<p><strong>ತಿರುವನಂತಪುರ</strong>: ಈ ಹಿಂದೆಯೇ ರಾಜ್ಯ ಸರ್ಕಾರ ಘೋಷಿಸಿದ ಪ್ರಕಾರ ದಿಗ್ಗಜ ಆಟಗಾರ ಲಯೊನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ ರಾಜ್ಯಕ್ಕೆ ಭೇಟಿ ನೀಡುವುದು ಖಚಿತ. ಅವರಿಗೆ ಪ್ರಾಯೋಜಕರು ಪಂದ್ಯದ ಸಂಭಾವನೆಯನ್ನೂ ನೀಡಿದ್ದಾರೆ ಎಂದು ಕೇರಳದ ಕ್ರೀಡಾ ಸಚಿವ ವಿ.ಅಬ್ದುರಹಿಮಾನ್ ಶನಿವಾರ ಸ್ಪಷ್ಟಪಡಿಸಿದ್ದಾರೆ.</p><p>ಇದೇ ವರ್ಷದ ಅಕ್ಟೋಬರ್– ನವೆಂಬರ್ ತಿಂಗಳಲ್ಲಿ ಅರ್ಜೆಂಟೀನಾ ತಂಡ ಬರುವ ಸಾಧ್ಯತೆಯಿದೆ. ಅವರನ್ನು ರಾಜ್ಯದ ಅತಿಥಿಗಳು ಎಂದು ಆದರಿಸಲಾಗುವುದು. ಅವರ ಭದ್ರತೆ, ವಾಸ್ತವ್ಯ ಮತ್ತು ಇತರ ವ್ಯವಸ್ಥೆಗಳನ್ನು ಸರ್ಕಾರ ನೋಡಿಕೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.</p><p>ಪ್ರಾಯೋಜಕರು ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿ ಕಾರಣಕ್ಕೆ ಅರ್ಜೆಂಟೀನಾ ತಂಡ ತನ್ನ ನಿಗದಿ ಪ್ರವಾಸವನ್ನು ರದ್ದುಗೊಳಿಸಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ ನಂತರ ಸಚಿವರು ಈ ಹೇಳಿಕೆ ನೀಡಿದ್ದಾರೆ.</p><p>ಆದರೆ ಅಬ್ದುರಹಿಮನ್ ಮತ್ತು ಪ್ರಾಯೋಜಕರರಾದ ರಿಪೋರ್ಟರ್ ಬ್ರಾಡ್ಕಾಸ್ಟಿಂಗ್ ಕಂಪನಿ ಪತ್ರಿಕಾ ವರದಿಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದು, ವಿಶ್ವ ಚಾಂಪಿಯನ್ ತಂಡವು ರಾಜ್ಯದಲ್ಲಿ ಸೌಹಾರ್ದ ಪಂದ್ಯ ಆಡಲಿದೆ ಎಂದು ಪುನರುಚ್ಛರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಈ ಹಿಂದೆಯೇ ರಾಜ್ಯ ಸರ್ಕಾರ ಘೋಷಿಸಿದ ಪ್ರಕಾರ ದಿಗ್ಗಜ ಆಟಗಾರ ಲಯೊನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ ರಾಜ್ಯಕ್ಕೆ ಭೇಟಿ ನೀಡುವುದು ಖಚಿತ. ಅವರಿಗೆ ಪ್ರಾಯೋಜಕರು ಪಂದ್ಯದ ಸಂಭಾವನೆಯನ್ನೂ ನೀಡಿದ್ದಾರೆ ಎಂದು ಕೇರಳದ ಕ್ರೀಡಾ ಸಚಿವ ವಿ.ಅಬ್ದುರಹಿಮಾನ್ ಶನಿವಾರ ಸ್ಪಷ್ಟಪಡಿಸಿದ್ದಾರೆ.</p><p>ಇದೇ ವರ್ಷದ ಅಕ್ಟೋಬರ್– ನವೆಂಬರ್ ತಿಂಗಳಲ್ಲಿ ಅರ್ಜೆಂಟೀನಾ ತಂಡ ಬರುವ ಸಾಧ್ಯತೆಯಿದೆ. ಅವರನ್ನು ರಾಜ್ಯದ ಅತಿಥಿಗಳು ಎಂದು ಆದರಿಸಲಾಗುವುದು. ಅವರ ಭದ್ರತೆ, ವಾಸ್ತವ್ಯ ಮತ್ತು ಇತರ ವ್ಯವಸ್ಥೆಗಳನ್ನು ಸರ್ಕಾರ ನೋಡಿಕೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.</p><p>ಪ್ರಾಯೋಜಕರು ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿ ಕಾರಣಕ್ಕೆ ಅರ್ಜೆಂಟೀನಾ ತಂಡ ತನ್ನ ನಿಗದಿ ಪ್ರವಾಸವನ್ನು ರದ್ದುಗೊಳಿಸಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ ನಂತರ ಸಚಿವರು ಈ ಹೇಳಿಕೆ ನೀಡಿದ್ದಾರೆ.</p><p>ಆದರೆ ಅಬ್ದುರಹಿಮನ್ ಮತ್ತು ಪ್ರಾಯೋಜಕರರಾದ ರಿಪೋರ್ಟರ್ ಬ್ರಾಡ್ಕಾಸ್ಟಿಂಗ್ ಕಂಪನಿ ಪತ್ರಿಕಾ ವರದಿಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದು, ವಿಶ್ವ ಚಾಂಪಿಯನ್ ತಂಡವು ರಾಜ್ಯದಲ್ಲಿ ಸೌಹಾರ್ದ ಪಂದ್ಯ ಆಡಲಿದೆ ಎಂದು ಪುನರುಚ್ಛರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>