‘ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಎರಡು ದ್ವಿಚಕ್ರ ವಾಹನದಲ್ಲಿ ಬಂದ ಯುವಕರುಗಳು ಈ ಕೆಲಸ ನಡೆಸಿದ್ದಾರೆ.ಕಚ್ಚಾ ಬಾಂಬ್ ಎಸೆದ ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾರೆ. ಕೃತ್ಯ ನಡೆಸಿದವರ ಬಗ್ಗೆ ಈವರೆಗೆ ಸುಳಿವು ಸಿಕ್ಕಿಲ್ಲ. ಈ ಸಂಬಂಧ ಶಿವಂ ಯಾದವ್ ಎಂಬುವವರು ಮತ್ತು ಆತನ ಸಹಚರರ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ‘ ಎಂದು ಜೂನ್ಸಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.