<p><strong>ಕೋಲ್ಕತ್ತ</strong>: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುವ ಬಗ್ಗೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೆಘವಾಲ್ ವಿಶ್ವಾಸ ವ್ಯಕ್ತಪಡಿಸಿದ್ದು, ಈಗಾಗಲೇ ಕೆಲವು ರಾಜ್ಯಗಳು ಅನುಷ್ಠಾನಕ್ಕೆ ಮುಂದಾಗಿವೆ ಎಂದು ಭಾನುವಾರ ಹೇಳಿದ್ದಾರೆ.</p>.<p>ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ‘ಯುಸಿಸಿ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲೇ ಉಲ್ಲೇಖಿಸಿದ್ದೇವೆ. ಗೋವಾ, ಉತ್ತರಾಖಂಡ ರಾಜ್ಯಗಳು ಅನುಷ್ಠಾನಕ್ಕೆ ಮುಂದಾಗಿವೆ. ಕೇಂದ್ರದಲ್ಲಿ ಪ್ರಬಲ ಸಮ್ಮಿಶ್ರ ಸರ್ಕಾರವಿದ್ದು, ಅದರ ಬಗ್ಗೆ ಚಿಂತಿಸಬೇಕಿಲ್ಲ’ ಎಂದು ಅವರು ಹೇಳಿದರು.</p>.<p>ಮೆಘವಾಲ್ ಅವರು ಕಳೆದ ವಾರ ಯುಸಿಸಿ ‘ಬಿಜೆಪಿಯ ಅಜೆಂಡಾ’ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಜೆಡಿಯು ಮುಖಂಡ ಕೆ.ಸಿ. ತ್ಯಾಗಿ, ‘ಏಕರೂಪ ನಾಗರಿಕ ಸಂಹಿತೆಗೆ ನಮ್ಮ ವಿರೋಧವಿಲ್ಲ. ಆದರೆ ಒಮ್ಮತದಿಂದ ಅನುಷ್ಠಾನಗೊಳ್ಳಬೇಕು’ ಎಂದು ಹೇಳಿದ್ದರು.</p>.<p><strong>ಚುನಾವಣೋತ್ತರ ಹಿಂಸಾಚಾರ–ಟೀಕೆ</strong>: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರವನ್ನು ಕೇಂದ್ರ ಕಾನೂನು ಸಚಿವರು ಟೀಕಿಸಿದ್ದು, ಕೇಂದ್ರ ಸರ್ಕಾರವು ಈ ಬಗ್ಗೆ ಎಚ್ಚರ ವಹಿಸಿದೆ ಎಂದಿದ್ದಾರೆ.</p>.<p>‘ಪ್ರಜಾಪ್ರಭುತ್ವದಲ್ಲಿ ಚುನಾವಣೆಯು ಮಹತ್ವದ ಭಾಗ. ಭಾರತದಂತಹ ಪ್ರಜಾಪ್ರಭುತ್ವ ದೇಶಕ್ಕೆ ಚುನಾವಣೋತ್ತರ ಹಿಂಸಾಚಾರ ಆರೋಗ್ಯಕರವಲ್ಲ. ಚುನಾವಣೆ ಮುಗಿದ ನಂತರ ಯಾವುದೇ ಹಿಂಸಾಚಾರ ನಡೆಯಬಾರದು ಎಂದು ತಿಳಿಸಿದ್ದಾರೆ.</p>.<p><strong>ಸಮಿತಿ ರಚನೆ:</strong> ಪಶ್ಚಿಮ ಬಂಗಾಳದಲ್ಲಿ ನಡೆದ ರಾಜಕೀಯ ಹಿಂಸಾಚಾರದ ಬಗ್ಗೆ ಪರಿಶೀಲಿಸಲು ಬಿಜೆಪಿಯು ಶನಿವಾರ ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಿದ್ದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೂಕಪ್ರೇಕಕರಾಗಿದ್ದಾರೆ ಎಂದು ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುವ ಬಗ್ಗೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೆಘವಾಲ್ ವಿಶ್ವಾಸ ವ್ಯಕ್ತಪಡಿಸಿದ್ದು, ಈಗಾಗಲೇ ಕೆಲವು ರಾಜ್ಯಗಳು ಅನುಷ್ಠಾನಕ್ಕೆ ಮುಂದಾಗಿವೆ ಎಂದು ಭಾನುವಾರ ಹೇಳಿದ್ದಾರೆ.</p>.<p>ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ‘ಯುಸಿಸಿ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲೇ ಉಲ್ಲೇಖಿಸಿದ್ದೇವೆ. ಗೋವಾ, ಉತ್ತರಾಖಂಡ ರಾಜ್ಯಗಳು ಅನುಷ್ಠಾನಕ್ಕೆ ಮುಂದಾಗಿವೆ. ಕೇಂದ್ರದಲ್ಲಿ ಪ್ರಬಲ ಸಮ್ಮಿಶ್ರ ಸರ್ಕಾರವಿದ್ದು, ಅದರ ಬಗ್ಗೆ ಚಿಂತಿಸಬೇಕಿಲ್ಲ’ ಎಂದು ಅವರು ಹೇಳಿದರು.</p>.<p>ಮೆಘವಾಲ್ ಅವರು ಕಳೆದ ವಾರ ಯುಸಿಸಿ ‘ಬಿಜೆಪಿಯ ಅಜೆಂಡಾ’ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಜೆಡಿಯು ಮುಖಂಡ ಕೆ.ಸಿ. ತ್ಯಾಗಿ, ‘ಏಕರೂಪ ನಾಗರಿಕ ಸಂಹಿತೆಗೆ ನಮ್ಮ ವಿರೋಧವಿಲ್ಲ. ಆದರೆ ಒಮ್ಮತದಿಂದ ಅನುಷ್ಠಾನಗೊಳ್ಳಬೇಕು’ ಎಂದು ಹೇಳಿದ್ದರು.</p>.<p><strong>ಚುನಾವಣೋತ್ತರ ಹಿಂಸಾಚಾರ–ಟೀಕೆ</strong>: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರವನ್ನು ಕೇಂದ್ರ ಕಾನೂನು ಸಚಿವರು ಟೀಕಿಸಿದ್ದು, ಕೇಂದ್ರ ಸರ್ಕಾರವು ಈ ಬಗ್ಗೆ ಎಚ್ಚರ ವಹಿಸಿದೆ ಎಂದಿದ್ದಾರೆ.</p>.<p>‘ಪ್ರಜಾಪ್ರಭುತ್ವದಲ್ಲಿ ಚುನಾವಣೆಯು ಮಹತ್ವದ ಭಾಗ. ಭಾರತದಂತಹ ಪ್ರಜಾಪ್ರಭುತ್ವ ದೇಶಕ್ಕೆ ಚುನಾವಣೋತ್ತರ ಹಿಂಸಾಚಾರ ಆರೋಗ್ಯಕರವಲ್ಲ. ಚುನಾವಣೆ ಮುಗಿದ ನಂತರ ಯಾವುದೇ ಹಿಂಸಾಚಾರ ನಡೆಯಬಾರದು ಎಂದು ತಿಳಿಸಿದ್ದಾರೆ.</p>.<p><strong>ಸಮಿತಿ ರಚನೆ:</strong> ಪಶ್ಚಿಮ ಬಂಗಾಳದಲ್ಲಿ ನಡೆದ ರಾಜಕೀಯ ಹಿಂಸಾಚಾರದ ಬಗ್ಗೆ ಪರಿಶೀಲಿಸಲು ಬಿಜೆಪಿಯು ಶನಿವಾರ ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಿದ್ದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೂಕಪ್ರೇಕಕರಾಗಿದ್ದಾರೆ ಎಂದು ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>