<p><strong>ಶ್ರೀನಗರ:</strong> ಬಿಜೆಪಿ ನಾಯಕರದ್ದು ದ್ವಂದ್ವ ನೀತಿ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ವರಿಷ್ಠರಾದ ಮೆಹಬೂಬಾ ಮುಫ್ತಿ ಅವರು ಹರಿಹಾಯ್ದಿದ್ದಾರೆ.</p>.<p>‘ಮಧ್ಯಪ್ರಾಚ್ಯದ ಶೇಖ್ಗಳಿಗೆ ಕೆಂಪು ರತ್ನಗಂಬಳಿ ಹಾಸುವ ಕೇಸರಿ ಕಲಿಗಳು, ನಮ್ಮ ನೆಲದ ಸೂಫಿ ಸಂತ, ಕವಿ ಬಾಬಾ ಬುಲ್ಲೇಶಾ ಅವರ ದೇಗುಲ ನಾಶವನ್ನು ಸಂತೋಷದಿಂದ ಕಣ್ತುಂಬಿಕೊಳ್ಳುತ್ತಾರೆ’ ಎಂದು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಕಿಡಿಕಾರಿದ್ದಾರೆ.</p>.<p>ಬಿಜೆಪಿಯು ಉದ್ದೇಶಪೂರ್ವಕವಾಗಿ ದ್ವಂದ್ವ ನೀತಿ ಅಳವಡಿಸಿಕೊಂಡಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಯೂ ಆದ ಮುಫ್ತಿ ದೂರಿದ್ದಾರೆ.</p>.<p>‘ಈ ಕಪಟತೆಯು ಆಕಸ್ಮಿಕವಲ್ಲ. ಉದ್ದೇಶಪೂರ್ವಕವಾದದ್ದು. ಹೆಚ್ಚುತ್ತಿರುವ ಬಡತನ, ಸಾಮೂಹಿಕ ನಿರುದ್ಯೋಗ, ಯುವ ಪೀಳಿಗೆಯ ಭವಿಷ್ಯದ ಬಗ್ಗೆ ಉತ್ತರಿಸುವುದಕ್ಕಿಂತ ಸಾಮರಸ್ಯ ಹಾಳುಮಾಡುವುದು ಸುಲಭದ ಕೆಲಸವಾಗಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.</p>.<p>ಮಸ್ಸೂರಿಯಲ್ಲಿರುವ ಬಾಬಾ ಬುಲ್ಲೇಶಾ ಅವರ ದೇಗುಲವನ್ನು ಜ.24ರಂದು ಧ್ವಂಸಗೊಳಿಸಿರುವುದಕ್ಕೆ ಮೆಹಬೂಬಾ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಬಿಜೆಪಿ ನಾಯಕರದ್ದು ದ್ವಂದ್ವ ನೀತಿ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ವರಿಷ್ಠರಾದ ಮೆಹಬೂಬಾ ಮುಫ್ತಿ ಅವರು ಹರಿಹಾಯ್ದಿದ್ದಾರೆ.</p>.<p>‘ಮಧ್ಯಪ್ರಾಚ್ಯದ ಶೇಖ್ಗಳಿಗೆ ಕೆಂಪು ರತ್ನಗಂಬಳಿ ಹಾಸುವ ಕೇಸರಿ ಕಲಿಗಳು, ನಮ್ಮ ನೆಲದ ಸೂಫಿ ಸಂತ, ಕವಿ ಬಾಬಾ ಬುಲ್ಲೇಶಾ ಅವರ ದೇಗುಲ ನಾಶವನ್ನು ಸಂತೋಷದಿಂದ ಕಣ್ತುಂಬಿಕೊಳ್ಳುತ್ತಾರೆ’ ಎಂದು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಕಿಡಿಕಾರಿದ್ದಾರೆ.</p>.<p>ಬಿಜೆಪಿಯು ಉದ್ದೇಶಪೂರ್ವಕವಾಗಿ ದ್ವಂದ್ವ ನೀತಿ ಅಳವಡಿಸಿಕೊಂಡಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಯೂ ಆದ ಮುಫ್ತಿ ದೂರಿದ್ದಾರೆ.</p>.<p>‘ಈ ಕಪಟತೆಯು ಆಕಸ್ಮಿಕವಲ್ಲ. ಉದ್ದೇಶಪೂರ್ವಕವಾದದ್ದು. ಹೆಚ್ಚುತ್ತಿರುವ ಬಡತನ, ಸಾಮೂಹಿಕ ನಿರುದ್ಯೋಗ, ಯುವ ಪೀಳಿಗೆಯ ಭವಿಷ್ಯದ ಬಗ್ಗೆ ಉತ್ತರಿಸುವುದಕ್ಕಿಂತ ಸಾಮರಸ್ಯ ಹಾಳುಮಾಡುವುದು ಸುಲಭದ ಕೆಲಸವಾಗಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.</p>.<p>ಮಸ್ಸೂರಿಯಲ್ಲಿರುವ ಬಾಬಾ ಬುಲ್ಲೇಶಾ ಅವರ ದೇಗುಲವನ್ನು ಜ.24ರಂದು ಧ್ವಂಸಗೊಳಿಸಿರುವುದಕ್ಕೆ ಮೆಹಬೂಬಾ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>