<p><strong>ಚೆನ್ನೈ</strong>: ‘ರಾಜ್ಯಪಾಲರ ಭಾಷಣದ ಮೂಲಕ ಮೊದಲ ಅಧಿವೇಶನ ನಡೆಸುವ ಸಂಪ್ರದಾಯವನ್ನೇ ಕೈ ಬಿಡಬೇಕು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆಗ್ರಹಿಸಿದ್ದಾರೆ.</p><p>ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸದನದಲ್ಲಿ ಭಾಷಣ ಮಾಡದೇ, ಹೊರನಡೆದ ಬೆನ್ನಲ್ಲೇ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.</p><p>‘ಮೊದಲು ತಮಿಳುನಾಡು, ನಂತರ ಕೇರಳ, ಈಗ ಕರ್ನಾಟಕ. ಮಾದರಿಯೂ ಸ್ಪಷ್ಟ ಹಾಗೂ ಉದ್ದೇಶಪೂರ್ವಕವಾಗಿದೆ. ಸರ್ಕಾರವು ಸಿದ್ಧಪಡಿಸಿಕೊಟ್ಟ ಭಾಷಣವನ್ನು ರಾಜ್ಯಪಾಲರು ಓದಲು ನಿರಾಕರಿಸುವ ಪಕ್ಷದ ಏಜೆಂಟರಂತೆ ವರ್ತಿಸಿದ್ದಾರೆ. ಆ ಮೂಲಕ ಜನರಿಂದ ಆಯ್ಕೆಯಾದ ಸರ್ಕಾರವನ್ನೇ ದುರ್ಬಲಗೊಳಿಸುವ ಯತ್ನಕ್ಕೆ ಕೈ ಹಾಕಿದ್ದಾರೆ’ ಎಂದು ತಿಳಿಸಿದ್ದಾರೆ.</p><p>ಮಂಗಳವಾರ ತಮಿಳುನಾಡು ಅಧಿವೇಶನದ ವೇಳೆ ರಾಜ್ಯಪಾಲ ಆರ್.ಎನ್ ರವಿ ಅವರು ಭಾಷಣ ಮಾಡದೇ ಸದನ ಬಹಿಷ್ಕರಿಸಿ ಹೊರನಡೆದಿದ್ದರು. ಸತತ ಮೂರನೇ ಬಾರಿ ರಾಜ್ಯಪಾಲರು ಈ ರೀತಿ ನಡೆದುಕೊಂಡಿದ್ದು, ಇಂತಹ ಸಂಪ್ರದಾಯನ್ನೇ ಕೈ ಬಿಡಬೇಕು ಎಂದು ಸ್ಟಾಲಿನ್ ಆಗ್ರಹಿಸಿದ್ದಾರೆ.</p><p> ‘ಡಿಎಂಕೆ ಪಕ್ಷವು ದೇಶದಾದ್ಯಂತ ಸಮಾನ ಮನಸ್ಕ ವಿರೋಧ ಪಕ್ಷಗಳ ಜೊತೆಗೆ ಈ ವಿಷಯದ ಕುರಿತು ಚರ್ಚೆ ನಡೆಸಲಿದ್ದು, ಅಪ್ರಸ್ತುತವಾದ ಪದ್ಧತಿಯನ್ನು ರದ್ದುಗೊಳಿಸಲು ಮುಂದಿನ ಅಧಿವೇಶನದಲ್ಲಿಯೇ ತಿದ್ದುಪಡಿ ತರಲು ಒತ್ತಾಯಿಸಲಾಗುವುದು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ‘ರಾಜ್ಯಪಾಲರ ಭಾಷಣದ ಮೂಲಕ ಮೊದಲ ಅಧಿವೇಶನ ನಡೆಸುವ ಸಂಪ್ರದಾಯವನ್ನೇ ಕೈ ಬಿಡಬೇಕು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆಗ್ರಹಿಸಿದ್ದಾರೆ.</p><p>ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸದನದಲ್ಲಿ ಭಾಷಣ ಮಾಡದೇ, ಹೊರನಡೆದ ಬೆನ್ನಲ್ಲೇ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.</p><p>‘ಮೊದಲು ತಮಿಳುನಾಡು, ನಂತರ ಕೇರಳ, ಈಗ ಕರ್ನಾಟಕ. ಮಾದರಿಯೂ ಸ್ಪಷ್ಟ ಹಾಗೂ ಉದ್ದೇಶಪೂರ್ವಕವಾಗಿದೆ. ಸರ್ಕಾರವು ಸಿದ್ಧಪಡಿಸಿಕೊಟ್ಟ ಭಾಷಣವನ್ನು ರಾಜ್ಯಪಾಲರು ಓದಲು ನಿರಾಕರಿಸುವ ಪಕ್ಷದ ಏಜೆಂಟರಂತೆ ವರ್ತಿಸಿದ್ದಾರೆ. ಆ ಮೂಲಕ ಜನರಿಂದ ಆಯ್ಕೆಯಾದ ಸರ್ಕಾರವನ್ನೇ ದುರ್ಬಲಗೊಳಿಸುವ ಯತ್ನಕ್ಕೆ ಕೈ ಹಾಕಿದ್ದಾರೆ’ ಎಂದು ತಿಳಿಸಿದ್ದಾರೆ.</p><p>ಮಂಗಳವಾರ ತಮಿಳುನಾಡು ಅಧಿವೇಶನದ ವೇಳೆ ರಾಜ್ಯಪಾಲ ಆರ್.ಎನ್ ರವಿ ಅವರು ಭಾಷಣ ಮಾಡದೇ ಸದನ ಬಹಿಷ್ಕರಿಸಿ ಹೊರನಡೆದಿದ್ದರು. ಸತತ ಮೂರನೇ ಬಾರಿ ರಾಜ್ಯಪಾಲರು ಈ ರೀತಿ ನಡೆದುಕೊಂಡಿದ್ದು, ಇಂತಹ ಸಂಪ್ರದಾಯನ್ನೇ ಕೈ ಬಿಡಬೇಕು ಎಂದು ಸ್ಟಾಲಿನ್ ಆಗ್ರಹಿಸಿದ್ದಾರೆ.</p><p> ‘ಡಿಎಂಕೆ ಪಕ್ಷವು ದೇಶದಾದ್ಯಂತ ಸಮಾನ ಮನಸ್ಕ ವಿರೋಧ ಪಕ್ಷಗಳ ಜೊತೆಗೆ ಈ ವಿಷಯದ ಕುರಿತು ಚರ್ಚೆ ನಡೆಸಲಿದ್ದು, ಅಪ್ರಸ್ತುತವಾದ ಪದ್ಧತಿಯನ್ನು ರದ್ದುಗೊಳಿಸಲು ಮುಂದಿನ ಅಧಿವೇಶನದಲ್ಲಿಯೇ ತಿದ್ದುಪಡಿ ತರಲು ಒತ್ತಾಯಿಸಲಾಗುವುದು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>