<p><strong>ಕೊಟ್ಟಾಯಂ, ಕೇರಳ: ‘</strong>ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿ 2018ರಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಲು ಬಿಜೆಪಿಯೇ ಕಾರಣ. ಎಲ್ಡಿಎಫ್ ಸರ್ಕಾರದ ಪ್ರಸ್ತುತ ನಿಲುವು 2007ರಲ್ಲಿ ಸಲ್ಲಿಸಿದ ಪ್ರಮಾಣಪತ್ರದ ವಿಚಾರಕ್ಕೆ ಬದ್ಧವಾಗಿರಲಿದೆ’ ಎಂದು ಕೇರಳದ ದೇವಸ್ವಂ ಸಚಿವ ವಿ.ಎನ್.ವಾಸವನ್ ತಿಳಿಸಿದ್ದಾರೆ.</p>.<p>‘ಈ ವಿಷಯವನ್ನು ಧಾರ್ಮಿಕ ವಿಚಾರಗಳ ಪರಿಣತರೇ ನಿರ್ಧರಿಸಬೇಕು ಎಂದು 2007ರಲ್ಲಿಯೇ ನಾವು ಪ್ರಮಾಣಪತ್ರವನ್ನು ಸಲ್ಲಿಸಿದ್ದೆವು. ಈ ವಿಚಾರಕ್ಕೆ ಈಗಲೂ ನಾವು ಬದ್ಧರಾಗಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.</p>.<p>‘ಋತುಸ್ರಾವ ಆಗುವ ವಯಸ್ಸಿನ ಮಹಿಳೆಯರಿಗೆ ಕೂಡ ಶಬರಿಮಲೆ ದೇವಸ್ಥಾನ ಪ್ರವೇಶಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ನ 9 ಸದಸ್ಯರ ಪೀಠವು 2018ರ ಸೆಪ್ಟೆಂಬರ್ನಲ್ಲಿ ತೀರ್ಪು ನೀಡಿತ್ತು. ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ವಕೀಲರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ ಬಳಿಕವೇ ನ್ಯಾಯಾಲಯದಿಂದ ಈ ತೀರ್ಪು ಬಂದಿದೆ’ ಎಂದು ವಾಸವನ್ ಹೇಳಿದ್ದಾರೆ.</p>.<p class="bodytext">‘ಮಹಿಳೆಯರ ಪ್ರವೇಶಾತಿ ಕುರಿತಂತೆ ರಾಜ್ಯ ಸರ್ಕಾರದ ಅಭಿಪ್ರಾಯವನ್ನು ಸುಪ್ರೀಂ ಕೋರ್ಟ್ ಕೇಳಿಲ್ಲ, ಸಾಂವಿಧಾನಿಕ ವಿಚಾರಗಳಿಗೆ ಸಂಬಂಧಿಸಿದಂತೆ ಕೆಲವೊಂದು ಸ್ಪಷ್ಟನೆಗಳನ್ನು ಮಾತ್ರ ಕೋರಿದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p>.<p class="bodytext">‘ನ್ಯಾಯಾಲಯವು ಕೋರಿದ ವಿವರಣೆಗೆ ಸಂಬಂಧಿಸಿದಂತೆ ಅಡ್ವೊಕೇಟ್ ಜನರಲ್ ಹಾಗೂ ಸಂವಿಧಾನ ತಜ್ಞರೇ ಉತ್ತರ ನೀಡಲಿದ್ದಾರೆ. ಅದರಂತೆ ಅವರು ನೋಡಿಕೊಳ್ಳಲಿದ್ದಾರೆ’ ಎಂದು ಸಚಿವರು ವಿವರಿಸಿದ್ದಾರೆ.</p>.<p class="bodytext">‘ಒಂದೊಮ್ಮೆ ರಾಜ್ಯ ಸರ್ಕಾರದ ಅಭಿಪ್ರಾಯವನ್ನು ಕೋರಿದರೆ, ಈ ವಿಷಯದ ಕುರಿತು ಸರ್ಕಾರದ ಅಭಿಪ್ರಾಯವನ್ನು ಮಂಡಿಸಲಾಗುವುದು. 2007ರಲ್ಲಿ ಸಲ್ಲಿಸಿದ ಪ್ರಮಾಣಪತ್ರಕ್ಕೆ ಸರ್ಕಾರ ಬದ್ಧವಾಗಿರಲಿದೆ. ಸರ್ಕಾರದ ನಿಲುವಿಗೆ ಸಿಪಿಎಂ ಕೂಡ ಬದ್ಧವಾಗಿದೆ. ನಾವು ಯಾವತ್ತಿಗೂ ಭಕ್ತರ ಜೊತೆಗೆ ನಿಲ್ಲಲಿದ್ದೇವೆ’ ಎಂದು ಸಚಿವ ವಿ.