<p><strong>ಲಖನೌ:</strong> ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆಯೇ, ದೆಹಲಿ ತೊರೆದ ಸಾವಿರಾರು ಜನ ವಲಸೆ ಕಾರ್ಮಿಕರು ಉತ್ತರ ಪ್ರದೇಶದ ತಮ್ಮ ಊರುಗಳತ್ತ ಹೆಜ್ಜೆ ಹಾಕಿದ್ದಾರೆ.</p>.<p>ಹೀಗಾಗಿ ಇಲ್ಲಿನ ಬಸ್ ನಿಲ್ದಾಣಗಳು ವಲಸೆ ಕಾರ್ಮಿಕರಿಂದ ಗಿಜಿಗುಡುತ್ತಿದ್ದ ದೃಶ್ಯಗಳು ಮಂಗಳವಾರ ಕಂಡು ಬಂದವು. ಸೋಮವಾರ ರಾತ್ರಿ ದೆಹಲಿಯಿಂದ ಹೊರಟಿರುವ ಕಾರ್ಮಿಕರು ಇಲ್ಲಿ ಬಂದಿಳಿದಿದ್ದು, ಈಗ ತಮ್ಮ ಊರುಗಳಿಗೆ ತೆರಳಲು ಬಸ್ಗಳನ್ನು ಹುಡುಕುತ್ತಾ ಸಂಚರಿಸಿದರು.</p>.<p>ಅದರಲ್ಲೂ, ಉತ್ತರ ಪ್ರದೇಶದ ಪೂರ್ವ ಭಾಗದ ಜಿಲ್ಲೆಗಳಾದ ಗೋರಖ್ಪುರ, ದೇವರಿಯಾ, ಅಜಮ್ಗಡ ಹಾಗೂ ಇತರ ಜಿಲ್ಲೆಗಳ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.</p>.<p>ರಾಜ್ಯದಲ್ಲಿ ನಡೆಯುತ್ತಿರುವ ಪಂಚಾಯತ್ ಚುನಾವಣೆಗಾಗಿ ಬಸ್ಗಳನ್ನು ನಿಯೋಜನೆ ಮಾಡಿರುವ ಕಾರಣ, ನಗರದ ಆಲಂಬಾಗ್ನಲ್ಲಿರುವ ಕೇಂದ್ರ ಬಸ್ ನಿಲ್ದಾಣದಲ್ಲಿ ಕೆಲವೇ ಬಸ್ಗಳು ಇದ್ದವು. ಹೀಗಾಗಿ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ತೊಂದರೆ ಅನುಭವಿಸಬೇಕಾಯಿತು ಎಂದು ಮೂಲಗಳು ಹೇಳಿವೆ.</p>.<p>‘ವಲಸೆ ಕಾರ್ಮಿಕರು ಅವರ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ಖಾಸಗಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ’ ಎಂದು ಉತ್ತರ ಪ್ರದೇಶ ಸಾರಿಗೆ ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದರು.</p>.<p>ಭಾರಿ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ದೆಹಲಿ ತೊರೆದು, ರಾಜ್ಯದತ್ತ ಮುಖ ಮಾಡಿದ್ದರಿಂದ ಉಂಟಾಗಿರುವ ತೊಂದರೆಗೆ ದೆಹಲಿ ಸರ್ಕಾರವೇ ಕಾರಣ ಎಂದು ಉತ್ತರ ಪ್ರದೇಶ ಸಚಿವ ಸಿದ್ಧಾರ್ಥನಾಥ್ ಸಿಂಗ್ ಟೀಕಿಸಿದರು.</p>.<p>‘ತರಾತುರಿಯಲ್ಲಿ ದೆಹಲಿಯಲ್ಲಿ ಲಾಕ್ಡೌನ್ ಘೋಷಿಸಲಾಗಿದೆ. ದೆಹಲಿ ಸಾರಿಗೆ ಬಸ್ಗಳಲ್ಲಿ ಕರೆದುಕೊಂಡು ಬಂದ ಕಾರ್ಮಿಕರನ್ನು , ನೋಯ್ಡಾ ಮತ್ತು ಗಾಜಿಯಾಬಾದ್ ಗಡಿಗಳಲ್ಲಿ ಇಳಿಸಿ ಹೋಗಲಾಗಿದೆ’ ಎಂದೂ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆಯೇ, ದೆಹಲಿ ತೊರೆದ ಸಾವಿರಾರು ಜನ ವಲಸೆ ಕಾರ್ಮಿಕರು ಉತ್ತರ ಪ್ರದೇಶದ ತಮ್ಮ ಊರುಗಳತ್ತ ಹೆಜ್ಜೆ ಹಾಕಿದ್ದಾರೆ.