<p class="title"><strong>ನವದೆಹಲಿ:</strong> ಕಾಲ್ ಸೆಂಟರ್ ಉದ್ಯೋಗಿ ಶ್ರದ್ಧಾ ವಾಲಕರ್ ಹತ್ಯೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾನುವಾರಮನುಷ್ಯನ ತಲೆಬುರುಡೆಯ ಕೆಳಭಾಗ, ಕೆಳದವಡೆ ಹಾಗೂ ಮತ್ತಷ್ಟು ಮೂಳೆಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p class="title">ಈ ಭಾಗಗಳು ಶ್ರದ್ಧಾಳದ್ದೇ ಎನ್ನುವುದನ್ನು ಖಚಿತಪಡಿಸಿಕೊಳ್ಳಲು, ಆಕೆಯ ತಂದೆಯ ಡಿಎನ್ಎ ಮಾದರಿಗಳೊಂದಿಗೆ ಹೊಂದುತ್ತವೆಯೇ ಎಂಬುದನ್ನು ದೃಢೀಕರಿಸಲು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಪೊಲೀಸರು ಹೇಳಿದ್ದನ್ನು ಉಲ್ಲೇಖಿಸಿ ಎನ್ಡಿಟಿವಿ ವರದಿ ಮಾಡಿದೆ.</p>.<p class="title">ಛತ್ತರ್ಪುರದ ಅರಣ್ಯ ಪ್ರದೇಶ ಸೇರಿದಂತೆ, ಆಫ್ತಾಬ್ಅಮೀನ್ ಪೂನಾವಾಲಾ ಮತ್ತು ಶ್ರದ್ಧಾ ವಾಸಿಸುತ್ತಿದ್ದ ಸ್ಥಳ ಹಾಗೂ ದೆಹಲಿ ನಗರದಲ್ಲಿ ದೆಹಲಿ ಪೊಲೀಸರು ಮತ್ತೊಮ್ಮೆ ಶೋಧ ಕಾರ್ಯವನ್ನು ಆರಂಭಿಸಿದ್ದಾರೆ.</p>.<p class="title"><strong><span class="bold">ಆಯುಧ ಪತ್ತೆ:</span></strong></p>.<p class="title">ಆಫ್ತಾಬ್ನ ಛತ್ತರ್ಪುರ ಫ್ಲ್ಯಾಟ್ನಿಂದ ಶನಿವಾರ ಪೊಲೀಸರು ದೊಡ್ಡದಾದ, ಹರಿತವಾದ ಕತ್ತರಿಸುವ ಉಪಕರಣವೊಂದನ್ನು ವಶಪಡಿಸಿಕೊಂಡಿದ್ದಾರೆ. ಇದನ್ನು ಆರೋಪಿಯು ಶ್ರದ್ಧಾಳ ದೇಹ ಕತ್ತರಿಸಲು ಬಳಸಿರಬಹುದು ಎಂದು ಶಂಕಿಸಲಾಗಿದೆ.</p>.<p class="title"><span class="bold">ಸಾಕ್ಷ್ಯ ಮುಚ್ಚಿಟ್ಟ ಆರೋಪಿ:</span> ಶ್ರದ್ಧಾಳನ್ನು ಹತ್ಯೆ ಮಾಡಿದ ಬಳಿಕ ಎಲ್ಲಾ ಸಾಕ್ಷ್ಯಗಳನ್ನು ನಾಶಪಡಿಸಿದ್ದಾಗಿ ಆರೋಪಿ ಆಫ್ತಾಬ್ ಪೊಲೀಸರು ಎದುರು ಒಪ್ಪಿಕೊಂಡಿದ್ದಾನೆ. ಅಷ್ಟೇ ಅಲ್ಲ, ಹತ್ಯೆಯ ನಂತರ ದೊರೆತ ಶ್ರದ್ಧಾಳ ಮೂರು ಚಿತ್ರಗಳನ್ನು ನಾಶಪಡಿಸಿದ್ದಾಗಿಯೂ ಹೇಳಿದ್ದಾನೆ.</p>.<p class="title">ಪೊಲೀಸರು ಕಟ್ಟುನಿಟ್ಟಿನ ವಿಚಾರಣೆ ಆರಂಭಿಸಿದ್ದು ಆರೋಪಿಯು ನಿಧಾನವಾಗಿ ಸತ್ಯವನ್ನು ಬಹಿರಂಗಪಡಿಸುತ್ತಿದ್ದಾನೆ. ಛತ್ತರ್ಪುರದ ತನ್ನ ಫ್ಲ್ಯಾಟ್ನಿಂದ ಪ್ರಮುಖ ಸಾಕ್ಷ್ಯವನ್ನು ಪಡೆಯಲು ಪೊಲೀಸರಿಗೆ ನೆರವಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="title">ಶ್ರದ್ಧಾಳ ರಕ್ತದ ಬಟ್ಟೆಗಳನ್ನು ಕಸದ ವ್ಯಾನ್ಗೆ ವಿಲೇವಾರಿ ಮಾಡಿದ್ದಾಗಿಯೂ ಆರೋಪಿ ಮಾಹಿತಿ ನೀಡಿದ್ದಾನೆ. </p>.