<p><strong>ನವದೆಹಲಿ:</strong> 20 ವರ್ಷ ಹಳೇಯ ನರೇಗಾ (MGNREGA) ಯೋಜನೆಯನ್ನು ಬದಲಿಸುವ ‘ವಿಕಸಿತ ಭಾರತ– ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ–ಜಿ ರಾಮ್ ಜಿ)’ ಮಸೂದೆಗೆ ಲೋಕಸಭೆ ಗುರುವಾರ ಅಂಗೀಕಾರ ನೀಡಿದೆ. ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆ ನಡುವೆಯೇ ಮಸೂದೆಗೆ ಒಪ್ಪಿಗೆ ಲಭಿಸಿದೆ.</p>.ನರೇಗಾ vs ವಿಬಿ–ಜಿ ರಾಮ್ ಜಿ: ಪ್ರಮುಖ ಬದಲಾವಣೆ ಪಟ್ಟಿ ಇಲ್ಲಿದೆ.<p>ವಿಬಿ–ಜಿ ರಾಮ್ ಜಿ ಮಸೂದೆ ಮೇಲೆ ನಡೆದ 8 ಗಂಟೆಗಳ ಚರ್ಚೆಗೆ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಉತ್ತರಿಸಿದರು. ‘ಮೋದಿ ಸರ್ಕಾರವು ಮಹಾತ್ಮಾ ಗಾಂಧಿ ಅವರ ಚಿಂತನೆಗಳನ್ನು ವಿವಿಧ ಉಪಕ್ರಮಗಳ ಮೂಲಕ ಎತ್ತಿ ಹಿಡಿಯುತ್ತಿದೆ’ ಎಂದು ಅವರು ಪ್ರತಿಪಾದಿಸಿದ್ದಾರೆ.</p><p>‘ಬಾಪುವಿನ ಚಿಂತನೆಗಳನ್ನು ಕಾಂಗ್ರೆಸ್ ಕೊಂದಿದೆ. ಪಿಎಂ ಆವಾಸ್ ಯೋಜನೆಯಡಿ ನಿರ್ಮಾಣ ಮಾಡಿದ ಪಕ್ಕಾ ಮನೆಗಳು, ಉಜ್ವಲ ಯೋಜನೆ, ಸ್ವಚ್ಛ ಭಾರತ ಮಿಷನ್, ಆಯುಷ್ಮಾನ್ ಭಾರತ್ ಮುಂತಾದ ಯೋಜನೆಳ ಮೂಲಕ ಎನ್ಡಿಎ ಸರ್ಕಾರ ಬಾಪುವನ್ನು ಜೀವಂತವಾಗಿರಿಸಿದೆ’ ಎಂದು ಚೌಹಾಣ್ ಹೇಳಿದ್ದಾರೆ.</p>.ನರೇಗಾ ಮಾರ್ಪಾಡು ಬಡವರ ಹಕ್ಕಿನ ಮೇಲೆ ದಾಳಿ: ಸಂಸದ ಸಾಗರ್ ಖಂಡ್ರೆ ಟೀಕೆ.<p>ಯೋಜನೆಯಿಂದ ಮಹಾತ್ಮಾ ಗಾಂಧಿ ಅವರ ಹೆಸರನ್ನು ತೆಗೆದು ಹಾಕುವುದಕ್ಕೆ ಪಕ್ಷಗಳಿಂದ ತೀವ್ರ ವಿರೋಧ ಎದುರಾಯಿತು. ಸಂಸದರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಮಸೂದೆಯ ಪ್ರತಿಗಳನ್ನು ಹರಿದು ಸ್ಪೀಕರ್ ಕುರ್ಚಿಯತ್ತ ತೂರಿದರು.</p><p>ವಿರೋಧ ಪಕ್ಷಗಳ ಗದ್ದಲದ ನಡುವೆಯೇ ಧ್ವನಿ ಮತದ ಮೂಲಕ ಮಸೂದೆಗೆ ಅಂಗೀಕಾರ ಲಭಿಸಿತು. ಮಸೂದೆಗೆ ಒಪ್ಪಿಗೆ ಸಿಗುತ್ತಿದ್ದಂತೆಯೇ ಕಲಾಪವನ್ನು ದಿನದ ಮಟ್ಟಿಗೆ ಸ್ಪೀಕರ್ ಮುಂದೂಡಿದರು.</p>.