<p><strong>ಹೈದರಾಬಾದ್</strong>: ಮಂಗಳವಾರ ಬಾಪಟ್ಲಾ ಸಮೀಪ ಆಂಧ್ರಪ್ರದೇಶದ ಕರಾವಳಿಯನ್ನು ದಾಟಿರುವ ಮಿಚಾಂಗ್ ಚಂಡಮಾರುತವು ದುರ್ಬಲಗೊಂಡಿದೆ. ಅದಕ್ಕೂ ಮುನ್ನ ಆಂಧ್ರಪ್ರದೇಶದಲ್ಲಿ ಭಾರಿ ವಿನಾಶ ಸೃಷ್ಟಿಸಿದೆ. </p><p>ಚಂಡಮಾರುತವು 770 ಕಿ.ಮೀ ರಸ್ತೆ ಹಾನಿಗೊಳಗಾಗಿದ್ದು, 35 ಮರಗಳು ಧರೆಗುರುಳಿವೆ.</p><p>ಮುಖ್ಯಮಂತ್ರಿಗಳ ಕಚೇರಿ (ಸಿಎಂಒ) ಹಂಚಿಕೊಂಡ ಮಾಹಿತಿಯ ಪ್ರಕಾರ, 25 ಹಳ್ಳಿಗಳ ಮುಳುಗಡೆ ಸೇರಿದಂತೆ 194 ಹಳ್ಳಿಗಳು ಮತ್ತು ಎರಡು ಪಟ್ಟಣಗಳ ಸುಮಾರು 40 ಲಕ್ಷ ಜನರು ಮಿಚಾಂಗ್ ಚಂಡಮಾರುತದಿಂದ ಸಂಕಷ್ಟಕ್ಕೀಡಾಗಿದ್ದಾರೆ.</p><p>ತಿರುಪತಿ ಜಿಲ್ಲೆಯಲ್ಲಿ ಸೋಮವಾರ ಗುಡಿಸಲಿನ ಗೋಡೆ ಕುಸಿದು ನಾಲ್ಕು ವರ್ಷದ ಬಾಲಕ ಸಾವಿಗೀಡಾಗಿದ್ದಾನೆ ಎಂದು ಆಂಧ್ರಪ್ರದೇಶ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿರ್ದೇಶಕ ಬಿ,ಆರ್, ಅಂಬೇಡ್ಕರ್ ಪಿಟಿಐಗೆ ತಿಳಿಸಿದ್ದಾರೆ.</p><p>ರಾಜ್ಯದಾದ್ಯಂತ 204 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, 15,173 ಜನರನ್ನು ಸ್ಥಳಾಂತರಿಸಲಾಗಿದೆ. ಪರಿಹಾರ ಕಾರ್ಯಗಳ ಭಾಗವಾಗಿ 18,073 ಆಹಾರ ಪೊಟ್ಟಣಗಳು ಮತ್ತು 1 ಲಕ್ಷಕ್ಕೂ ಹೆಚ್ಚು ನೀರಿನ ಪ್ಯಾಕೆಟ್ಗಳನ್ನು ವಿತರಿಸಲಾಗಿದೆ. 80 ಆರೋಗ್ಯ ಶಿಬಿರಗಳನ್ನು ಸಹ ತೆರೆಯಲಾಗಿದೆ.</p><p>ಸಂತ್ರಸ್ತ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಪರಿಹಾರ ಕಾರ್ಯಗಳಿಗಾಗಿ ₹23 ಕೋಟಿ ಬಿಡುಗಡೆ ಮಾಡಿದೆ.</p><p>78 ಗುಡಿಸಲುಗಳು, 232 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ.</p><p>ರಾಜ್ಯದ ಕೋನಸೀಮಾ (234 ಕಿ. ಮೀ), ಪ್ರಕಾಶಂ (55 ಕಿ. ಮೀ), ನೆಲ್ಲೂರು (433 ಕಿ. ಮೀ) ಮತ್ತು ತಿರುಪತಿ (48 ಕಿ.ಮೀ) ಜಿಲ್ಲೆಗಳಲ್ಲಿ 770 ಕಿ. ಮೀ ರಸ್ತೆಗಳು ಹಾನಿಗೊಳಗಾಗಿವೆ.</p><p>ಆಂಧ್ರಪ್ರದೇಶದ ಪವರ್ ಡಿಸ್ಟ್ರಿಬ್ಯೂಷನ್ ಕಂಪನಿ ಲಿಮಿಟೆಡ್ನ 13 33-ಕೆವಿ ಫೀಡರ್ಗಳು, 312 11-ಕೆವಿ ಫೀಡರ್ಗಳು, 29 33/11-ಕೆವಿ ಉಪ-ಫೀಡರ್ಗಳು, ಒಂಬತ್ತು 33-ಕೆವಿ ಕಂಬಗಳು, 140 11-ಕೆವಿ ಕಂಬಗಳು ಮತ್ತು 244-ಎಲ್ಟಿ ಕಂಬಗಳಿಗೆ ಹಾನಿಯಾಗಿದೆ.</p><p>ನೆಲ್ಲೂರು ಜಿಲ್ಲೆಯ ಮನುಬೋಳುವಿನಲ್ಲಿ 366.5 ಮಿ.