ನಕಲಿ ಮತ್ತು ತಿದ್ದಿದ ದಾಖಲೆಗಳನ್ನು ಆಧರಿಸಿ ಮರಾಠಾ ಸಮುದಾಯಕ್ಕೆ ಮೀಸಲಾತಿ ಒದಗಿಸಲು ಪ್ರಯತ್ನಿಸಲಾಗುತ್ತಿದೆ ಎಂಬ ಭುಜಬಲ್ ಅವರ ಆರೋಪಗಳನ್ನು ಅಲ್ಲಗಳೆದ ಜಾರಂಗೆ, ‘ಅವರಿಗೆ ಏನೂ ಅರ್ಥವಾಗುವುದಿಲ್ಲ. ಇಲ್ಲಿ ಕಾನೂನಿದೆ, ಸರ್ಕಾರವಿದೆ, ಸಮಿತಿಯಿದೆ. ತಜ್ಞರು ಅದರ ಮೇಲೆ ಕೆಲಸ ಮಾಡುತ್ತಿದ್ದಾರೆ. ಆದರೆ, ಭುಜಬಲ್ ಸರ್ಕಾರದ ಬಗ್ಗೆ ಅನುಮಾನ ಪಡುತ್ತಿದ್ದಾರೆ. ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವೀಸ್, ಅಜಿತ್ ಪವಾರ್ ಅವರಿಗೆ ಹಾನಿ ಮಾಡಲು ಭುಜಬಲ್ ಪ್ರಯತ್ನಿಸುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.