<p><strong>ಶ್ರೀನಗರ:</strong> ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಗಡೋಲ್ ಅರಣ್ಯದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಪ್ಯಾರಾ ಕಮಾಂಡೊಗಳ ಮೃತದೇಹ ಪತ್ತೆಯಾಗಿದೆ. ಇದರೊಂದಿಗೆ ಕಳೆದ 5 ದಿನಗಳಿಂದ ನಡೆಯುತ್ತಿದ್ದ ಶೋಧ ಕಾರ್ಯಾಚರಣೆ ಶನಿವಾರ ಮುಕ್ತಾಯಗೊಂಡಿದೆ.</p>.<p>ಕಿಶ್ತ್ವಾರ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಮಾಹಿತಿ ಆಧರಿಸಿ ಅಕ್ಟೋಬರ್ 6 ಮತ್ತು 7ರ ಮಧ್ಯರಾತ್ರಿಯಲ್ಲಿ ಕಾರ್ಯಾಚರಣೆ ನಡೆದಿತ್ತು. ಈ ವೇಳೆ ತೀವ್ರ ಹಿಮಪಾತವಾದ ಕಾರಣ ಕಾರ್ಯಾಚರಣೆಯ ಭಾಗವಾಗಿದ್ದ ಲ್ಯಾನ್ಸ್ ಹವಾಲ್ದಾರ್ ಪಲಾಶ್ ಘೋಷ್ ಹಾಗೂ ಲ್ಯಾನ್ಸ್ ನಾಯಕ್ ಸುಜಯ್ ಘೋಷ್ ಅವರು ಸಂಪರ್ಕ ಕಳೆದುಕೊಂಡು ನಾಪತ್ತೆಯಾಗಿದ್ದರು. </p>.<p>ನಾಪತ್ತೆಯಾದವರ ಹುಡುಕಾಟಕ್ಕಾಗಿ ಶೋಧ ಕಾರ್ಯಾಚರಣೆ ನಡೆಯುತ್ತಲೇ ಇತ್ತು. ಆದರೆ, ಶುಕ್ರವಾರ ಒಬ್ಬ ಯೋಧನ ಮೃತದೇಹ ಪತ್ತೆಯಾಗಿದ್ದು, ಶನಿವಾರ ಮತ್ತೊಬ್ಬ ಯೋಧನ ಮೃತದೇಹ ಸಿಕ್ಕಿದೆ. ಹೀಗಾಗಿ ಶೋಧ ಕಾರ್ಯಾಚರಣೆಯನ್ನು ಮುಕ್ತಾಯಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಕಾರ್ಯಾಚರಣೆ ವೇಳೆ ಹುತಾತ್ಮರಾದ ಯೋಧರಿಗೆ ಶ್ರೀನಗರದ ಚಿನಾರ್ ಕಾರ್ಪ್ಸ್ ತಂಡವು ಗೌರವನಮನ ಸಲ್ಲಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಗಡೋಲ್ ಅರಣ್ಯದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಪ್ಯಾರಾ ಕಮಾಂಡೊಗಳ ಮೃತದೇಹ ಪತ್ತೆಯಾಗಿದೆ. ಇದರೊಂದಿಗೆ ಕಳೆದ 5 ದಿನಗಳಿಂದ ನಡೆಯುತ್ತಿದ್ದ ಶೋಧ ಕಾರ್ಯಾಚರಣೆ ಶನಿವಾರ ಮುಕ್ತಾಯಗೊಂಡಿದೆ.</p>.<p>ಕಿಶ್ತ್ವಾರ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಮಾಹಿತಿ ಆಧರಿಸಿ ಅಕ್ಟೋಬರ್ 6 ಮತ್ತು 7ರ ಮಧ್ಯರಾತ್ರಿಯಲ್ಲಿ ಕಾರ್ಯಾಚರಣೆ ನಡೆದಿತ್ತು. ಈ ವೇಳೆ ತೀವ್ರ ಹಿಮಪಾತವಾದ ಕಾರಣ ಕಾರ್ಯಾಚರಣೆಯ ಭಾಗವಾಗಿದ್ದ ಲ್ಯಾನ್ಸ್ ಹವಾಲ್ದಾರ್ ಪಲಾಶ್ ಘೋಷ್ ಹಾಗೂ ಲ್ಯಾನ್ಸ್ ನಾಯಕ್ ಸುಜಯ್ ಘೋಷ್ ಅವರು ಸಂಪರ್ಕ ಕಳೆದುಕೊಂಡು ನಾಪತ್ತೆಯಾಗಿದ್ದರು. </p>.<p>ನಾಪತ್ತೆಯಾದವರ ಹುಡುಕಾಟಕ್ಕಾಗಿ ಶೋಧ ಕಾರ್ಯಾಚರಣೆ ನಡೆಯುತ್ತಲೇ ಇತ್ತು. ಆದರೆ, ಶುಕ್ರವಾರ ಒಬ್ಬ ಯೋಧನ ಮೃತದೇಹ ಪತ್ತೆಯಾಗಿದ್ದು, ಶನಿವಾರ ಮತ್ತೊಬ್ಬ ಯೋಧನ ಮೃತದೇಹ ಸಿಕ್ಕಿದೆ. ಹೀಗಾಗಿ ಶೋಧ ಕಾರ್ಯಾಚರಣೆಯನ್ನು ಮುಕ್ತಾಯಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಕಾರ್ಯಾಚರಣೆ ವೇಳೆ ಹುತಾತ್ಮರಾದ ಯೋಧರಿಗೆ ಶ್ರೀನಗರದ ಚಿನಾರ್ ಕಾರ್ಪ್ಸ್ ತಂಡವು ಗೌರವನಮನ ಸಲ್ಲಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>