<p class="title">ಕೆರೆಯಲ್ಲಿ ತಲೆಬುರುಡೆ?: ಈ ನಡುವೆ, ಶ್ರದ್ಧಾಳ ತಲೆಬುರುಡೆಯನ್ನು ದೆಹಲಿಯ ಮೆಹ್ರೌಲಿ ಕೆರೆಗೆ ಎಸೆದಿರುವುದಾಗಿ ಆಫ್ತಾಬ್ ಪೊಲೀಸರಿಗೆ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಭಾನುವಾರ ದೆಹಲಿ ಮಹಾನಗರ ಪಾಲಿಕೆಯ ಸಿಬ್ಬಂದಿ ಹಾಗೂ ಪೊಲೀಸರು ಮೆಹ್ರೌಲಿ ಕೆರೆಯನ್ನು ಖಾಲಿ ಮಾಡುವ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.</p>.<p class="title"><span class="bold">ಬ್ಯಾಗ್ ಪತ್ತೆ:</span> ಆಫ್ತಾಬ್ನ ಛತ್ತರ್ಪುರದ ಫ್ಲ್ಯಾಟ್ನಿಂದ ಶ್ರದ್ಧಾಳ ಬ್ಯಾಗ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅದರಲ್ಲಿ ಕೆಲವು ಬಟ್ಟೆಗಳು ಮತ್ತು ಶೂಗಳು ಪತ್ತೆಯಾಗಿವೆ. ಎರಡು ದೊಡ್ಡ ಕಪ್ಪು ಬ್ಯಾಗ್ಗಳೊಂದಿಗೆ ಪೊಲೀಸರು ಆರೋಪಿಯ ಫ್ಲ್ಯಾಟ್ನಿಂದ ಹೊರಬಂದರು ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಕಾಲ್ ಸೆಂಟರ್ ಉದ್ಯೋಗಿ ಶ್ರದ್ಧಾ ವಾಲಕರ್ ಹತ್ಯೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾನುವಾರಮನುಷ್ಯನ ತಲೆಬುರುಡೆಯ ಕೆಳಭಾಗ, ಕೆಳದವಡೆ ಹಾಗೂ ಮತ್ತಷ್ಟು ಮೂಳೆಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p class="title">ಈ ಭಾಗಗಳು ಶ್ರದ್ಧಾಳದ್ದೇ ಎನ್ನುವುದನ್ನು ಖಚಿತಪಡಿಸಿಕೊಳ್ಳಲು, ಆಕೆಯ ತಂದೆಯ ಡಿಎನ್ಎ ಮಾದರಿಗಳೊಂದಿಗೆ ಹೊಂದುತ್ತವೆಯೇ ಎಂಬುದನ್ನು ದೃಢೀಕರಿಸಲು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಪೊಲೀಸರು ಹೇಳಿದ್ದನ್ನು ಉಲ್ಲೇಖಿಸಿ ಎನ್ಡಿಟಿವಿ ವರದಿ ಮಾಡಿದೆ.</p>.<p class="title">ಛತ್ತರ್ಪುರದ ಅರಣ್ಯ ಪ್ರದೇಶ ಸೇರಿದಂತೆ, ಆಫ್ತಾಬ್ಅಮೀನ್ ಪೂನಾವಾಲಾ ಮತ್ತು ಶ್ರದ್ಧಾ ವಾಸಿಸುತ್ತಿದ್ದ ಸ್ಥಳ ಹಾಗೂ ದೆಹಲಿ ನಗರದಲ್ಲಿ ದೆಹಲಿ ಪೊಲೀಸರು ಮತ್ತೊಮ್ಮೆ ಶೋಧ ಕಾರ್ಯವನ್ನು ಆರಂಭಿಸಿದ್ದಾರೆ.</p>.<p class="title"><strong><span class="bold">ಆಯುಧ ಪತ್ತೆ:</span></strong></p>.