<p><strong>ಇಂದೋರ್ (ಮಧ್ಯಪ್ರದೇಶ):</strong> ಮೇಘಾಲಯ ಹನಿಮೂನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಮ್ ಮತ್ತು ಆಕೆಯ ಪ್ರಿಯಕರ ರಾಜ್ನನ್ನು ಮಂಪರು ಪರೀಕ್ಷೆಗೆ ಒಳಪಡಿಸುವಂತೆ ಕೋರಿ ಹತ್ಯೆಗೀಡಾದ ಇಂದೋರ್ ಉದ್ಯಮಿ ರಾಜಾ ರಘುವಂಶಿ ಅವರ ಹಿರಿಯ ಸಹೋದರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. </p><p>ನನ್ನ ಸಹೋದರನ ಕೊಲೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಹಾಗಾಗಿ ಸೋನಮ್ ಮತ್ತು ರಾಜ್ನನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯಾಂಶ ಹೊರಬರುತ್ತದೆ ಎಂದು ರಾಜಾ ರಘುವಂಶಿ ಅವರ ಹಿರಿಯ ಸಹೋದರ ವಿಪಿನ್ ರಘುವಂಶಿ ಹೇಳಿದ್ದಾರೆ.</p><p>ರಾಜಾ ರಘುವಂಶಿ–ಸೋನಮ್ ಮೇ 1ರಂದು ವಿವಾಹವಾಗಿದ್ದರು. ಮಧುಚಂದ್ರಕ್ಕಾಗಿ ಮೇಘಾಲಯಕ್ಕೆ ತೆರಳಿದ್ದಾಗ ಮೇ 23ರಿಂದ ದಂಪತಿ ನಾಪತ್ತೆಯಾಗಿದ್ದರು. ಜೂನ್ 2ರಂದು ರಘುವಂಶಿ ಅವರ ಶವ ಶಿಲ್ಲಾಂಗ್ ಸಮೀಪದ ಜಲಪಾತದ ಕಮರಿಯಲ್ಲಿ ಸಿಕ್ಕಿತ್ತು. </p><p>ರಘುವಂಶಿ ಅವರ ಹತ್ಯೆಗೆ ಸಂಚು ನಡೆಸಿದ ಆರೋಪದ ಮೇಲೆ ಸೋನಮ್, ಆಕೆಯ ಪ್ರಿಯಕರ ರಾಜ್, ವಿಶಾಲ್, ಆಕಾಶ್, ಆನಂದ್ ಸೇರಿದಂತೆ ಒಟ್ಟು ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ.</p><p>ಈಚೆಗೆ ಮೇಘಾಲಯದ ನ್ಯಾಯಾಲಯವು ಆರೋಪಿಗಳನ್ನು 13 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.</p>.ರಾಜಾ ರಘುವಂಶಿ ಹತ್ಯೆ ಪ್ರಕರಣ: ಮಧ್ಯಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಬಂಧನ.ರಾಜಾ ರಘುವಂಶಿ ಹತ್ಯೆ: ಆರೋಪಿಗಳಿಗೆ ನ್ಯಾಯಾಂಗ ಬಂಧನ.ರಾಜಾ ರಘುವಂಶಿ ಕೊಲೆ ಪ್ರಕರಣ: ಸೋನಮ್ ಕುಟುಂಬಸ್ಥರ ವಿಚಾರಣೆ .Meghalaya murder | ರಾಜಾ ರಘುವಂಶಿ ಕೊಲೆ; ಕೃತ್ಯದ ಮರುಸೃಷ್ಟಿ.