<p><strong>ನವದೆಹಲಿ:</strong> ನಿರ್ಣಾಯಕ ಹುಲಿ ಸಂರಕ್ಷಿತ ಪ್ರದೇಶಗಳ ಗಡಿಯಿಂದ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಚಟುವಟಿಕೆಗಳನ್ನು ಮುಂದುವರೆಸುವುದು ಕಳೆದ ವರ್ಷದ ಏಪ್ರಿಲ್ನ ತನ್ನ ಆದೇಶದ ನಿಂದನೆ ಮಾಡಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.</p>.<p>ಸುಪ್ರೀಂ ಕೋರ್ಟ್ ತನ್ನ ಏಪ್ರಿಲ್ 26, 2023ರ ತೀರ್ಪಿನಲ್ಲಿ ರಾಷ್ಟ್ರೀಯ ಉದ್ಯಾನ ಮತ್ತು ವನ್ಯಜೀವಿ ಅಭಯಾರಣ್ಯದೊಳಗೆ ಮತ್ತು ಅವುಗಳ ಗಡಿಯಿಂದ 1 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ಅನುಮತಿಸುವುದಿಲ್ಲ ಎಂದು ನಿರ್ದೇಶಿಸಿತ್ತು. </p>.<p>ಏಪ್ರಿಲ್ 26ರ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಆರೋಪಿಸಲಾದ ಎಲ್ಲಾ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸಲು ರಾಜಸ್ಥಾನ ಸರ್ಕಾರಕ್ಕೆ ನಿರ್ದೇಶನವನ್ನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಬಿ. ಆರ್ ಗವಾಯಿ ಅವರ ನೇತೃತ್ವದ ಪೀಠವು ನಡೆಸುತ್ತಿದೆ. </p>.<p>‘ಏ.26ರ ನಮ್ಮ ತೀರ್ಪಿನಲ್ಲಿ ನಾವು ಎಲ್ಲಾ ಸುರಕ್ಷಿತ ಪ್ರದೇಶಗಳ 1 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಿದ್ದೇವೆ. ಈ ತೀರ್ಪು ಸಂರಕ್ಷಿತ ಪ್ರದೇಶ, ರಾಷ್ಟ್ರೀಯ ಉದ್ಯಾನಗಳು, ವನ್ಯಜೀವಿ ಅಭಯಾರಣ್ಯಗಳು ಮತ್ತು ಹುಲಿ ಸಂರಕ್ಷಿತ ಪ್ರದೇಶಗಳಿಗೆ ಅನ್ವಯಿಸುತ್ತದೆ. ಆದರೂ ಈ ಪ್ರದೇಶಗಳ 1 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ಮುಂದುವರೆಸುವುದು ನಮ್ಮ ಆದೇಶವನ್ನು ತಿರಸ್ಕರಿಸುತ್ತದೆ’ ಎಂದು ಪೀಠವು ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನಿರ್ಣಾಯಕ ಹುಲಿ ಸಂರಕ್ಷಿತ ಪ್ರದೇಶಗಳ ಗಡಿಯಿಂದ ಒಂದು ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಚಟುವಟಿಕೆಗಳನ್ನು ಮುಂದುವರೆಸುವುದು ಕಳೆದ ವರ್ಷದ ಏಪ್ರಿಲ್ನ ತನ್ನ ಆದೇಶದ ನಿಂದನೆ ಮಾಡಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.</p>.<p>ಸುಪ್ರೀಂ ಕೋರ್ಟ್ ತನ್ನ ಏಪ್ರಿಲ್ 26, 2023ರ ತೀರ್ಪಿನಲ್ಲಿ ರಾಷ್ಟ್ರೀಯ ಉದ್ಯಾನ ಮತ್ತು ವನ್ಯಜೀವಿ ಅಭಯಾರಣ್ಯದೊಳಗೆ ಮತ್ತು ಅವುಗಳ ಗಡಿಯಿಂದ 1 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ಅನುಮತಿಸುವುದಿಲ್ಲ ಎಂದು ನಿರ್ದೇಶಿಸಿತ್ತು. </p>.<p>ಏಪ್ರಿಲ್ 26ರ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಆರೋಪಿಸಲಾದ ಎಲ್ಲಾ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸಲು ರಾಜಸ್ಥಾನ ಸರ್ಕಾರಕ್ಕೆ ನಿರ್ದೇಶನವನ್ನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಬಿ. ಆರ್ ಗವಾಯಿ ಅವರ ನೇತೃತ್ವದ ಪೀಠವು ನಡೆಸುತ್ತಿದೆ. </p>.<p>‘ಏ.26ರ ನಮ್ಮ ತೀರ್ಪಿನಲ್ಲಿ ನಾವು ಎಲ್ಲಾ ಸುರಕ್ಷಿತ ಪ್ರದೇಶಗಳ 1 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಿದ್ದೇವೆ. ಈ ತೀರ್ಪು ಸಂರಕ್ಷಿತ ಪ್ರದೇಶ, ರಾಷ್ಟ್ರೀಯ ಉದ್ಯಾನಗಳು, ವನ್ಯಜೀವಿ ಅಭಯಾರಣ್ಯಗಳು ಮತ್ತು ಹುಲಿ ಸಂರಕ್ಷಿತ ಪ್ರದೇಶಗಳಿಗೆ ಅನ್ವಯಿಸುತ್ತದೆ. ಆದರೂ ಈ ಪ್ರದೇಶಗಳ 1 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ಮುಂದುವರೆಸುವುದು ನಮ್ಮ ಆದೇಶವನ್ನು ತಿರಸ್ಕರಿಸುತ್ತದೆ’ ಎಂದು ಪೀಠವು ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>