<p><strong>ಐಜ್ವಾಲ್</strong>: ಅಂತರರಾಷ್ಟ್ರೀಯ ಗಡಿಯನ್ನು ಪದೇ ಪದೇ ದಾಟುತ್ತಿರುವ ಮ್ಯಾನ್ಮಾರ್ನ ನಿರಾಶ್ರಿತರ ಗುರುತಿನ ಚೀಟಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮಿಜೋರಾಂ ಸರ್ಕಾರ ಚಿಂತಿಸಿದೆ.</p>.<p>ಮುಖ್ಯಮಂತ್ರಿ ಲಾಲ್ಡುಹೋಮಾ ಅವರು ಐಜ್ವಾಲ್ನಲ್ಲಿ ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುರಿಂದರ್ ಭಗತ್ ಅವರೊಂದಿಗೆ ಗುರುವಾರ ನಡೆಸಿದ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.</p>.<p>‘ನಿರಾಶ್ರಿತರಲ್ಲಿ ಅನೇಕರು ವಿಧೇಯರಿದ್ದಾರೆ. ಆದರೆ, ಕೆಲವರು ನೆರೆಯ ದೇಶದ ಬಿಕ್ಕಟ್ಟಿನ ಲಾಭ ಪಡೆಯಲಿಕ್ಕಾಗಿ ಪದೇ ಪದೇ ಅಂತರರಾಷ್ಟ್ರೀಯ ಗಡಿಯನ್ನು ದಾಟುತ್ತಿದ್ದಾರೆ. ಇಂತಹವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ’ ಎಂದು ಲಾಲ್ಡುಹೋಮಾ ಅವರು ಭಗತ್ಗೆ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p>.<p>ಮಿಜೋರಾಂನಲ್ಲಿ ಆಶ್ರಯ ಪಡೆದಿರುವ ಮ್ಯಾನ್ಮಾರ್ನ ನಿರಾಶ್ರಿತರ ಬಯೋಮೆಟ್ರಿಕ್ ವಿವರಗಳನ್ನು ಸಂಗ್ರಹಿಸುವ ರಾಜ್ಯ ಸರ್ಕಾರದ ಯೋಜನೆಯ ಬಗ್ಗೆಯೂ ಭಗತ್ ಅವರಿಗೆ ಮುಖ್ಯಮಂತ್ರಿ ವಿವರಿಸಿದರು.</p>.<p>ಮ್ಯಾನ್ಮಾರ್ ನಿರಾಶ್ರಿತರ ಬಯೋಮೆಟ್ರಿಕ್ ದಾಖಲಾತಿಯನ್ನು ರಾಜ್ಯ ಸರ್ಕಾರ ಜುಲೈನಲ್ಲಿ ಆರಂಭಿಸುವ ಸಾಧ್ಯತೆಯಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಐಜ್ವಾಲ್</strong>: ಅಂತರರಾಷ್ಟ್ರೀಯ ಗಡಿಯನ್ನು ಪದೇ ಪದೇ ದಾಟುತ್ತಿರುವ ಮ್ಯಾನ್ಮಾರ್ನ ನಿರಾಶ್ರಿತರ ಗುರುತಿನ ಚೀಟಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮಿಜೋರಾಂ ಸರ್ಕಾರ ಚಿಂತಿಸಿದೆ.</p>.<p>ಮುಖ್ಯಮಂತ್ರಿ ಲಾಲ್ಡುಹೋಮಾ ಅವರು ಐಜ್ವಾಲ್ನಲ್ಲಿ ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುರಿಂದರ್ ಭಗತ್ ಅವರೊಂದಿಗೆ ಗುರುವಾರ ನಡೆಸಿದ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.</p>.<p>‘ನಿರಾಶ್ರಿತರಲ್ಲಿ ಅನೇಕರು ವಿಧೇಯರಿದ್ದಾರೆ. ಆದರೆ, ಕೆಲವರು ನೆರೆಯ ದೇಶದ ಬಿಕ್ಕಟ್ಟಿನ ಲಾಭ ಪಡೆಯಲಿಕ್ಕಾಗಿ ಪದೇ ಪದೇ ಅಂತರರಾಷ್ಟ್ರೀಯ ಗಡಿಯನ್ನು ದಾಟುತ್ತಿದ್ದಾರೆ. ಇಂತಹವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ’ ಎಂದು ಲಾಲ್ಡುಹೋಮಾ ಅವರು ಭಗತ್ಗೆ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p>.<p>ಮಿಜೋರಾಂನಲ್ಲಿ ಆಶ್ರಯ ಪಡೆದಿರುವ ಮ್ಯಾನ್ಮಾರ್ನ ನಿರಾಶ್ರಿತರ ಬಯೋಮೆಟ್ರಿಕ್ ವಿವರಗಳನ್ನು ಸಂಗ್ರಹಿಸುವ ರಾಜ್ಯ ಸರ್ಕಾರದ ಯೋಜನೆಯ ಬಗ್ಗೆಯೂ ಭಗತ್ ಅವರಿಗೆ ಮುಖ್ಯಮಂತ್ರಿ ವಿವರಿಸಿದರು.</p>.<p>ಮ್ಯಾನ್ಮಾರ್ ನಿರಾಶ್ರಿತರ ಬಯೋಮೆಟ್ರಿಕ್ ದಾಖಲಾತಿಯನ್ನು ರಾಜ್ಯ ಸರ್ಕಾರ ಜುಲೈನಲ್ಲಿ ಆರಂಭಿಸುವ ಸಾಧ್ಯತೆಯಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>