‘ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಮತೀಯ ಕಾರಣಕ್ಕೆ ದೌರ್ಜನ್ಯಕ್ಕೆ ಸಿಲುಕಿ ನಿರಾಶ್ರಿತರಾಗಿ ಬಂದ ಹಿಂದೂ, ಸಿಖ್, ಬೌದ್ಧ, ಪಾರ್ಸಿ, ಕ್ರೈಸ್ತ ಧರ್ಮಕ್ಕೆ ಸೇರಿದ ಸುಮಾರು 5 ಲಕ್ಷ ಕುಟುಂಬಗಳಿಗೆ ಪೌರತ್ವದ ಸೌಲಭ್ಯ ಸಿಗುತ್ತದೆ. ಈ ನಿರ್ಧಾರದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ’ ಎಂದು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.