<p><strong>ಶ್ರೀನಗರ:</strong> ಇಲ್ಲಿನ ಪೂಂಛ್ಗೆ ಭೇಟಿ ನೀಡಲು ಅನುಮತಿ ನಿರಾಕರಿಸಿದ ಕಾರಣ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಶನಿವಾರ ರಜೌರಿ–ಪೂಂಛ್ ಹೆದ್ದಾರಿಯಲ್ಲಿಯೇ ಧರಣಿ ಕುಳಿತರು. ಇತ್ತೀಚೆಗೆ ಸೇನೆಯ ವಶದಲ್ಲಿದ್ದಾಗ ಮೃತಪಟ್ಟರು ಎನ್ನಲಾದ ಮೂವರು ನಾಗರಿಕರ ಕುಟುಂಬವನ್ನು ಭೇಟಿ ಮಾಡಲು ಅವರು ಅಲ್ಲಿಗೆ ತೆರಳುತ್ತಿದ್ದರು.</p><p>‘ರಾತ್ರಿ ಇಡೀ ಹೆದ್ದಾರಿಯಲ್ಲಿ ಕುಳಿತರೂ ಅವರು ಪ್ರತಿಭಟನೆಯನ್ನು ಕೈಬಿಡುವುದಿಲ್ಲ’ ಎಂದು ಅವರೊಂದಿಗೆ ಇರುವ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಮತ್ತು ನಾಯಕರು ಹೇಳಿದರು.</p><p>‘ಆಡಳಿತವು ನನಗೇಕೆ ಇಷ್ಟು ಹೆದರುತ್ತಿದೆ ಎಂದು ತಿಳಿಯುತ್ತಿಲ್ಲ. ಭದ್ರತೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಲ್ಲ. ಆದರೂ ನನಗೆ ಅವಕಾಶ ನೀಡುತ್ತಿಲ್ಲ’ ಎಂದು ದೂರಿದರು.</p><p>‘ನನ್ನನ್ನು ಮಾತ್ರ ತಡೆಯಲಾಗುತ್ತಿದೆ. ಇತರರು ಮುಕ್ತವಾಗಿ ಸಂಚರಿಸುತ್ತಿದ್ದಾರೆ. ಭದ್ರತಾ ಪಡೆಗಳ ರಹಸ್ಯ ಬಯಲಾಗುವುದು ಎಂಬ ಕಾರಣಕ್ಕಾಗಿ ತಡೆಯುತ್ತಿರಬಹುದು’ ಎಂದು ಹೇಳಿದರು.</p><p>‘ಸೇನಾಪಡೆಯು ಈ ಪ್ರದೇಶದ ಪುರುಷರಿಗೆ ಮಾತ್ರ ಅಲ್ಲ ಮಹಿಳೆಯರಿಗೂ ಕಿರುಕುಳ ನೀಡಿದೆ’ ಎಂದು ಆರೋಪಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಇಲ್ಲಿನ ಪೂಂಛ್ಗೆ ಭೇಟಿ ನೀಡಲು ಅನುಮತಿ ನಿರಾಕರಿಸಿದ ಕಾರಣ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಶನಿವಾರ ರಜೌರಿ–ಪೂಂಛ್ ಹೆದ್ದಾರಿಯಲ್ಲಿಯೇ ಧರಣಿ ಕುಳಿತರು. ಇತ್ತೀಚೆಗೆ ಸೇನೆಯ ವಶದಲ್ಲಿದ್ದಾಗ ಮೃತಪಟ್ಟರು ಎನ್ನಲಾದ ಮೂವರು ನಾಗರಿಕರ ಕುಟುಂಬವನ್ನು ಭೇಟಿ ಮಾಡಲು ಅವರು ಅಲ್ಲಿಗೆ ತೆರಳುತ್ತಿದ್ದರು.</p><p>‘ರಾತ್ರಿ ಇಡೀ ಹೆದ್ದಾರಿಯಲ್ಲಿ ಕುಳಿತರೂ ಅವರು ಪ್ರತಿಭಟನೆಯನ್ನು ಕೈಬಿಡುವುದಿಲ್ಲ’ ಎಂದು ಅವರೊಂದಿಗೆ ಇರುವ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಮತ್ತು ನಾಯಕರು ಹೇಳಿದರು.</p><p>‘ಆಡಳಿತವು ನನಗೇಕೆ ಇಷ್ಟು ಹೆದರುತ್ತಿದೆ ಎಂದು ತಿಳಿಯುತ್ತಿಲ್ಲ. ಭದ್ರತೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಲ್ಲ. ಆದರೂ ನನಗೆ ಅವಕಾಶ ನೀಡುತ್ತಿಲ್ಲ’ ಎಂದು ದೂರಿದರು.</p><p>‘ನನ್ನನ್ನು ಮಾತ್ರ ತಡೆಯಲಾಗುತ್ತಿದೆ. ಇತರರು ಮುಕ್ತವಾಗಿ ಸಂಚರಿಸುತ್ತಿದ್ದಾರೆ. ಭದ್ರತಾ ಪಡೆಗಳ ರಹಸ್ಯ ಬಯಲಾಗುವುದು ಎಂಬ ಕಾರಣಕ್ಕಾಗಿ ತಡೆಯುತ್ತಿರಬಹುದು’ ಎಂದು ಹೇಳಿದರು.</p><p>‘ಸೇನಾಪಡೆಯು ಈ ಪ್ರದೇಶದ ಪುರುಷರಿಗೆ ಮಾತ್ರ ಅಲ್ಲ ಮಹಿಳೆಯರಿಗೂ ಕಿರುಕುಳ ನೀಡಿದೆ’ ಎಂದು ಆರೋಪಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>