<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಬಿಹಾರದ ವಲಸೆ ಕಾರ್ಮಿಕನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p>.<p>ಗುರುವಾರ ಮಧ್ಯರಾತ್ರಿಯ ಸುಮಾರಿಗೆ ಈ ದಾಳಿ ನಡೆದಿದೆ ಎಂದು ಅವರು ತಿಳಿಸಿದ್ದಾರೆ.</p>.<p>‘ಮಧ್ಯರಾತ್ರಿ, ಭಯೋತ್ಪಾದಕರು ಬಿಹಾರದ ಮಾದೇಪುರ ಮೂಲದ ಮೊಹಮ್ಮದ್ ಜಲೀಲ್ ಅವರ ಮಗ, ಕಾರ್ಮಿಕ ಮೊಹಮ್ಮದ್ ಅಮ್ರೇಜ್ ಮೇಲೆ ಗುಂಡು ಹಾರಿಸಿದ್ದಾರೆ. ಗಾಯಗೊಂಡಿದ್ದ ಅಮ್ರೇಜ್ ಅವರನ್ನು ಆಸ್ಪತ್ರೆಗೆ ದಾಖಲಾಗಿತ್ತು’ಎಂದು ಕಾಶ್ಮೀರ ವಲಯ ಪೊಲೀಸರು ಟ್ವಿಟರ್ನಲ್ಲಿ ತಿಳಿಸಿದ್ದಾರೆ.</p>.<p>ಆದರೆ, ಚಿಕಿತ್ಸೆಗೂ ಮುನ್ನವೇ ಅಮ್ರೇಜ್ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.</p>.<p>ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಸೇನಾ ಶಿಬಿರದ ಮೇಲೆ ನಡೆದ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾದ ಒಂದು ದಿನದ ನಂತರ ಈ ದಾಳಿ ನಡೆದಿದೆ.</p>.<p>ಸುಬೇದಾರ್ ರಾಜೇಂದ್ರ ಪ್ರಸಾದ್, ರೈಫಲ್ಮ್ಯಾನ್ ಮನೋಜ್ ಕುಮಾರ್, ರೈಫಲ್ಮ್ಯಾನ್ ಲಕ್ಷ್ಮಣನ್ ಡಿ ಮತ್ತು ರೈಫಲ್ಮ್ಯಾನ್ ನಿಶಾಂತ್ ಮಲಿಕ್ ಅವರು ಉಗ್ರರ ಆತ್ಮಾಹುತಿ ದಾಳಿಗೆ ಪ್ರಾಣ ತೆತ್ತಿದ್ದರು. ಸಾವಿಗೂ ಮುನ್ನ, ಅವರು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದರು.</p>.<p>ಕಳೆದ ವಾರ, ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಬಿಹಾರದ ವಲಸೆ ಕಾರ್ಮಿಕ ಮೊಹಮ್ಮದ್ ಮುಮ್ತಾಜ್ ಸಾವಿಗೀಡಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಬಿಹಾರದ ವಲಸೆ ಕಾರ್ಮಿಕನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p>.<p>ಗುರುವಾರ ಮಧ್ಯರಾತ್ರಿಯ ಸುಮಾರಿಗೆ ಈ ದಾಳಿ ನಡೆದಿದೆ ಎಂದು ಅವರು ತಿಳಿಸಿದ್ದಾರೆ.</p>.<p>‘ಮಧ್ಯರಾತ್ರಿ, ಭಯೋತ್ಪಾದಕರು ಬಿಹಾರದ ಮಾದೇಪುರ ಮೂಲದ ಮೊಹಮ್ಮದ್ ಜಲೀಲ್ ಅವರ ಮಗ, ಕಾರ್ಮಿಕ ಮೊಹಮ್ಮದ್ ಅಮ್ರೇಜ್ ಮೇಲೆ ಗುಂಡು ಹಾರಿಸಿದ್ದಾರೆ. ಗಾಯಗೊಂಡಿದ್ದ ಅಮ್ರೇಜ್ ಅವರನ್ನು ಆಸ್ಪತ್ರೆಗೆ ದಾಖಲಾಗಿತ್ತು’ಎಂದು ಕಾಶ್ಮೀರ ವಲಯ ಪೊಲೀಸರು ಟ್ವಿಟರ್ನಲ್ಲಿ ತಿಳಿಸಿದ್ದಾರೆ.</p>.<p>ಆದರೆ, ಚಿಕಿತ್ಸೆಗೂ ಮುನ್ನವೇ ಅಮ್ರೇಜ್ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.</p>.<p>ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಸೇನಾ ಶಿಬಿರದ ಮೇಲೆ ನಡೆದ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾದ ಒಂದು ದಿನದ ನಂತರ ಈ ದಾಳಿ ನಡೆದಿದೆ.</p>.<p>ಸುಬೇದಾರ್ ರಾಜೇಂದ್ರ ಪ್ರಸಾದ್, ರೈಫಲ್ಮ್ಯಾನ್ ಮನೋಜ್ ಕುಮಾರ್, ರೈಫಲ್ಮ್ಯಾನ್ ಲಕ್ಷ್ಮಣನ್ ಡಿ ಮತ್ತು ರೈಫಲ್ಮ್ಯಾನ್ ನಿಶಾಂತ್ ಮಲಿಕ್ ಅವರು ಉಗ್ರರ ಆತ್ಮಾಹುತಿ ದಾಳಿಗೆ ಪ್ರಾಣ ತೆತ್ತಿದ್ದರು. ಸಾವಿಗೂ ಮುನ್ನ, ಅವರು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದರು.</p>.<p>ಕಳೆದ ವಾರ, ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಬಿಹಾರದ ವಲಸೆ ಕಾರ್ಮಿಕ ಮೊಹಮ್ಮದ್ ಮುಮ್ತಾಜ್ ಸಾವಿಗೀಡಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>