ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಘಟನೆ ಅತ್ಯಂತ ದುರದೃಷ್ಟಕರ. ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ವಲ್ಪ ಸಮಯದಲ್ಲೇ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಘಟನಾ ಸ್ಥಳದ ಪ್ರಾಥಮಿಕ ಮಾಹಿತಿ ಪ್ರಕಾರ, ಕೆಲವು ಯುವಕರ ನಡುವೆ ವಾಗ್ವಾದ ನಡೆದಿದೆ ಮತ್ತು ಕೆಲವೇ ಸೆಕೆಂಡುಗಳಲ್ಲಿ ನೂಕುನುಗ್ಗಲು ಉಂಟಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.