<p><strong>ನವದೆಹಲಿ</strong>: ಜೀವಾವಧಿ ಶಿಕ್ಷೆಯ ಪ್ರಕರಣಗಳಲ್ಲಿ, ಬೇರೆ ಅಗತ್ಯ ಅಂಶಗಳನ್ನು ಪರಿಗಣಿಸದೆ ನಿರ್ದಿಷ್ಟ ಅವಧಿಗೆ ಕಾರಾಗೃಹವಾಸ ಪೂರ್ಣಗೊಂಡಿದೆ ಎಂಬ ಒಂದೇ ಆಧಾರದಲ್ಲಿ ಶಿಕ್ಷೆಯನ್ನು ಅಮಾನತಿನಲ್ಲಿ ಇರಿಸಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>ಈ ಮಾತು ಹೇಳಿರುವ ನ್ಯಾಯಮೂರ್ತಿಗಳಾದ ಸಿ.ಟಿ. ರವಿಕುಮಾರ್ ಮತ್ತು ರಾಜೇಶ್ ಬಿಂದಲ್ ಅವರು ಇದ್ದ ವಿಭಾಗೀಯ ಪೀಠವು, ಯುವತಿಯ ಮೇಲೆ ಆ್ಯಸಿಡ್ ಎರಚಿ ದಾಳಿ ಮಾಡಿದ್ದ ಐವರ ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿ ಇರಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಅಸಿಂಧುಗೊಳಿಸಿದೆ.</p>.<p>ಶಿಕ್ಷೆಗೆ ಗುರಿಯಾದವರು ತಾವು ಸಂತ್ರಸ್ತ ವ್ಯಕ್ತಿಗೆ ₹25 ಲಕ್ಷ ಪರಿಹಾರ ನೀಡಲು ಮುಂದಾಗಿದ್ದರ ಆಧಾರದಲ್ಲಿ ಹೈಕೋರ್ಟ್ ಈ ನಿಲುವು ತಾಳಿತು ಎಂದು ಶಿವಾನಿ ತ್ಯಾಗಿ ಎನ್ನುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಹೇಳಿದೆ.</p>.<p>‘ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿದ, ಅದರ ಪರಿಣಾಮವಾಗಿ ಆಕೆ ಶಾಶ್ವತ ತೊಂದರೆಗೆ ಒಳಗಾಗಬೇಕಾದ ಪ್ರಕರಣ ಇದು. ಹೈಕೋರ್ಟ್ ಆದೇಶವನ್ನು ಪರಿಶೀಲಿಸಿದಾಗ ನಮಗೆ ಸಮಾಧಾನ ಆಗುತ್ತಿಲ್ಲ. ಇಲ್ಲಿ ಅಗತ್ಯ ಸಂಗತಿಗಳನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ’ ಎಂದು ನ್ಯಾಯಮೂರ್ತಿ ರವಿಕುಮಾರ್ ಅವರು ಹೇಳಿದ್ದಾರೆ.</p>.<p>ಆ್ಯಸಿಡ್ ದಾಳಿಯು ಸಂತ್ರಸ್ತ ವ್ಯಕ್ತಿಯ ಪಾಲಿಗೆ ಶಮನ ಮಾಡಲು ಸಾಧ್ಯವೇ ಇಲ್ಲದಂತಹ ಸಮಸ್ಯೆಗಳನ್ನು ಸೃಷ್ಟಿಸಬಹುದು. ಆ ಮೂಲಕ ಆ ವ್ಯಕ್ತಿಯ ಪಾಲಿಗೆ ಚೆಂದದ ಬದುಕು ಸಾಗಿಸುವ ಮೂಲಭೂತ ಹಕ್ಕನ್ನೇ ಕಿತ್ತುಕೊಳ್ಳಬಹುದು ಎಂದು ವಿಭಾಗೀಯ ಪೀಠವು ಹೇಳಿದೆ.</p>.<p>ಅಪರಾಧಿಗಳ ಜಾಮೀನನ್ನು ವಿಸ್ತರಿಸಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಆಕ್ಷೇಪ ದಾಖಲಿಸಿದೆ. ಅಪರಾಧಿಗಳು ಸಂತ್ರಸ್ತೆಗೆ ₹25 ಲಕ್ಷ ನೀಡಲು ಮುಂದಾಗಿದ್ದರ ಬಗ್ಗೆಯೂ ಕೆಲವು ಮಾತುಗಳನ್ನು ಹೇಳಿದೆ.