ಮೀ ಮಳೆ ದಾಖಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಮಂಗಳವಾರ ಬಾಪಟ್ಲಾ ಸಮೀಪ ಆಂಧ್ರಪ್ರದೇಶದ ಕರಾವಳಿಯನ್ನು ದಾಟಿರುವ ಮಿಚಾಂಗ್ ಚಂಡಮಾರುತವು ದುರ್ಬಲಗೊಂಡಿದೆ. ಅದಕ್ಕೂ ಮುನ್ನ ಆಂಧ್ರಪ್ರದೇಶದಲ್ಲಿ ಭಾರಿ ವಿನಾಶ ಸೃಷ್ಟಿಸಿದೆ. </p><p>ಚಂಡಮಾರುತವು 770 ಕಿ.ಮೀ ರಸ್ತೆ ಹಾನಿಗೊಳಗಾಗಿದ್ದು, 35 ಮರಗಳು ಧರೆಗುರುಳಿವೆ.</p><p>ಮುಖ್ಯಮಂತ್ರಿಗಳ ಕಚೇರಿ (ಸಿಎಂಒ) ಹಂಚಿಕೊಂಡ ಮಾಹಿತಿಯ ಪ್ರಕಾರ, 25 ಹಳ್ಳಿಗಳ ಮುಳುಗಡೆ ಸೇರಿದಂತೆ 194 ಹಳ್ಳಿಗಳು ಮತ್ತು ಎರಡು ಪಟ್ಟಣಗಳ ಸುಮಾರು 40 ಲಕ್ಷ ಜನರು ಮಿಚಾಂಗ್ ಚಂಡಮಾರುತದಿಂದ ಸಂಕಷ್ಟಕ್ಕೀಡಾಗಿದ್ದಾರೆ.</p><p>ತಿರುಪತಿ ಜಿಲ್ಲೆಯಲ್ಲಿ ಸೋಮವಾರ ಗುಡಿಸಲಿನ ಗೋಡೆ ಕುಸಿದು ನಾಲ್ಕು ವರ್ಷದ ಬಾಲಕ ಸಾವಿಗೀಡಾಗಿದ್ದಾನೆ ಎಂದು ಆಂಧ್ರಪ್ರದೇಶ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿರ್ದೇಶಕ ಬಿ,ಆರ್, ಅಂಬೇಡ್ಕರ್ ಪಿಟಿಐಗೆ ತಿಳಿಸಿದ್ದಾರೆ.</p><p>ರಾಜ್ಯದಾದ್ಯಂತ 204 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, 15,173 ಜನರನ್ನು ಸ್ಥಳಾಂತರಿಸಲಾಗಿದೆ. ಪರಿಹಾರ ಕಾರ್ಯಗಳ ಭಾಗವಾಗಿ 18,073 ಆಹಾರ ಪೊಟ್ಟಣಗಳು ಮತ್ತು 1 ಲಕ್ಷಕ್ಕೂ ಹೆಚ್ಚು ನೀರಿನ ಪ್ಯಾಕೆಟ್ಗಳನ್ನು ವಿತರಿಸಲಾಗಿದೆ. 80 ಆರೋಗ್ಯ ಶಿಬಿರಗಳನ್ನು ಸಹ ತೆರೆಯಲಾಗಿದೆ.</p><p>ಸಂತ್ರಸ್ತ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಪರಿಹಾರ ಕಾರ್ಯಗಳಿಗಾಗಿ ₹23 ಕೋಟಿ ಬಿಡುಗಡೆ ಮಾಡಿದೆ.</p><p>78 ಗುಡಿಸಲುಗಳು, 232 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ.</p><p>ರಾಜ್ಯದ ಕೋನಸೀಮಾ (234 ಕಿ. ಮೀ), ಪ್ರಕಾಶಂ (55 ಕಿ. ಮೀ), ನೆಲ್ಲೂರು (433 ಕಿ. ಮೀ) ಮತ್ತು ತಿರುಪತಿ (48 ಕಿ.ಮೀ) ಜಿಲ್ಲೆಗಳಲ್ಲಿ 770 ಕಿ. ಮೀ ರಸ್ತೆಗಳು ಹಾನಿಗೊಳಗಾಗಿವೆ.</p><p>ಆಂಧ್ರಪ್ರದೇಶದ ಪವರ್ ಡಿಸ್ಟ್ರಿಬ್ಯೂಷನ್ ಕಂಪನಿ ಲಿಮಿಟೆಡ್ನ 13 33-ಕೆವಿ ಫೀಡರ್ಗಳು, 312 11-ಕೆವಿ ಫೀಡರ್ಗಳು, 29 33/11-ಕೆವಿ ಉಪ-ಫೀಡರ್ಗಳು, ಒಂಬತ್ತು 33-ಕೆವಿ ಕಂಬಗಳು, 140 11-ಕೆವಿ ಕಂಬಗಳು ಮತ್ತು 244-ಎಲ್ಟಿ ಕಂಬಗಳಿಗೆ ಹಾನಿಯಾಗಿದೆ.</p><p>ನೆಲ್ಲೂರು ಜಿಲ್ಲೆಯ ಮನುಬೋಳುವಿನಲ್ಲಿ 366.5 ಮಿ.ಮೀ ಮಳೆ ದಾಖಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>