ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ಕಿರುಕುಳ ಆರೋಪ: ಟೈಮ್ಸ್‌ ಆಫ್‌ ಇಂಡಿಯಾ ಸಂಪಾದಕ ಶ್ರೀನಿವಾಸ್‌ ರಾಜೀನಾಮೆ

Last Updated 13 ಅಕ್ಟೋಬರ್ 2018, 16:19 IST
ಅಕ್ಷರ ಗಾತ್ರ

ಬೆಂಗಳೂರು: ದೇಶದಾದ್ಯಂತ ಸುದ್ದಿಯಾಗಿರುವ ಮೀಟೂ ಅಭಿಯಾನ ಮಾಧ್ಯಮ ಸಂಸ್ಥೆಗಳಲ್ಲಿಯೂ ಸದ್ದು ಮಾಡುತ್ತಿದೆ. ಲೈಂಗಿಕ ಕಿರುಕುಳದ ಆರೋಪಕ್ಕೆ ಗುರಿಯಾಗಿದ್ದಟೈಮ್ಸ್‌ ಆಫ್‌ ಇಂಡಿಯಾದ ಹೈದರಾಬಾದ್‌ನ ಸ್ಥಾನಿಕ ಸಂಪಾದಕ ಕೆ.ಆರ್. ಶ್ರೀನಿವಾಸ್ ಶನಿವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

’ಮೀಟೂ’ ಕಾರಣದಿಂದಾಗಿ ಸಂಪಾದಕ ಸ್ಥಾನದಲ್ಲಿರುವ ಹಿರಿಯ ಪತ್ರಕರ್ತರೊಬ್ಬರು ರಾಜೀನಾಮೆ ನೀಡಿರುವ ಮೊದಲ ಪ್ರಕರಣ ಇದಾಗಿದೆ.ಅಶ್ಲೀಲ ಸಂದೇಶಗಳು, ಸಂಜ್ಞೆಗಳನ್ನು ಕಳುಹಿಸುವುದಲ್ಲದೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಶ್ರೀನಿವಾಸ್ವಿರುದ್ಧ ಏಳು ಮಹಿಳೆಯರು ದೂರಿನಲ್ಲಿ ಆರೋಪಿಸಿದ್ದರು.

ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಂಸ್ಥೆಯೇ ಶ್ರೀನಿವಾಸ್‌ ಅವರಿಗೆ ಸೂಚಿಸಿದೆಯೋ ಅಥವಾ ಇದು ಅವರ ಸ್ವಂತ ನಿರ್ಧಾರವೋ ತಿಳಿದು ಬಂದಿಲ್ಲ ಎಂದು ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ. ಆದರೆ, ’ನನ್ನನ್ನು ಟಾರ್ಗೆಟ್‌ ಮಾಡಲಾಗಿದೆ’ ಎಂದು ರಾಜೀನಾಮೆ ಪತ್ರದಲ್ಲಿ ಬರೆದಿರುವುದಾಗಿ ವರದಿಯಾಗಿದೆ.

ಅಕ್ಟೋಬರ್‌ 9ರಂದು ಮಹಿಳೆಯರು ದೂರು ನೀಡಿದ ಬೆನ್ನಲೇ ಆರೋಪಗಳ ಮೇಲಿನ ತನಿಖೆ ಪೂರ್ಣಗೊಳ್ಳುವವರೆಗೂ ಆಡಳಿತಾತ್ಮಕ ರಜೆ ಮೇಲೆ ತೆರಳುವಂತೆ ಶ್ರೀನಿವಾಸ್‌ ಅವರಿಗೆ ಸೂಚಿಸಲಾಗಿತ್ತು.

ಅಶ್ಲೀಲ ಸಂದೇಶಗಳು, ಸಂಜ್ಞೆಗಳನ್ನು ಕಳುಹಿಸುವುದಲ್ಲದೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಸಂಪಾದಕರ ವಿರುದ್ಧ ನೀಡಿದ ದೂರಿನಲ್ಲಿ ಮಹಿಳೆಯರು ಆರೋಪಿಸಿದ್ದರು.

ಇತ್ತೀಚೆಗೆ ಲೈಂಗಿಕ ಕಿರುಕುಳ ಆರೋಪದಲ್ಲಿ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯ ಬ್ಯೂರೊ ಮುಖ್ಯಸ್ಥ, ರಾಜಕೀಯ ಸಂಪಾದಕ ಪ್ರಶಾಂತ್ ಝಾ ಸ್ಥಾನ ತೊರೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT