ಮೂರು ದಿನಗಳ ಹಿಂದೆ ಛತ್ತೀಸ್ಗಡದ ಬಿಜಾಪುರ– ಬಸ್ತಾರ್ ಅರಣ್ಯ ಪ್ರದೇಶದಲ್ಲಿ ಮಾವೊವಾದಿ ಉಗ್ರರು, ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯ ನಂತರ ರಾಕೇಶ್ವರ ಸಿಂಗ್ ಮನ್ಹಾಸ್ ನಾಪತ್ತೆಯಾಗಿದ್ದಾರೆ. ಅವರು ನಾಪತ್ತೆಯಾಗಿರುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲದಿದ್ದರೂ, ಛತ್ತೀಸ್ಗಡದ ‘ಐಬಿಸಿ 24‘ – ಸ್ಥಳೀಯ ವಾಹಿನಿ ‘ಮನ್ಹಾಸ್ ಜೀವಂತವಾಗಿದ್ದಾರೆ. ಅವರನ್ನು ನಕ್ಸಲರು ಅಪಹರಿಸಿದ್ದಾರೆ‘ ಎಂದು ಭಾನುವಾರ ಬೆಳಿಗ್ಗೆ ನಮಗೆ ತಿಳಿಸಿದ್ದಾಗಿ‘ ಕುಟುಂಬದ ಸದಸ್ಯರು ಹೇಳಿದ್ದಾರೆ.