ಅಂದಾಜು ಲೆಕ್ಕಾಚಾರದ ಪ್ರಕಾರ ಸುಮಾರು 3ರಿಂದ 4 ಲಕ್ಷ ವಲಸೆ ಕಾರ್ಮಿಕರು, ಈ ಪೈಕಿ ಹೆಚ್ಚಿನವರು ಹಿಂದೂಗಳಾಗಿದ್ದು ಉತ್ತರ ಪ್ರದೇಶ, ಬಿಹಾರ, ಛತ್ತೀಸಗಡ, ಜಾರ್ಖಂಡ್ ಮತ್ತು ಉತ್ತರಾಖಂಡಗಳಿಂದ ಪ್ರತಿ ವರ್ಷ ಮಾರ್ಚ್ ಆರಂಭದ ವೇಳೆಗೆ ಕಾಶ್ಮೀರಕ್ಕೆ ಬರುತ್ತಾರೆ. ಕಲ್ಲು, ಮರಗೆಲಸ, ವೆಲ್ಡಿಂಗ್ ಮತ್ತು ಕೃಷಿಯಂಥ ಕೆಲಸಗಳಿಗಾಗಿ ಕಾಶ್ಮೀರಕ್ಕೆ ಬರುವ ಇವರು ಸಾಮಾನ್ಯವಾಗಿ ನವೆಂಬರ್ ವೇಳೆಗೆ ತವರಿಗೆ ಮರಳುತ್ತಾರೆ. ಆದರೆ ಈ ವರ್ಷ ನಾಗರಿಕರ ಹತ್ಯೆಗಳಿಂದ ಆತಂಕಕ್ಕೊಳಗಾಗಿ ಬೇಗನೇ ಕಾಶ್ಮೀರ ತೊರೆಯುತ್ತಿದ್ದಾರೆ.