<p><strong>ಶ್ರೀನಗರ:</strong> ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಗುರುವಾರ ಇಲ್ಲಿನ ಜಾರಿ ನಿರ್ದೇಶನಾಲಯದ(ಇಡಿ) ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಬೆಳಿಗ್ಗೆ 11 ಗಂಟೆಗೆ ರಾಜ್ಬಾಗ್ನ ಜಾರಿ ನಿರ್ದೇಶನಾಲಯ ಕಚೇರಿ ತಲುಪಿದ ಮುಫ್ತಿ ಅವರು, ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.</p>.<p>ಇದಕ್ಕೂ ಮೊದಲು ಈ ಪ್ರಕರಣದ ವಿಚಾರಣೆಗಾಗಿ ದೆಹಲಿಗೆ ಬರುವಂತೆ ಇಡಿ ಅಧಿಕಾರಿಗಳು ಮೆಹಬೂಬಾ ಅವರಿಗೆ ನೋಟಿಸ್ ನೀಡಿದ್ದರು. ಆದರೆ, ದೆಹಲಿಯ ಬದಲು ಶ್ರೀನಗರದ ಕಚೇರಿಯಲ್ಲಿ ವಿಚಾರಣೆ ನಡೆಸುವಂತೆ ಕೋರಿ ಮುಫ್ತಿ ಅವರು ಮನವಿ ಸಲ್ಲಿಸಿದ್ದರು. ಮನವಿಯನ್ನು ಅಂಗೀಕರಿಸಿ, ಇಲ್ಲೇ ವಿಚಾರಣೆಗೆ ಅವಕಾಶ ಕಲ್ಪಿಸಲಾಯಿತು.</p>.<p>ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಒಂದು ವರ್ಷಕ್ಕೂ ಹೆಚ್ಚು ಕಾಲ ಗೃಹಬಂಧನದಲ್ಲಿದ್ದು ಬಿಡುಗಡೆಯಾಗಿರುವ 61 ವರ್ಷದ ಮೆಹಬೂಬಾ ಮುಫ್ತಿ ಅವರಿಗೆ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಕಚೇರಿ ನೋಟಿಸ್ ನೀಡಿತ್ತು.</p>.<p><strong>ಇದನ್ನೂ ಓದಿ... <a href="https://www.prajavani.net/india-news/sanjay-raut-says-issue-of-ex-mumbai-top-cops-letter-now-over-for-maha-vikas-aghadi-816351.html" target="_blank">ಮಹಾರಾಷ್ಟ್ರ ಗೃಹ ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪ ಮುಗಿದ ಅಧ್ಯಾಯ: ರಾವತ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಗುರುವಾರ ಇಲ್ಲಿನ ಜಾರಿ ನಿರ್ದೇಶನಾಲಯದ(ಇಡಿ) ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಬೆಳಿಗ್ಗೆ 11 ಗಂಟೆಗೆ ರಾಜ್ಬಾಗ್ನ ಜಾರಿ ನಿರ್ದೇಶನಾಲಯ ಕಚೇರಿ ತಲುಪಿದ ಮುಫ್ತಿ ಅವರು, ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.</p>.<p>ಇದಕ್ಕೂ ಮೊದಲು ಈ ಪ್ರಕರಣದ ವಿಚಾರಣೆಗಾಗಿ ದೆಹಲಿಗೆ ಬರುವಂತೆ ಇಡಿ ಅಧಿಕಾರಿಗಳು ಮೆಹಬೂಬಾ ಅವರಿಗೆ ನೋಟಿಸ್ ನೀಡಿದ್ದರು. ಆದರೆ, ದೆಹಲಿಯ ಬದಲು ಶ್ರೀನಗರದ ಕಚೇರಿಯಲ್ಲಿ ವಿಚಾರಣೆ ನಡೆಸುವಂತೆ ಕೋರಿ ಮುಫ್ತಿ ಅವರು ಮನವಿ ಸಲ್ಲಿಸಿದ್ದರು. ಮನವಿಯನ್ನು ಅಂಗೀಕರಿಸಿ, ಇಲ್ಲೇ ವಿಚಾರಣೆಗೆ ಅವಕಾಶ ಕಲ್ಪಿಸಲಾಯಿತು.</p>.<p>ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಒಂದು ವರ್ಷಕ್ಕೂ ಹೆಚ್ಚು ಕಾಲ ಗೃಹಬಂಧನದಲ್ಲಿದ್ದು ಬಿಡುಗಡೆಯಾಗಿರುವ 61 ವರ್ಷದ ಮೆಹಬೂಬಾ ಮುಫ್ತಿ ಅವರಿಗೆ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಕಚೇರಿ ನೋಟಿಸ್ ನೀಡಿತ್ತು.</p>.<p><strong>ಇದನ್ನೂ ಓದಿ... <a href="https://www.prajavani.net/india-news/sanjay-raut-says-issue-of-ex-mumbai-top-cops-letter-now-over-for-maha-vikas-aghadi-816351.html" target="_blank">ಮಹಾರಾಷ್ಟ್ರ ಗೃಹ ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪ ಮುಗಿದ ಅಧ್ಯಾಯ: ರಾವತ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>