<p><strong>ಕೋಲ್ಕತ್ತ:</strong> ‘ಪಶ್ಚಿಮ ಬಂಗಾಳ ಪಡೆಯಬಹುದಾದ ಅತ್ಯುತ್ತಮ ಮುಖ್ಯಮಂತ್ರಿ ಸುವೇಂದು ಅಧಿಕಾರಿ. ಮುಂಬರುವ ದಿನಗಳಲ್ಲಿ ಅವರು ರಾಜ್ಯದಲ್ಲಿ ನಿಜವಾದ ಬದಲಾವಣೆಗಳನ್ನು ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ’ ಎಂದು ಹಿರಿಯ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಹೇಳಿದರು.</p><p>ಸುವೇಂದು ಅಧಿಕಾರಿ ಅವರು ಶನಿವಾರ ಮಿಥುನ್ ಚಕ್ರವರ್ತಿ ಅವರ ನಿವಾಸಕ್ಕೆ ಭೇಟಿ ನೀಡಿ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.</p><p>ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಚಕ್ರವರ್ತಿ, ‘ಸುವೇಂದು ಅಧಿಕಾರಿ ಅವರಿಗಿಂತ ಉತ್ತಮ ಮುಖ್ಯಮಂತ್ರಿ ಇರಲು ಸಾಧ್ಯವಿಲ್ಲ ಎಂದು ನಾನು ಜನರಿಗೆ ಭರವಸೆ ನೀಡಬಲ್ಲೆ. ಅವರೇ ಅತ್ಯುತ್ತಮ. ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೇ ಕೆಲಸ ಮಾಡಲು ಪ್ರಾರಂಭಿಸಿದ್ದಾರೆ’ ಎಂದು ತಿಳಿಸಿದರು.</p><p>‘ಚಕ್ರವರ್ತಿ ಅವರು ಕಳೆದ ಐದಾರು ವರ್ಷಗಳಿಂದ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಮತ್ತು ರಾಜ್ಯದಲ್ಲಿ ರಾಜಕೀಯ ಬದಲಾವಣೆಯನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ’ ಎಂದು ಸುವೇಂದು ಅಧಿಕಾರಿ ಹೇಳಿದರು.</p><p>‘ಚಕ್ರವರ್ತಿ ಅವರು ನನಗಿಂತ ಹಿರಿಯರು. ನಾನು ಅವರ ಆಶೀರ್ವಾದ ಪಡೆಯಲು ಬಂದಿದ್ದೆ. ಮಾಡಬೇಕಾದ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಿದ್ದೇವೆ. ಆದರೆ, ನಾವು ಚರ್ಚಿಸಿದ ಕಾರ್ಯಸೂಚಿ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ’ ಎಂದರು.</p><p>‘ಚಕ್ರವರ್ತಿ ಅವರು ಯಾವುದೇ ಹುದ್ದೆಯನ್ನು ಬಯಸದ ಮಹನೀಯರಾಗಿದ್ದು, ರಾಜ್ಯದಾದ್ಯಂತ ಹೆಚ್ಚಿನ ಸಂಖ್ಯೆಯ ರ್ಯಾಲಿಗಳು ಮತ್ತು ಆಂತರಿಕ ಸಭೆಗಳನ್ನು ನಡೆಸುವ ಮೂಲಕ ಚುನಾವಣಾ ಪ್ರಚಾರದ ಸಮಯದಲ್ಲಿ ತಮ್ಮ ಸರ್ವಸ್ವವನ್ನೂ ಧಾರೆ ಎರೆದಿದ್ದಾರೆ’ ಎಂದು ಅಧಿಕಾರಿ ಸ್ಮರಿಸಿದರು.