ನರೇಗಾ ಮಾತ್ರವಲ್ಲ ಈ ಯೋಜನೆಗಳಲ್ಲಿನ ಗಾಂಧಿ ಹೆಸರಿಗೂ ಕತ್ತರಿ ಹಾಕಿದೆ NDA ಸರಕಾರ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 20 ವರ್ಷ ಹಳೇಯ ನರೇಗಾ (MGNREGA) ಯೋಜನೆಯನ್ನು ಬದಲಿಸುವ ‘ವಿಕಸಿತ ಭಾರತ– ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ–ಜಿ ರಾಮ್ ಜಿ)’ ಮಸೂದೆಗೆ ಲೋಕಸಭೆ ಗುರುವಾರ ಅಂಗೀಕಾರ ನೀಡಿದೆ. ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆ ನಡುವೆಯೇ ಮಸೂದೆಗೆ ಒಪ್ಪಿಗೆ ಲಭಿಸಿದೆ.</p>.ನರೇಗಾ vs ವಿಬಿ–ಜಿ ರಾಮ್ ಜಿ: ಪ್ರಮುಖ ಬದಲಾವಣೆ ಪಟ್ಟಿ ಇಲ್ಲಿದೆ.<p>ವಿಬಿ–ಜಿ ರಾಮ್ ಜಿ ಮಸೂದೆ ಮೇಲೆ ನಡೆದ 8 ಗಂಟೆಗಳ ಚರ್ಚೆಗೆ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಉತ್ತರಿಸಿದರು. ‘ಮೋದಿ ಸರ್ಕಾರವು ಮಹಾತ್ಮಾ ಗಾಂಧಿ ಅವರ ಚಿಂತನೆಗಳನ್ನು ವಿವಿಧ ಉಪಕ್ರಮಗಳ ಮೂಲಕ ಎತ್ತಿ ಹಿಡಿಯುತ್ತಿದೆ’ ಎಂದು ಅವರು ಪ್ರತಿಪಾದಿಸಿದ್ದಾರೆ.</p><p>‘ಬಾಪುವಿನ ಚಿಂತನೆಗಳನ್ನು ಕಾಂಗ್ರೆಸ್ ಕೊಂದಿದೆ. ಪಿಎಂ ಆವಾಸ್ ಯೋಜನೆಯಡಿ ನಿರ್ಮಾಣ ಮಾಡಿದ ಪಕ್ಕಾ ಮನೆಗಳು, ಉಜ್ವಲ ಯೋಜನೆ, ಸ್ವಚ್ಛ ಭಾರತ ಮಿಷನ್, ಆಯುಷ್ಮಾನ್ ಭಾರತ್ ಮುಂತಾದ ಯೋಜನೆಳ ಮೂಲಕ ಎನ್ಡಿಎ ಸರ್ಕಾರ ಬಾಪುವನ್ನು ಜೀವಂತವಾಗಿರಿಸಿದೆ’ ಎಂದು ಚೌಹಾಣ್ ಹೇಳಿದ್ದಾರೆ.</p>.ನರೇಗಾ ಮಾರ್ಪಾಡು ಬಡವರ ಹಕ್ಕಿನ ಮೇಲೆ ದಾಳಿ: ಸಂಸದ ಸಾಗರ್ ಖಂಡ್ರೆ ಟೀಕೆ.<p>ಯೋಜನೆಯಿಂದ ಮಹಾತ್ಮಾ ಗಾಂಧಿ ಅವರ ಹೆಸರನ್ನು ತೆಗೆದು ಹಾಕುವುದಕ್ಕೆ ಪಕ್ಷಗಳಿಂದ ತೀವ್ರ ವಿರೋಧ ಎದುರಾಯಿತು. ಸಂಸದರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಮಸೂದೆಯ ಪ್ರತಿಗಳನ್ನು ಹರಿದು ಸ್ಪೀಕರ್ ಕುರ್ಚಿಯತ್ತ ತೂರಿದರು.</p><p>ವಿರೋಧ ಪಕ್ಷಗಳ ಗದ್ದಲದ ನಡುವೆಯೇ ಧ್ವನಿ ಮತದ ಮೂಲಕ ಮಸೂದೆಗೆ ಅಂಗೀಕಾರ ಲಭಿಸಿತು. ಮಸೂದೆಗೆ ಒಪ್ಪಿಗೆ ಸಿಗುತ್ತಿದ್ದಂತೆಯೇ ಕಲಾಪವನ್ನು ದಿನದ ಮಟ್ಟಿಗೆ ಸ್ಪೀಕರ್ ಮುಂದೂಡಿದರು.</p>.ನರೇಗಾ ಮಾತ್ರವಲ್ಲ ಈ ಯೋಜನೆಗಳಲ್ಲಿನ ಗಾಂಧಿ ಹೆಸರಿಗೂ ಕತ್ತರಿ ಹಾಕಿದೆ NDA ಸರಕಾರ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>