<p><strong>ಶ್ರೀನಗರ</strong>: ‘ಸರ್ಕಾರ ನನ್ನನ್ನು ಗೃಹಬಂಧನದಲ್ಲಿರಿಸಿದೆ’ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ ಆರೋಪಿಸಿದ್ದಾರೆ.</p>.<p>‘ಕಳೆದ ಡಿಸೆಂಬರ್ನಲ್ಲಿ ಪರಿಂಪೋರಾ ಪ್ರದೇಶದಲ್ಲಿ ನಡೆದ ನಕಲಿ ಎನ್ಕೌಂಟರ್ನಲ್ಲಿ ಹತ್ಯೆಗೀಡಾದ ಮೂವರು ಶಂಕಿತ ಉಗ್ರರಲ್ಲಿ ಒಬ್ಬನಾದ ಅಥರ್ ಮುಷ್ತಾಕ್ ಕುಟುಂಬದವರನ್ನು ಭೇಟಿಯಾಗಬಾರದೆಂಬ ಕಾರಣಕ್ಕೆ ನನ್ನನ್ನು ಗೃಹ ಬಂಧನದಲ್ಲಿ ಇಡಲಾಗಿದೆ’ ಎಂದು ಅವರು ದೂರಿದ್ದಾರೆ.</p>.<p>‘ಅಥರ್ ಮುಷ್ತಾಕ್ನ ಮೃತದೇಹವನ್ನು ಹಸ್ತಾಂತರಿಸುವಂತೆ ಮನವಿ ಮಾಡಿದ ಅಥರ್ನ ತಂದೆಯ ವಿರುದ್ಧವೂ ಯುಎಪಿಎ ಅಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಮೆಹಬೂಬ ಮುಫ್ತಿ ಅವರು ಟ್ವೀಟ್ ಮಾಡಿದ್ದಾರೆ.</p>.<p>ಇದರೊಂದಿಗೆ ತಮ್ಮ ಮನೆಯ ಮುಂದೆ ನಿಯೋಜಿಸಲಾದ ಭದ್ರತಾ ಸಿಬ್ಬಂದಿಯೊಂದಿಗಿನ ಸಂವಾದದ ವಿಡಿಯೊವೊಂದನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.</p>.<p>‘ಕಾಶ್ಮೀರದಲ್ಲಿ ನಡೆಯುತ್ತಿರುವ ದಬ್ಬಾಳಿಕೆಯ ಆಡಳಿತವನ್ನು ಮರೆಮಾಚಲು ಭಾರತ ಸರ್ಕಾರ ಪ್ರಯತ್ನಿಸುತ್ತಿದೆ. 16 ವರ್ಷದ ಯುವಕನನ್ನು ಹತ್ಯೆಗೈದು, ಆತುರದಲ್ಲಿ ಆತನ ದೇಹವನ್ನು ಮಣ್ಣು ಮಾಡಲಾಯಿತು. ಆತನ ಕುಟುಂಬದವರಿಗೆ ಅಂತಿಮ ವಿಧಿವಿಧಾನಗಳನ್ನು ಮಾಡಲು ಕೂಡ ಅವಕಾಶ ನೀಡಲಾಗಿಲ್ಲ’ಎಂದು ಅವರು ಟ್ವಿಟರ್ನಲ್ಲಿ ದೂರಿದ್ದಾರೆ.</p>.<p>‘ನನ್ನನ್ನು ಯಾಕೆ ಅವರ ಮನೆಗೆ ತೆರಳಲು ಬಿಡುತ್ತಿಲ್ಲ. ನಾನು ಕೈದಿಯೇ ಅಥವಾ ಅಪರಾಧಿಯೇ? ಮತ್ಯಾಕೆ ನನ್ನನ್ನು ತಡೆಯಲಾಗುತ್ತಿದೆ. ಇದಕ್ಕೆ ಸಂಬಂಧಿಸಿದ ಆದೇಶಗಳು ಎಲ್ಲಿವೆ?. ನನ್ನನ್ನು ಯಾಕೆ ಬಂಧಿಸಲಾಗಿದೆ’ ಎಂದು ಅವರು ಅಧಿಕಾರಿಗಳಲ್ಲಿ ಪ್ರಶ್ನಿಸಿದ್ದಾರೆ.</p>.<p>‘ತನ್ನ ಮನೆಯ ಗೇಟ್ಗೆ ಬೀಗ ಹಾಕಲಾಗಿದೆ. ಅಲ್ಲದೆ ತಾನು ಮನೆಯಿಂದ ಹೊರ ಹೋಗದಂತೆ ತಡೆಯಲು ಮನೆಯ ಮುಂದೆ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p class="title">‘ಭದ್ರತೆಯ ಸಮಸ್ಯೆ ಇದೆ. ಹೀಗಾಗಿ, ಹೊರಗೆ ಹೋಗುವುದು ಬೇಡ’ ಎಂದು ಭದ್ರತಾ ಅಧಿಕಾರಿಗಳು ಹೇಳುತ್ತಿರುವ ದೃಶ್ಯ ವಿಡಿಯೊದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ‘ಸರ್ಕಾರ ನನ್ನನ್ನು ಗೃಹಬಂಧನದಲ್ಲಿರಿಸಿದೆ’ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ ಆರೋಪಿಸಿದ್ದಾರೆ.