ಎನ್.ವಾಸವನ್ ತಿಳಿಸಿದ್ದಾರೆ.</p>.<p class="bodytext">ವಿರೋಧ ಪಕ್ಷಗಳೇ ಕಾರಣ: ‘ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವು. ವಿವಿಧ ಸಮಸ್ಯೆಗಳಿಗೆ ಪ್ರತಿಕೂಲವಾದ ತೀರ್ಪುಗಳು ಬಂದಿವೆ. ಹಲವು ವಿಷಯಗಳಲ್ಲಿ ವಿರೋಧ ಪಕ್ಷಗಳಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಉಂಟಾಗಿದೆ’ ಎಂದು ಹೇಳಿದ್ದಾರೆ.</p>.<p class="bodytext">ದೇವಸ್ವಂ ವಿರೋಧ: ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶ ಕಲ್ಪಿಸುವುದನ್ನು ವಿರೋಧಿಸಿ ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿತ್ತು.</p>.<p>‘ದೇವಾಲಯಗಳು, ಅದರ ನಂಬಿಕೆ ಹಾಗೂ ಪದ್ಧತಿಗಳನ್ನು ರಕ್ಷಿಸಲು ಮಂಡಳಿಯು ಬದ್ಧವಾಗಿದೆ’ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಅಧ್ಯಕ್ಷ ಕೆ. ಜಯಕುಮಾರ್ ಈ ಹಿಂದೆ ಸ್ಪಷ್ಟಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟಾಯಂ, ಕೇರಳ: ‘</strong>ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿ 2018ರಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಲು ಬಿಜೆಪಿಯೇ ಕಾರಣ. ಎಲ್ಡಿಎಫ್ ಸರ್ಕಾರದ ಪ್ರಸ್ತುತ ನಿಲುವು 2007ರಲ್ಲಿ ಸಲ್ಲಿಸಿದ ಪ್ರಮಾಣಪತ್ರದ ವಿಚಾರಕ್ಕೆ ಬದ್ಧವಾಗಿರಲಿದೆ’ ಎಂದು ಕೇರಳದ ದೇವಸ್ವಂ ಸಚಿವ ವಿ.ಎನ್.ವಾಸವನ್ ತಿಳಿಸಿದ್ದಾರೆ.</p>.<p>‘ಈ ವಿಷಯವನ್ನು ಧಾರ್ಮಿಕ ವಿಚಾರಗಳ ಪರಿಣತರೇ ನಿರ್ಧರಿಸಬೇಕು ಎಂದು 2007ರಲ್ಲಿಯೇ ನಾವು ಪ್ರಮಾಣಪತ್ರವನ್ನು ಸಲ್ಲಿಸಿದ್ದೆವು. ಈ ವಿಚಾರಕ್ಕೆ ಈಗಲೂ ನಾವು ಬದ್ಧರಾಗಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.</p>.<p>‘ಋತುಸ್ರಾವ ಆಗುವ ವಯಸ್ಸಿನ ಮಹಿಳೆಯರಿಗೆ ಕೂಡ ಶಬರಿಮಲೆ ದೇವಸ್ಥಾನ ಪ್ರವೇಶಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ನ 9 ಸದಸ್ಯರ ಪೀಠವು 2018ರ ಸೆಪ್ಟೆಂಬರ್ನಲ್ಲಿ ತೀರ್ಪು ನೀಡಿತ್ತು. ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ವಕೀಲರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ ಬಳಿಕವೇ ನ್ಯಾಯಾಲಯದಿಂದ ಈ ತೀರ್ಪು ಬಂದಿದೆ’ ಎಂದು ವಾಸವನ್ ಹೇಳಿದ್ದಾರೆ.</p>.<p class="bodytext">‘ಮಹಿಳೆಯರ ಪ್ರವೇಶಾತಿ ಕುರಿತಂತೆ ರಾಜ್ಯ ಸರ್ಕಾರದ ಅಭಿಪ್ರಾಯವನ್ನು ಸುಪ್ರೀಂ ಕೋರ್ಟ್ ಕೇಳಿಲ್ಲ, ಸಾಂವಿಧಾನಿಕ ವಿಚಾರಗಳಿಗೆ ಸಂಬಂಧಿಸಿದಂತೆ ಕೆಲವೊಂದು ಸ್ಪಷ್ಟನೆಗಳನ್ನು ಮಾತ್ರ ಕೋರಿದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p>.<p class="bodytext">‘ನ್ಯಾಯಾಲಯವು ಕೋರಿದ ವಿವರಣೆಗೆ ಸಂಬಂಧಿಸಿದಂತೆ ಅಡ್ವೊಕೇಟ್ ಜನರಲ್ ಹಾಗೂ ಸಂವಿಧಾನ ತಜ್ಞರೇ ಉತ್ತರ ನೀಡಲಿದ್ದಾರೆ. ಅದರಂತೆ ಅವರು ನೋಡಿಕೊಳ್ಳಲಿದ್ದಾರೆ’ ಎಂದು ಸಚಿವರು ವಿವರಿಸಿದ್ದಾರೆ.</p>.<p class="bodytext">‘ಒಂದೊಮ್ಮೆ ರಾಜ್ಯ ಸರ್ಕಾರದ ಅಭಿಪ್ರಾಯವನ್ನು ಕೋರಿದರೆ, ಈ ವಿಷಯದ ಕುರಿತು ಸರ್ಕಾರದ ಅಭಿಪ್ರಾಯವನ್ನು ಮಂಡಿಸಲಾಗುವುದು. 2007ರಲ್ಲಿ ಸಲ್ಲಿಸಿದ ಪ್ರಮಾಣಪತ್ರಕ್ಕೆ ಸರ್ಕಾರ ಬದ್ಧವಾಗಿರಲಿದೆ. ಸರ್ಕಾರದ ನಿಲುವಿಗೆ ಸಿಪಿಎಂ ಕೂಡ ಬದ್ಧವಾಗಿದೆ. ನಾವು ಯಾವತ್ತಿಗೂ ಭಕ್ತರ ಜೊತೆಗೆ ನಿಲ್ಲಲಿದ್ದೇವೆ’ ಎಂದು ಸಚಿವ ವಿ.ಎನ್.ವಾಸವನ್ ತಿಳಿಸಿದ್ದಾರೆ.</p>.<p class="bodytext">ವಿರೋಧ ಪಕ್ಷಗಳೇ ಕಾರಣ: ‘ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದವು. ವಿವಿಧ ಸಮಸ್ಯೆಗಳಿಗೆ ಪ್ರತಿಕೂಲವಾದ ತೀರ್ಪುಗಳು ಬಂದಿವೆ. ಹಲವು ವಿಷಯಗಳಲ್ಲಿ ವಿರೋಧ ಪಕ್ಷಗಳಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಉಂಟಾಗಿದೆ’ ಎಂದು ಹೇಳಿದ್ದಾರೆ.</p>.<p class="bodytext">ದೇವಸ್ವಂ ವಿರೋಧ: ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶ ಕಲ್ಪಿಸುವುದನ್ನು ವಿರೋಧಿಸಿ ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿತ್ತು.</p>.<p>‘ದೇವಾಲಯಗಳು, ಅದರ ನಂಬಿಕೆ ಹಾಗೂ ಪದ್ಧತಿಗಳನ್ನು ರಕ್ಷಿಸಲು ಮಂಡಳಿಯು ಬದ್ಧವಾಗಿದೆ’ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಅಧ್ಯಕ್ಷ ಕೆ. ಜಯಕುಮಾರ್ ಈ ಹಿಂದೆ ಸ್ಪಷ್ಟಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>