ಸೋನಮ್ ನನ್ನ ಮಗನಿಗೆ ಮಾಟ–ಮಂತ್ರ ಮಾಡಿಸಿರಬಹುದು: ರಾಜಾ ರಘುವಂಶಿ ತಂದೆ ಅನುಮಾನ.Honeymoon Murder: ರಾಜ ರಘುವಂಶಿ ಅಂತ್ಯಕ್ರಿಯೆಗೆ ಜನರನ್ನು ಕರೆದೊಯ್ದಿದ್ದ ಆರೋಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್ (ಮಧ್ಯಪ್ರದೇಶ):</strong> ಮೇಘಾಲಯ ಹನಿಮೂನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಮ್ ಮತ್ತು ಆಕೆಯ ಪ್ರಿಯಕರ ರಾಜ್ನನ್ನು ಮಂಪರು ಪರೀಕ್ಷೆಗೆ ಒಳಪಡಿಸುವಂತೆ ಕೋರಿ ಹತ್ಯೆಗೀಡಾದ ಇಂದೋರ್ ಉದ್ಯಮಿ ರಾಜಾ ರಘುವಂಶಿ ಅವರ ಹಿರಿಯ ಸಹೋದರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. </p><p>ನನ್ನ ಸಹೋದರನ ಕೊಲೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಹಾಗಾಗಿ ಸೋನಮ್ ಮತ್ತು ರಾಜ್ನನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯಾಂಶ ಹೊರಬರುತ್ತದೆ ಎಂದು ರಾಜಾ ರಘುವಂಶಿ ಅವರ ಹಿರಿಯ ಸಹೋದರ ವಿಪಿನ್ ರಘುವಂಶಿ ಹೇಳಿದ್ದಾರೆ.</p><p>ರಾಜಾ ರಘುವಂಶಿ–ಸೋನಮ್ ಮೇ 1ರಂದು ವಿವಾಹವಾಗಿದ್ದರು. ಮಧುಚಂದ್ರಕ್ಕಾಗಿ ಮೇಘಾಲಯಕ್ಕೆ ತೆರಳಿದ್ದಾಗ ಮೇ 23ರಿಂದ ದಂಪತಿ ನಾಪತ್ತೆಯಾಗಿದ್ದರು. ಜೂನ್ 2ರಂದು ರಘುವಂಶಿ ಅವರ ಶವ ಶಿಲ್ಲಾಂಗ್ ಸಮೀಪದ ಜಲಪಾತದ ಕಮರಿಯಲ್ಲಿ ಸಿಕ್ಕಿತ್ತು. </p><p>ರಘುವಂಶಿ ಅವರ ಹತ್ಯೆಗೆ ಸಂಚು ನಡೆಸಿದ ಆರೋಪದ ಮೇಲೆ ಸೋನಮ್, ಆಕೆಯ ಪ್ರಿಯಕರ ರಾಜ್, ವಿಶಾಲ್, ಆಕಾಶ್, ಆನಂದ್ ಸೇರಿದಂತೆ ಒಟ್ಟು ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ.</p><p>ಈಚೆಗೆ ಮೇಘಾಲಯದ ನ್ಯಾಯಾಲಯವು ಆರೋಪಿಗಳನ್ನು 13 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.</p>.ರಾಜಾ ರಘುವಂಶಿ ಹತ್ಯೆ ಪ್ರಕರಣ: ಮಧ್ಯಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಬಂಧನ.ರಾಜಾ ರಘುವಂಶಿ ಹತ್ಯೆ: ಆರೋಪಿಗಳಿಗೆ ನ್ಯಾಯಾಂಗ ಬಂಧನ.ರಾಜಾ ರಘುವಂಶಿ ಕೊಲೆ ಪ್ರಕರಣ: ಸೋನಮ್ ಕುಟುಂಬಸ್ಥರ ವಿಚಾರಣೆ .Meghalaya murder | ರಾಜಾ ರಘುವಂಶಿ ಕೊಲೆ; ಕೃತ್ಯದ ಮರುಸೃಷ್ಟಿ.ಸೋನಮ್ ನನ್ನ ಮಗನಿಗೆ ಮಾಟ–ಮಂತ್ರ ಮಾಡಿಸಿರಬಹುದು: ರಾಜಾ ರಘುವಂಶಿ ತಂದೆ ಅನುಮಾನ.Honeymoon Murder: ರಾಜ ರಘುವಂಶಿ ಅಂತ್ಯಕ್ರಿಯೆಗೆ ಜನರನ್ನು ಕರೆದೊಯ್ದಿದ್ದ ಆರೋಪಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>