ ಶವ, ಪತ್ನಿ ನಿಗೂಢ ನಾಪತ್ತೆ!.<p>ಸೋನಮ್ ಮತ್ತು ಆಕೆಯ ಪ್ರಿಯಕರ ರಾಜ್ ಕುಶ್ವಾಹ ರಾಜ ರಘುವಂಶಿ ಹತ್ಯೆಗೆ ಯೋಜನೆ ರೂಪಿಸಿದ್ದರು ಎಂದು ಆರೋಪಿಸಲಾಗಿದೆ.</p>.<p>ಪ್ರಕರಣ ಸಂಬಂಧ ಸೋನಮ್, ಆಕೆಯ ಪ್ರಿಯಕರ ರಾಜ್ ಕುಶ್ವಾಹ, ವಿಶಾಲ್, ಆಕಾಶ್, ಆನಂದ್ ಸೇರಿದಂತೆ ಒಟ್ಟು 8 ಜನರನ್ನು ಪೊಲೀಸರು ಬಂಧಿಸಿದ್ದರು.</p>.<p>ಕಳೆದ ವಾರ, ಪೊಲೀಸರು ಆರೋಪಿಗಳ ವಿರುದ್ಧ 790 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದರು.</p>.ಮೇಘಾಲಯ ‘ಹನಿಮೂನ್’ ಹತ್ಯೆ ಕೇಸ್: ಪ್ರಕರಣ ಭೇದಿಸಲು ನೆರವಾದ ಟೂರಿಸ್ಟ್ ಗೈಡ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>