</p>.<p>‘ಕಳೆದ ಡಿಸೆಂಬರ್ನಲ್ಲಿ ಪರಿಂಪೋರಾ ಪ್ರದೇಶದಲ್ಲಿ ನಡೆದ ನಕಲಿ ಎನ್ಕೌಂಟರ್ನಲ್ಲಿ ಹತ್ಯೆಗೀಡಾದ ಮೂವರು ಶಂಕಿತ ಉಗ್ರರಲ್ಲಿ ಒಬ್ಬನಾದ ಅಥರ್ ಮುಷ್ತಾಕ್ ಕುಟುಂಬದವರನ್ನು ಭೇಟಿಯಾಗಬಾರದೆಂಬ ಕಾರಣಕ್ಕೆ ನನ್ನನ್ನು ಗೃಹ ಬಂಧನದಲ್ಲಿ ಇಡಲಾಗಿದೆ’ ಎಂದು ಅವರು ದೂರಿದ್ದಾರೆ.</p>.<p>‘ಅಥರ್ ಮುಷ್ತಾಕ್ನ ಮೃತದೇಹವನ್ನು ಹಸ್ತಾಂತರಿಸುವಂತೆ ಮನವಿ ಮಾಡಿದ ಅಥರ್ನ ತಂದೆಯ ವಿರುದ್ಧವೂ ಯುಎಪಿಎ ಅಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಮೆಹಬೂಬ ಮುಫ್ತಿ ಅವರು ಟ್ವೀಟ್ ಮಾಡಿದ್ದಾರೆ.</p>.<p>ಇದರೊಂದಿಗೆ ತಮ್ಮ ಮನೆಯ ಮುಂದೆ ನಿಯೋಜಿಸಲಾದ ಭದ್ರತಾ ಸಿಬ್ಬಂದಿಯೊಂದಿಗಿನ ಸಂವಾದದ ವಿಡಿಯೊವೊಂದನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.</p>.<p>‘ಕಾಶ್ಮೀರದಲ್ಲಿ ನಡೆಯುತ್ತಿರುವ ದಬ್ಬಾಳಿಕೆಯ ಆಡಳಿತವನ್ನು ಮರೆಮಾಚಲು ಭಾರತ ಸರ್ಕಾರ ಪ್ರಯತ್ನಿಸುತ್ತಿದೆ. 16 ವರ್ಷದ ಯುವಕನನ್ನು ಹತ್ಯೆಗೈದು, ಆತುರದಲ್ಲಿ ಆತನ ದೇಹವನ್ನು ಮಣ್ಣು ಮಾಡಲಾಯಿತು. ಆತನ ಕುಟುಂಬದವರಿಗೆ ಅಂತಿಮ ವಿಧಿವಿಧಾನಗಳನ್ನು ಮಾಡಲು ಕೂಡ ಅವಕಾಶ ನೀಡಲಾಗಿಲ್ಲ’ಎಂದು ಅವರು ಟ್ವಿಟರ್ನಲ್ಲಿ ದೂರಿದ್ದಾರೆ.</p>.<p>‘ನನ್ನನ್ನು ಯಾಕೆ ಅವರ ಮನೆಗೆ ತೆರಳಲು ಬಿಡುತ್ತಿಲ್ಲ. ನಾನು ಕೈದಿಯೇ ಅಥವಾ ಅಪರಾಧಿಯೇ? ಮತ್ಯಾಕೆ ನನ್ನನ್ನು ತಡೆಯಲಾಗುತ್ತಿದೆ. ಇದಕ್ಕೆ ಸಂಬಂಧಿಸಿದ ಆದೇಶಗಳು ಎಲ್ಲಿವೆ?. ನನ್ನನ್ನು ಯಾಕೆ ಬಂಧಿಸಲಾಗಿದೆ’ ಎಂದು ಅವರು ಅಧಿಕಾರಿಗಳಲ್ಲಿ ಪ್ರಶ್ನಿಸಿದ್ದಾರೆ.</p>.<p>‘ತನ್ನ ಮನೆಯ ಗೇಟ್ಗೆ ಬೀಗ ಹಾಕಲಾಗಿದೆ. ಅಲ್ಲದೆ ತಾನು ಮನೆಯಿಂದ ಹೊರ ಹೋಗದಂತೆ ತಡೆಯಲು ಮನೆಯ ಮುಂದೆ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p class="title">‘ಭದ್ರತೆಯ ಸಮಸ್ಯೆ ಇದೆ. ಹೀಗಾಗಿ, ಹೊರಗೆ ಹೋಗುವುದು ಬೇಡ’ ಎಂದು ಭದ್ರತಾ ಅಧಿಕಾರಿಗಳು ಹೇಳುತ್ತಿರುವ ದೃಶ್ಯ ವಿಡಿಯೊದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>