<p><strong>ಅಗರ್ತಲಾ:</strong> ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ನಿಷೇಧಿತ ‘ನ್ಯಾಷನಲ್ ಲಿಬರೇಷನ್ ಫ್ರಂಟ್ ಆಫ್ ತ್ರಿಪುರ’ ಸಂಘಟನೆಯ ಸದಸ್ಯ ತ್ರಿಪುರದಲ್ಲಿರುವ ಸಿಪಾಹಿಜಲಾ ಜಿಲ್ಲೆಯಲ್ಲಿರುವ ಕೇಂದ್ರೀಯ ಕಾರಾಗೃಹದಿಂದ ತಪ್ಪಿಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. </p>.<p>ಆತ ಹೇಗೆ ತಪ್ಪಿಸಿಕೊಂಡಿರಬಹುದು ಎಂಬುದರ ಪರಿಶೀಲನೆಗಾಗಿ ಸಿ.ಸಿ.ಟಿ.ವಿ. ಕ್ಯಾಮೆರಾಗಳ ಪರಿಶೀಲನೆ ನಡೆಸಲಾಗಿದೆ. ಆತ ಬೆಳಗಿನ ಜಾವ ತಪ್ಪಿಸಿಕೊಂಡಿರಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. </p>.<p>ಮಂಗಳವಾರ ಬೆಳಿಗ್ಗೆ ಕಾರಾಗೃಹದಲ್ಲಿರುವ ಕೈದಿಗಳ ಲೆಕ್ಕಾಚಾರದ ವೇಳೆ ಸ್ವರ್ಣ ಕುಮಾರ್ ತ್ರಿಪುರ ಜೈಲಿನಿಂದ ನಾಪತ್ತೆಯಾಗಿರುವುದು ಗೊತ್ತಾಗಿದೆ ಎಂದು ಸಿಪಾಹಿಜಲಾ ಜಿಲ್ಲಾ ಮ್ಯಾಜಿಸ್ಟ್ರೇಟ್ ನಾಗೇಶ್ ಕುಮಾರ್ ತಿಳಿಸಿದ್ದಾರೆ. </p>.<p>ದಕ್ಷಿಣ ತ್ರಿಪುರದ ಸಾಂತ್ರಿಬಜಾರ್ ಪ್ರದೇಶದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಸ್ವರ್ಣ ಕುಮಾರ್ ಬಂಧನವಾಗಿತ್ತು. ಆತ ತಪ್ಪಿಸಿಕೊಂಡಿರುವ ಬಗ್ಗೆ ಎಲ್ಲಾ ಠಾಣೆಗಳಿಗೆ ಮಾಹಿತಿ ನೀಡಲಾಗಿದ್ದು, ಆತನ ಬಂಧನಕ್ಕಾಗಿ ತೀವ್ರ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ನಾಗೇಶ್ ಕುಮಾರ್ ತಿಳಿಸಿದ್ದಾರೆ. </p>.<p>ಈ ಉಗ್ರ 2016ರಲ್ಲಿ ಕೇಂದ್ರ ಕಾರಾಗೃಹ ಮತ್ತು 2022ರಲ್ಲಿ ಕಾಂಚನ್ಪುರದಲ್ಲಿರುವ ಉಪ ಕಾರಾಗೃಹದಿಂದಲೂ ತಪ್ಪಿಸಿಕೊಂಡಿದ್ದ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಗರ್ತಲಾ:</strong> ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ನಿಷೇಧಿತ ‘ನ್ಯಾಷನಲ್ ಲಿಬರೇಷನ್ ಫ್ರಂಟ್ ಆಫ್ ತ್ರಿಪುರ’ ಸಂಘಟನೆಯ ಸದಸ್ಯ ತ್ರಿಪುರದಲ್ಲಿರುವ ಸಿಪಾಹಿಜಲಾ ಜಿಲ್ಲೆಯಲ್ಲಿರುವ ಕೇಂದ್ರೀಯ ಕಾರಾಗೃಹದಿಂದ ತಪ್ಪಿಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. </p>.<p>ಆತ ಹೇಗೆ ತಪ್ಪಿಸಿಕೊಂಡಿರಬಹುದು ಎಂಬುದರ ಪರಿಶೀಲನೆಗಾಗಿ ಸಿ.ಸಿ.ಟಿ.ವಿ. ಕ್ಯಾಮೆರಾಗಳ ಪರಿಶೀಲನೆ ನಡೆಸಲಾಗಿದೆ. ಆತ ಬೆಳಗಿನ ಜಾವ ತಪ್ಪಿಸಿಕೊಂಡಿರಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. </p>.<p>ಮಂಗಳವಾರ ಬೆಳಿಗ್ಗೆ ಕಾರಾಗೃಹದಲ್ಲಿರುವ ಕೈದಿಗಳ ಲೆಕ್ಕಾಚಾರದ ವೇಳೆ ಸ್ವರ್ಣ ಕುಮಾರ್ ತ್ರಿಪುರ ಜೈಲಿನಿಂದ ನಾಪತ್ತೆಯಾಗಿರುವುದು ಗೊತ್ತಾಗಿದೆ ಎಂದು ಸಿಪಾಹಿಜಲಾ ಜಿಲ್ಲಾ ಮ್ಯಾಜಿಸ್ಟ್ರೇಟ್ ನಾಗೇಶ್ ಕುಮಾರ್ ತಿಳಿಸಿದ್ದಾರೆ. </p>.<p>ದಕ್ಷಿಣ ತ್ರಿಪುರದ ಸಾಂತ್ರಿಬಜಾರ್ ಪ್ರದೇಶದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಸ್ವರ್ಣ ಕುಮಾರ್ ಬಂಧನವಾಗಿತ್ತು. ಆತ ತಪ್ಪಿಸಿಕೊಂಡಿರುವ ಬಗ್ಗೆ ಎಲ್ಲಾ ಠಾಣೆಗಳಿಗೆ ಮಾಹಿತಿ ನೀಡಲಾಗಿದ್ದು, ಆತನ ಬಂಧನಕ್ಕಾಗಿ ತೀವ್ರ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ನಾಗೇಶ್ ಕುಮಾರ್ ತಿಳಿಸಿದ್ದಾರೆ. </p>.<p>ಈ ಉಗ್ರ 2016ರಲ್ಲಿ ಕೇಂದ್ರ ಕಾರಾಗೃಹ ಮತ್ತು 2022ರಲ್ಲಿ ಕಾಂಚನ್ಪುರದಲ್ಲಿರುವ ಉಪ ಕಾರಾಗೃಹದಿಂದಲೂ ತಪ್ಪಿಸಿಕೊಂಡಿದ್ದ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>