</p>.<p>ಹೀಗಾಗಿ ಇಲ್ಲಿನ ಬಸ್ ನಿಲ್ದಾಣಗಳು ವಲಸೆ ಕಾರ್ಮಿಕರಿಂದ ಗಿಜಿಗುಡುತ್ತಿದ್ದ ದೃಶ್ಯಗಳು ಮಂಗಳವಾರ ಕಂಡು ಬಂದವು. ಸೋಮವಾರ ರಾತ್ರಿ ದೆಹಲಿಯಿಂದ ಹೊರಟಿರುವ ಕಾರ್ಮಿಕರು ಇಲ್ಲಿ ಬಂದಿಳಿದಿದ್ದು, ಈಗ ತಮ್ಮ ಊರುಗಳಿಗೆ ತೆರಳಲು ಬಸ್ಗಳನ್ನು ಹುಡುಕುತ್ತಾ ಸಂಚರಿಸಿದರು.</p>.<p>ಅದರಲ್ಲೂ, ಉತ್ತರ ಪ್ರದೇಶದ ಪೂರ್ವ ಭಾಗದ ಜಿಲ್ಲೆಗಳಾದ ಗೋರಖ್ಪುರ, ದೇವರಿಯಾ, ಅಜಮ್ಗಡ ಹಾಗೂ ಇತರ ಜಿಲ್ಲೆಗಳ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.</p>.<p>ರಾಜ್ಯದಲ್ಲಿ ನಡೆಯುತ್ತಿರುವ ಪಂಚಾಯತ್ ಚುನಾವಣೆಗಾಗಿ ಬಸ್ಗಳನ್ನು ನಿಯೋಜನೆ ಮಾಡಿರುವ ಕಾರಣ, ನಗರದ ಆಲಂಬಾಗ್ನಲ್ಲಿರುವ ಕೇಂದ್ರ ಬಸ್ ನಿಲ್ದಾಣದಲ್ಲಿ ಕೆಲವೇ ಬಸ್ಗಳು ಇದ್ದವು. ಹೀಗಾಗಿ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ತೊಂದರೆ ಅನುಭವಿಸಬೇಕಾಯಿತು ಎಂದು ಮೂಲಗಳು ಹೇಳಿವೆ.</p>.<p>‘ವಲಸೆ ಕಾರ್ಮಿಕರು ಅವರ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ಖಾಸಗಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ’ ಎಂದು ಉತ್ತರ ಪ್ರದೇಶ ಸಾರಿಗೆ ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದರು.</p>.<p>ಭಾರಿ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ದೆಹಲಿ ತೊರೆದು, ರಾಜ್ಯದತ್ತ ಮುಖ ಮಾಡಿದ್ದರಿಂದ ಉಂಟಾಗಿರುವ ತೊಂದರೆಗೆ ದೆಹಲಿ ಸರ್ಕಾರವೇ ಕಾರಣ ಎಂದು ಉತ್ತರ ಪ್ರದೇಶ ಸಚಿವ ಸಿದ್ಧಾರ್ಥನಾಥ್ ಸಿಂಗ್ ಟೀಕಿಸಿದರು.</p>.<p>‘ತರಾತುರಿಯಲ್ಲಿ ದೆಹಲಿಯಲ್ಲಿ ಲಾಕ್ಡೌನ್ ಘೋಷಿಸಲಾಗಿದೆ. ದೆಹಲಿ ಸಾರಿಗೆ ಬಸ್ಗಳಲ್ಲಿ ಕರೆದುಕೊಂಡು ಬಂದ ಕಾರ್ಮಿಕರನ್ನು , ನೋಯ್ಡಾ ಮತ್ತು ಗಾಜಿಯಾಬಾದ್ ಗಡಿಗಳಲ್ಲಿ ಇಳಿಸಿ ಹೋಗಲಾಗಿದೆ’ ಎಂದೂ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>