</p>.<p>‘ಇದು ಒಂದು ರೀತಿಯಲ್ಲಿ, ಅಪರಾಧಿಗಳು ಸಂತ್ರಸ್ತ ವ್ಯಕ್ತಿಗೆ ರಕ್ತಸಿಕ್ತವಾದ ಹಣ ಕೊಡಲು ಮುಂದಾದಂತೆ. ಇಂಥದ್ದಕ್ಕೆ ನಮ್ಮ ಕ್ರಿಮಿನಲ್ ನ್ಯಾಯದಾನ ವ್ಯವಸ್ಥೆಯಲ್ಲಿ ಒಪ್ಪಿಗೆ ಇಲ್ಲ’ ಎಂದು ನ್ಯಾಯಮೂರ್ತಿ ಬಾದಲ್ ಹೇಳಿದ್ದಾರೆ.</p>.<p>ನಡೆದಿದೆ ಎನ್ನಲಾದ ಅಪರಾಧದ ಸ್ವರೂಪ, ಅಪರಾಧ ನಡೆಸಿದ ಬಗೆ, ಅಪರಾಧದ ಗಾಂಭೀರ್ಯ, ಅಪರಾಧಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದು ಎಷ್ಟರಮಟ್ಟಿಗೆ ಅಪೇಕ್ಷಣೀಯ ಎಂಬುದನ್ನು ವಸ್ತುನಿಷ್ಠವಾಗಿ ಪರಿಗಣಿಸಬೇಕು, ಆ ಪರಿಗಣನೆಗಳು ಆದೇಶಲ್ಲಿ ಪ್ರತಿಫಲಿಸಬೇಕು ಎಂದು ಎರಡು ಪ್ರತ್ಯೇಕ, ಸಹಮತದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ ಹೇಳಿದೆ.</p>.<p>ಆ್ಯಸಿಡ್ ದಾಳಿಯ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ನ್ಯಾಯಮೂರ್ತಿ ಬಿಂದಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಜೀವಾವಧಿ ಶಿಕ್ಷೆಯ ಪ್ರಕರಣಗಳಲ್ಲಿ, ಬೇರೆ ಅಗತ್ಯ ಅಂಶಗಳನ್ನು ಪರಿಗಣಿಸದೆ ನಿರ್ದಿಷ್ಟ ಅವಧಿಗೆ ಕಾರಾಗೃಹವಾಸ ಪೂರ್ಣಗೊಂಡಿದೆ ಎಂಬ ಒಂದೇ ಆಧಾರದಲ್ಲಿ ಶಿಕ್ಷೆಯನ್ನು ಅಮಾನತಿನಲ್ಲಿ ಇರಿಸಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.</p>.<p>ಈ ಮಾತು ಹೇಳಿರುವ ನ್ಯಾಯಮೂರ್ತಿಗಳಾದ ಸಿ.ಟಿ. ರವಿಕುಮಾರ್ ಮತ್ತು ರಾಜೇಶ್ ಬಿಂದಲ್ ಅವರು ಇದ್ದ ವಿಭಾಗೀಯ ಪೀಠವು, ಯುವತಿಯ ಮೇಲೆ ಆ್ಯಸಿಡ್ ಎರಚಿ ದಾಳಿ ಮಾಡಿದ್ದ ಐವರ ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿ ಇರಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಅಸಿಂಧುಗೊಳಿಸಿದೆ.</p>.<p>ಶಿಕ್ಷೆಗೆ ಗುರಿಯಾದವರು ತಾವು ಸಂತ್ರಸ್ತ ವ್ಯಕ್ತಿಗೆ ₹25 ಲಕ್ಷ ಪರಿಹಾರ ನೀಡಲು ಮುಂದಾಗಿದ್ದರ ಆಧಾರದಲ್ಲಿ ಹೈಕೋರ್ಟ್ ಈ ನಿಲುವು ತಾಳಿತು ಎಂದು ಶಿವಾನಿ ತ್ಯಾಗಿ ಎನ್ನುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಹೇಳಿದೆ.