ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಗಾಂಧಿಯನ್ನು ಹುಚ್ಚಾಸ್ಪತ್ರೆಗೆ ಸೇರಿಸಿ: ಕೇಂದ್ರ ಸಚಿವ

Last Updated 1 ಸೆಪ್ಟೆಂಬರ್ 2018, 20:06 IST
ಅಕ್ಷರ ಗಾತ್ರ

ಪಟ್ನಾ:‘ರಾಹುಲ್ ಗಾಂಧಿ ಹುಚ್ಚ. ಆತನನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು’ ಎಂದು ಕೇಂದ್ರ ಸಚಿವ ಅಶ್ವಿನಿ ಕುಮಾರ್ ಛೌಬೆ ಕಿಡಿಕಾರಿದ್ದಾರೆ.

ಇಲ್ಲಿನ ಸಸಾರಾಮ್‌ನಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅವರು ಈ ಮಾತು ಹೇಳಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಆಗಸವಿದ್ದಂತೆ. ಈ ರಾಹುಲ್ ಗಾಂಧಿ ತಿಪ್ಪೆಯಲ್ಲಿನ ಹುಳು. ರಾಹುಲ್ ತನ್ನನ್ನು ತಾನು ಬುದ್ಧಿವಂತ, ಮಹಾಚತುರ ಎಂದು ಕರೆದುಕೊಳ್ಳುತ್ತಾನೆ. ಮೋದಿ ಅವರನ್ನು ಸುಳ್ಳ ಎಂದು ಕರೆಯುತ್ತಾನೆ. ತಲೆಕೆಟ್ಟವರು ಮಾತ್ರ ಇಂತಹ ಮಾತುಗಳನ್ನು ಆಡಬಲ್ಲರು. ಹೀಗಾಗಿ ರಾಹುಲ್ ಗಾಂಧಿಯನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು’ ಎಂದು ಛೌಬೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರಗಳ ತಾಯಿ. ಮಹಾಘಟಬಂಧನವು ಭ್ರಷ್ಟಾಚಾರಿಗಳ ಬಂಧ’ ಎಂದೂ ಅವರು ಕಿಡಿಕಾರಿದ್ದಾರೆ.

ಛೌಬೆ ಈ ರೀತಿಯ ಹೇಳಿಕೆ ನೀಡಿದ್ದು ಇದೇ ಮೊದಲಲ್ಲ. ‘ಸೋನಿಯಾ ಗಾಂಧಿ ಮಹಾಭಾರತದ ಪೂತನಿ’ ಎಂದು ಛೌಬೆ ಈ ಹಿಂದೆ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT