<p><strong>ಮುಂಬೈ: </strong>ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿಕಬ್ಬಿನ ಗದ್ದೆಗಳಲ್ಲಿ ಕೆಲಸ ಮಾಡುವ ಮಹಿಳೆಯರು ಮುಟ್ಟಿನ ದಿನಗಳಲ್ಲಿ ವೇತನ ಕೈತಪ್ಪಿ ಹೋಗುವ ಕಾರಣಕ್ಕಾಗಿ ಶಸ್ತ್ರಚಿಕಿತ್ಸೆ ಮೂಲಕ ಗರ್ಭಕೋಶ ತೆಗೆಸಿಕೊಳ್ಳುತ್ತಿರುವ ಕುರಿತು ಸಚಿವ ನಿತಿನ್ ರಾವುತ್, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಒಂದು ವೇಳೆ ಕಬ್ಬಿನ ಗದ್ದೆಗಳ ಮಾಲೀಕರು ಮುಟ್ಟಿನ ದಿನಗಳಲ್ಲೂ ಈ ಮಹಿಳೆಯರಿಗೆ ವೇತನ ಕೊಡುವಂತಿದ್ದರೆ ಗರ್ಭಕೋಶ ತೆಗೆಸಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತಕ್ರಮ ಕೈಗೊಳ್ಳಬೇಕೆಂದು ನಿತಿನ್ ಪತ್ರದಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.</p>.<p>‘ಮರಾಠವಾಡ ಪ್ರದೇಶದಲ್ಲಿರುವ ಕಬ್ಬಿನ ಗದ್ದೆಗಳಲ್ಲಿ ಬಹುಸಂಖ್ಯೆಯಲ್ಲಿ ಮಹಿಳೆಯರು ಕೂಲಿಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ.ಸುಮಾರು ಆರು ತಿಂಗಳ ಕಾಲ ಈ ಗದ್ದೆಗಳಲ್ಲಿ ಮಹಿಳೆಯರು ಕೂಲಿ ಕೆಲಸ ಮಾಡುತ್ತಾರೆ. ಅವರ ಮಾಸಿಕ ಋತುಸ್ರಾವದ ದಿನಗಳಲ್ಲಿಮಹಿಳೆಯರು ಕೂಲಿಕೆಲಸಕ್ಕೆ ಗೈರು ಹಾಜರಾಗುತ್ತಾರೆ. ಈ ಕಾರಣಕ್ಕಾಗಿ ಮಾಲೀಕರು ಗೈರು ಹಾಜರಾದ ದಿನಗಳ ಕೂಲಿಯನ್ನುಪಾವತಿಸುವುದಿಲ್ಲ. ಹೀಗಾಗಿ ಮುಟ್ಟಿನ ದಿನಗಳಲ್ಲಿ ಕೂಲಿ ತಪ್ಪಬಾರದು ಎನ್ನುವ ಕಾರಣಕ್ಕಾಗಿ ಸುಮಾರು 30 ಸಾವಿರಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಶಸ್ತ್ರಚಿಕಿತ್ಸೆಯ ಮೂಲಕ ತಮ್ಮ ಗರ್ಭಕೋಶಗಳನ್ನು ತೆಗೆಸಿಕೊಂಡಿದ್ದಾರೆ’ ಎಂದು ನಿತಿನ್ ಪತ್ರದಲ್ಲಿ ವಿವರವಾಗಿ ಮಾಹಿತಿ ನೀಡಿದ್ದಾರೆ.</p>.<p>ಮರಾಠವಾಡದಲ್ಲಿ ಮಹಿಳಾ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಮಾನವೀಯ ನೆಲೆಯಲ್ಲಿ ಪರಿಹರಿಸಲು ಸಂಬಂಧಪಟ್ಟ ಇಲಾಖೆಗೆ ಸರ್ಕಾರ ಆದೇಶಿಸಬೇಕೆಂದು ನಿತಿನ್ ಕೋರಿದ್ದಾರೆ.</p>.<p>ಕಾಂಗ್ರೆಸ್ ಪಕ್ಷದ ನಿತಿನ್ ಅವರು ಮಹಾರಾಷ್ಟ್ರ ಸರ್ಕಾರದಲ್ಲಿ ಲೋಕೋಪಯೋಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಬುಡಕಟ್ಟು ಕಲ್ಯಾಣ, ಪರಿಹಾರ ಮತ್ತು ಪುನರ್ವಸತಿ ಹಾಗೂ ಜವಳಿ ಖಾತೆಯ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿಕಬ್ಬಿನ ಗದ್ದೆಗಳಲ್ಲಿ ಕೆಲಸ ಮಾಡುವ ಮಹಿಳೆಯರು ಮುಟ್ಟಿನ ದಿನಗಳಲ್ಲಿ ವೇತನ ಕೈತಪ್ಪಿ ಹೋಗುವ ಕಾರಣಕ್ಕಾಗಿ ಶಸ್ತ್ರಚಿಕಿತ್ಸೆ ಮೂಲಕ ಗರ್ಭಕೋಶ ತೆಗೆಸಿಕೊಳ್ಳುತ್ತಿರುವ ಕುರಿತು ಸಚಿವ ನಿತಿನ್ ರಾವುತ್, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಒಂದು ವೇಳೆ ಕಬ್ಬಿನ ಗದ್ದೆಗಳ ಮಾಲೀಕರು ಮುಟ್ಟಿನ ದಿನಗಳಲ್ಲೂ ಈ ಮಹಿಳೆಯರಿಗೆ ವೇತನ ಕೊಡುವಂತಿದ್ದರೆ ಗರ್ಭಕೋಶ ತೆಗೆಸಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತಕ್ರಮ ಕೈಗೊಳ್ಳಬೇಕೆಂದು ನಿತಿನ್ ಪತ್ರದಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.</p>.<p>‘ಮರಾಠವಾಡ ಪ್ರದೇಶದಲ್ಲಿರುವ ಕಬ್ಬಿನ ಗದ್ದೆಗಳಲ್ಲಿ ಬಹುಸಂಖ್ಯೆಯಲ್ಲಿ ಮಹಿಳೆಯರು ಕೂಲಿಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ.ಸುಮಾರು ಆರು ತಿಂಗಳ ಕಾಲ ಈ ಗದ್ದೆಗಳಲ್ಲಿ ಮಹಿಳೆಯರು ಕೂಲಿ ಕೆಲಸ ಮಾಡುತ್ತಾರೆ. ಅವರ ಮಾಸಿಕ ಋತುಸ್ರಾವದ ದಿನಗಳಲ್ಲಿಮಹಿಳೆಯರು ಕೂಲಿಕೆಲಸಕ್ಕೆ ಗೈರು ಹಾಜರಾಗುತ್ತಾರೆ. ಈ ಕಾರಣಕ್ಕಾಗಿ ಮಾಲೀಕರು ಗೈರು ಹಾಜರಾದ ದಿನಗಳ ಕೂಲಿಯನ್ನುಪಾವತಿಸುವುದಿಲ್ಲ. ಹೀಗಾಗಿ ಮುಟ್ಟಿನ ದಿನಗಳಲ್ಲಿ ಕೂಲಿ ತಪ್ಪಬಾರದು ಎನ್ನುವ ಕಾರಣಕ್ಕಾಗಿ ಸುಮಾರು 30 ಸಾವಿರಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಶಸ್ತ್ರಚಿಕಿತ್ಸೆಯ ಮೂಲಕ ತಮ್ಮ ಗರ್ಭಕೋಶಗಳನ್ನು ತೆಗೆಸಿಕೊಂಡಿದ್ದಾರೆ’ ಎಂದು ನಿತಿನ್ ಪತ್ರದಲ್ಲಿ ವಿವರವಾಗಿ ಮಾಹಿತಿ ನೀಡಿದ್ದಾರೆ.</p>.<p>ಮರಾಠವಾಡದಲ್ಲಿ ಮಹಿಳಾ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಮಾನವೀಯ ನೆಲೆಯಲ್ಲಿ ಪರಿಹರಿಸಲು ಸಂಬಂಧಪಟ್ಟ ಇಲಾಖೆಗೆ ಸರ್ಕಾರ ಆದೇಶಿಸಬೇಕೆಂದು ನಿತಿನ್ ಕೋರಿದ್ದಾರೆ.</p>.<p>ಕಾಂಗ್ರೆಸ್ ಪಕ್ಷದ ನಿತಿನ್ ಅವರು ಮಹಾರಾಷ್ಟ್ರ ಸರ್ಕಾರದಲ್ಲಿ ಲೋಕೋಪಯೋಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಬುಡಕಟ್ಟು ಕಲ್ಯಾಣ, ಪರಿಹಾರ ಮತ್ತು ಪುನರ್ವಸತಿ ಹಾಗೂ ಜವಳಿ ಖಾತೆಯ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>