ಜಯಕುಮಾರ್ ಅವರ ಮೃತದೇಹವನ್ನು ವಶಕ್ಕೆ ತೆಗೆದುಕೊಂಡ ಬಳಿಕ ಪ್ರಕರಣ ಕುರಿತು ಮಾತನಾಡಿದ ತಿರುನೆಲ್ವೇಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಸಿಲಂಬರಸನ್ ಅವರು, ಎಂಟು ಮಂದಿ ತಮಗೆ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಜಯಕುಮಾರ್ ಅವರು ಏಪ್ರಿಲ್ 30ರಂದು ತಮಗೆ ಪತ್ರ ಬರೆದಿದ್ದರು. ಅವರ ಪಕ್ಷದ ಮುಖಂಡರ ಹೆಸರನ್ನೂ ಪತ್ರದಲ್ಲಿ ಉಲ್ಲೇಖಿಸಿದ್ದರು. ಕುಠಲಿಂಗಮ್ ಗ್ರಾಮ ಪಂಚಾಯತಿ ಅಧ್ಯಕ್ಷ ಆನಂದ ರಾಜ, ನಂಗುನೇರಿ ಕಾಂಗ್ರೆಸ್ ಶಾಸಕ ರೂಬಿ ಮನೋಹರನ್, ತಮಿಳುನಾಡು ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಕೆ.ವಿ. ಥಂಗಬಾಲು ಮತ್ತು ನಾಲ್ವರು ಇತರರು ತಮ್ಮಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು ಎಂದು ಹೇಳಿದ್ದಾರೆ. ಜಯಕುಮಾರ್ ಅವರ ಕೈ, ಕಾಲುಗಳನ್ನು ವಿದ್ಯುತ್ ಕೇಬಲ್ಗಳಿಂದ ಕಟ್ಟಲಾಗಿದೆ ಎಂದು ಅವರು ತಿಳಿಸಿದ್ದಾರೆ.