<p class="title">ಆಫ್ತಾಬ್ನ ಛತ್ತರ್ಪುರ ಫ್ಲ್ಯಾಟ್ನಿಂದ ಶನಿವಾರ ಪೊಲೀಸರು ದೊಡ್ಡದಾದ, ಹರಿತವಾದ ಕತ್ತರಿಸುವ ಉಪಕರಣವೊಂದನ್ನು ವಶಪಡಿಸಿಕೊಂಡಿದ್ದಾರೆ. ಇದನ್ನು ಆರೋಪಿಯು ಶ್ರದ್ಧಾಳ ದೇಹ ಕತ್ತರಿಸಲು ಬಳಸಿರಬಹುದು ಎಂದು ಶಂಕಿಸಲಾಗಿದೆ.</p>.<p class="title"><span class="bold">ಸಾಕ್ಷ್ಯ ಮುಚ್ಚಿಟ್ಟ ಆರೋಪಿ:</span> ಶ್ರದ್ಧಾಳನ್ನು ಹತ್ಯೆ ಮಾಡಿದ ಬಳಿಕ ಎಲ್ಲಾ ಸಾಕ್ಷ್ಯಗಳನ್ನು ನಾಶಪಡಿಸಿದ್ದಾಗಿ ಆರೋಪಿ ಆಫ್ತಾಬ್ ಪೊಲೀಸರು ಎದುರು ಒಪ್ಪಿಕೊಂಡಿದ್ದಾನೆ. ಅಷ್ಟೇ ಅಲ್ಲ, ಹತ್ಯೆಯ ನಂತರ ದೊರೆತ ಶ್ರದ್ಧಾಳ ಮೂರು ಚಿತ್ರಗಳನ್ನು ನಾಶಪಡಿಸಿದ್ದಾಗಿಯೂ ಹೇಳಿದ್ದಾನೆ.</p>.<p class="title">ಪೊಲೀಸರು ಕಟ್ಟುನಿಟ್ಟಿನ ವಿಚಾರಣೆ ಆರಂಭಿಸಿದ್ದು ಆರೋಪಿಯು ನಿಧಾನವಾಗಿ ಸತ್ಯವನ್ನು ಬಹಿರಂಗಪಡಿಸುತ್ತಿದ್ದಾನೆ. ಛತ್ತರ್ಪುರದ ತನ್ನ ಫ್ಲ್ಯಾಟ್ನಿಂದ ಪ್ರಮುಖ ಸಾಕ್ಷ್ಯವನ್ನು ಪಡೆಯಲು ಪೊಲೀಸರಿಗೆ ನೆರವಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="title">ಶ್ರದ್ಧಾಳ ರಕ್ತದ ಬಟ್ಟೆಗಳನ್ನು ಕಸದ ವ್ಯಾನ್ಗೆ ವಿಲೇವಾರಿ ಮಾಡಿದ್ದಾಗಿಯೂ ಆರೋಪಿ ಮಾಹಿತಿ ನೀಡಿದ್ದಾನೆ. </p>.<p class="title">ಕೆರೆಯಲ್ಲಿ ತಲೆಬುರುಡೆ?: ಈ ನಡುವೆ, ಶ್ರದ್ಧಾಳ ತಲೆಬುರುಡೆಯನ್ನು ದೆಹಲಿಯ ಮೆಹ್ರೌಲಿ ಕೆರೆಗೆ ಎಸೆದಿರುವುದಾಗಿ ಆಫ್ತಾಬ್ ಪೊಲೀಸರಿಗೆ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಭಾನುವಾರ ದೆಹಲಿ ಮಹಾನಗರ ಪಾಲಿಕೆಯ ಸಿಬ್ಬಂದಿ ಹಾಗೂ ಪೊಲೀಸರು ಮೆಹ್ರೌಲಿ ಕೆರೆಯನ್ನು ಖಾಲಿ ಮಾಡುವ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.</p>.<p class="title"><span class="bold">ಬ್ಯಾಗ್ ಪತ್ತೆ:</span> ಆಫ್ತಾಬ್ನ ಛತ್ತರ್ಪುರದ ಫ್ಲ್ಯಾಟ್ನಿಂದ ಶ್ರದ್ಧಾಳ ಬ್ಯಾಗ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅದರಲ್ಲಿ ಕೆಲವು ಬಟ್ಟೆಗಳು ಮತ್ತು ಶೂಗಳು ಪತ್ತೆಯಾಗಿವೆ. ಎರಡು ದೊಡ್ಡ ಕಪ್ಪು ಬ್ಯಾಗ್ಗಳೊಂದಿಗೆ ಪೊಲೀಸರು ಆರೋಪಿಯ ಫ್ಲ್ಯಾಟ್ನಿಂದ ಹೊರಬಂದರು ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>