ಕೈಲಾಶ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಾರ್ಚ್ 5ರಂದು ತಿರಸ್ಕರಿಸಿದ್ದ ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ಡೇರೆ ಮತ್ತು ಮಂಜೂಷಾ ದೇಶಪಾಂಡೆ ಅವರಿದ್ದ ನ್ಯಾಯಪೀಠವು, ‘2019ರ ಮೇ 1ರಂದು ನಡೆದ ಬಾಂಬ್ ಸ್ಫೋಟದಲ್ಲಿ 15 ಪೊಲೀಸರು ಮೃತಪಟ್ಟ ಸಂಗತಿಯನ್ನು ತಳ್ಳಿಹಾಕಲು ನಮಗೆ ಸಾಧ್ಯವಿಲ್ಲ. ವಿಚಾರಣೆ ವಿಳಂಬವಾದ ಸಂಗತಿಯನ್ನೇ ಆಧಾರವಾಗಿರಿಸಿಕೊಂಡು ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಆಗುವುದಿಲ್ಲ’ ಎಂದು ಹೇಳಿತ್ತು. ಆದೇಶದ ಪ್ರತಿಯನ್ನು ಗುರುವಾರ ಬಹಿರಂಗಪಡಿಸಲಾಗಿದೆ.