</p><p>ಆರೋಗ್ಯ ಸಮಸ್ಯೆಗಳಿದ್ದಾಗಲೂ ಚಕ್ರವರ್ತಿ ಅವರು ಉತ್ತರ ಮತ್ತು ದಕ್ಷಿಣ ಬಂಗಾಳದಾದ್ಯಂತ ವ್ಯಾಪಕ ಪ್ರಚಾರ ನಡೆಸಿದ್ದರು. ಬಿಡುವಿಲ್ಲದ ಚುನಾವಣಾ ವೇಳಾಪಟ್ಟಿಯ ನಡುವೆ ದೈಹಿಕ ಶ್ರಮ ಉಂಟಾದರೂ ಪ್ರಚಾರವನ್ನು ಮುಂದುವರೆಸಿದ್ದರು’ ಎಂದೂ ಅವರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ‘ಪಶ್ಚಿಮ ಬಂಗಾಳ ಪಡೆಯಬಹುದಾದ ಅತ್ಯುತ್ತಮ ಮುಖ್ಯಮಂತ್ರಿ ಸುವೇಂದು ಅಧಿಕಾರಿ. ಮುಂಬರುವ ದಿನಗಳಲ್ಲಿ ಅವರು ರಾಜ್ಯದಲ್ಲಿ ನಿಜವಾದ ಬದಲಾವಣೆಗಳನ್ನು ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ’ ಎಂದು ಹಿರಿಯ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಹೇಳಿದರು.</p><p>ಸುವೇಂದು ಅಧಿಕಾರಿ ಅವರು ಶನಿವಾರ ಮಿಥುನ್ ಚಕ್ರವರ್ತಿ ಅವರ ನಿವಾಸಕ್ಕೆ ಭೇಟಿ ನೀಡಿ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.</p><p>ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಚಕ್ರವರ್ತಿ, ‘ಸುವೇಂದು ಅಧಿಕಾರಿ ಅವರಿಗಿಂತ ಉತ್ತಮ ಮುಖ್ಯಮಂತ್ರಿ ಇರಲು ಸಾಧ್ಯವಿಲ್ಲ ಎಂದು ನಾನು ಜನರಿಗೆ ಭರವಸೆ ನೀಡಬಲ್ಲೆ. ಅವರೇ ಅತ್ಯುತ್ತಮ. ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೇ ಕೆಲಸ ಮಾಡಲು ಪ್ರಾರಂಭಿಸಿದ್ದಾರೆ’ ಎಂದು ತಿಳಿಸಿದರು.</p><p>‘ಚಕ್ರವರ್ತಿ ಅವರು ಕಳೆದ ಐದಾರು ವರ್ಷಗಳಿಂದ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಮತ್ತು ರಾಜ್ಯದಲ್ಲಿ ರಾಜಕೀಯ ಬದಲಾವಣೆಯನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ’ ಎಂದು ಸುವೇಂದು ಅಧಿಕಾರಿ ಹೇಳಿದರು.</p><p>‘ಚಕ್ರವರ್ತಿ ಅವರು ನನಗಿಂತ ಹಿರಿಯರು. ನಾನು ಅವರ ಆಶೀರ್ವಾದ ಪಡೆಯಲು ಬಂದಿದ್ದೆ. ಮಾಡಬೇಕಾದ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಿದ್ದೇವೆ. ಆದರೆ, ನಾವು ಚರ್ಚಿಸಿದ ಕಾರ್ಯಸೂಚಿ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ’ ಎಂದರು.</p><p>‘ಚಕ್ರವರ್ತಿ ಅವರು ಯಾವುದೇ ಹುದ್ದೆಯನ್ನು ಬಯಸದ ಮಹನೀಯರಾಗಿದ್ದು, ರಾಜ್ಯದಾದ್ಯಂತ ಹೆಚ್ಚಿನ ಸಂಖ್ಯೆಯ ರ್ಯಾಲಿಗಳು ಮತ್ತು ಆಂತರಿಕ ಸಭೆಗಳನ್ನು ನಡೆಸುವ ಮೂಲಕ ಚುನಾವಣಾ ಪ್ರಚಾರದ ಸಮಯದಲ್ಲಿ ತಮ್ಮ ಸರ್ವಸ್ವವನ್ನೂ ಧಾರೆ ಎರೆದಿದ್ದಾರೆ’ ಎಂದು ಅಧಿಕಾರಿ ಸ್ಮರಿಸಿದರು.</p><p>ಆರೋಗ್ಯ ಸಮಸ್ಯೆಗಳಿದ್ದಾಗಲೂ ಚಕ್ರವರ್ತಿ ಅವರು ಉತ್ತರ ಮತ್ತು ದಕ್ಷಿಣ ಬಂಗಾಳದಾದ್ಯಂತ ವ್ಯಾಪಕ ಪ್ರಚಾರ ನಡೆಸಿದ್ದರು. ಬಿಡುವಿಲ್ಲದ ಚುನಾವಣಾ ವೇಳಾಪಟ್ಟಿಯ ನಡುವೆ ದೈಹಿಕ ಶ್ರಮ ಉಂಟಾದರೂ ಪ್ರಚಾರವನ್ನು ಮುಂದುವರೆಸಿದ್ದರು’ ಎಂದೂ ಅವರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>