</p>.<p>‘ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿದ, ಅದರ ಪರಿಣಾಮವಾಗಿ ಆಕೆ ಶಾಶ್ವತ ತೊಂದರೆಗೆ ಒಳಗಾಗಬೇಕಾದ ಪ್ರಕರಣ ಇದು. ಹೈಕೋರ್ಟ್ ಆದೇಶವನ್ನು ಪರಿಶೀಲಿಸಿದಾಗ ನಮಗೆ ಸಮಾಧಾನ ಆಗುತ್ತಿಲ್ಲ. ಇಲ್ಲಿ ಅಗತ್ಯ ಸಂಗತಿಗಳನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ’ ಎಂದು ನ್ಯಾಯಮೂರ್ತಿ ರವಿಕುಮಾರ್ ಅವರು ಹೇಳಿದ್ದಾರೆ.</p>.<p>ಆ್ಯಸಿಡ್ ದಾಳಿಯು ಸಂತ್ರಸ್ತ ವ್ಯಕ್ತಿಯ ಪಾಲಿಗೆ ಶಮನ ಮಾಡಲು ಸಾಧ್ಯವೇ ಇಲ್ಲದಂತಹ ಸಮಸ್ಯೆಗಳನ್ನು ಸೃಷ್ಟಿಸಬಹುದು. ಆ ಮೂಲಕ ಆ ವ್ಯಕ್ತಿಯ ಪಾಲಿಗೆ ಚೆಂದದ ಬದುಕು ಸಾಗಿಸುವ ಮೂಲಭೂತ ಹಕ್ಕನ್ನೇ ಕಿತ್ತುಕೊಳ್ಳಬಹುದು ಎಂದು ವಿಭಾಗೀಯ ಪೀಠವು ಹೇಳಿದೆ.</p>.<p>ಅಪರಾಧಿಗಳ ಜಾಮೀನನ್ನು ವಿಸ್ತರಿಸಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಆಕ್ಷೇಪ ದಾಖಲಿಸಿದೆ. ಅಪರಾಧಿಗಳು ಸಂತ್ರಸ್ತೆಗೆ ₹25 ಲಕ್ಷ ನೀಡಲು ಮುಂದಾಗಿದ್ದರ ಬಗ್ಗೆಯೂ ಕೆಲವು ಮಾತುಗಳನ್ನು ಹೇಳಿದೆ.</p>.<p>‘ಇದು ಒಂದು ರೀತಿಯಲ್ಲಿ, ಅಪರಾಧಿಗಳು ಸಂತ್ರಸ್ತ ವ್ಯಕ್ತಿಗೆ ರಕ್ತಸಿಕ್ತವಾದ ಹಣ ಕೊಡಲು ಮುಂದಾದಂತೆ. ಇಂಥದ್ದಕ್ಕೆ ನಮ್ಮ ಕ್ರಿಮಿನಲ್ ನ್ಯಾಯದಾನ ವ್ಯವಸ್ಥೆಯಲ್ಲಿ ಒಪ್ಪಿಗೆ ಇಲ್ಲ’ ಎಂದು ನ್ಯಾಯಮೂರ್ತಿ ಬಾದಲ್ ಹೇಳಿದ್ದಾರೆ.</p>.<p>ನಡೆದಿದೆ ಎನ್ನಲಾದ ಅಪರಾಧದ ಸ್ವರೂಪ, ಅಪರಾಧ ನಡೆಸಿದ ಬಗೆ, ಅಪರಾಧದ ಗಾಂಭೀರ್ಯ, ಅಪರಾಧಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದು ಎಷ್ಟರಮಟ್ಟಿಗೆ ಅಪೇಕ್ಷಣೀಯ ಎಂಬುದನ್ನು ವಸ್ತುನಿಷ್ಠವಾಗಿ ಪರಿಗಣಿಸಬೇಕು, ಆ ಪರಿಗಣನೆಗಳು ಆದೇಶಲ್ಲಿ ಪ್ರತಿಫಲಿಸಬೇಕು ಎಂದು ಎರಡು ಪ್ರತ್ಯೇಕ, ಸಹಮತದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ ಹೇಳಿದೆ.</p>.<p>ಆ್ಯಸಿಡ್ ದಾಳಿಯ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ನ್ಯಾಯಮೂರ್ತಿ ಬಿಂದಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>