<p><strong>ಚೆನ್ನೈ</strong>: ತಮಿಳುನಾಡನ್ನು ವಿಭಜಿಸುವ ‘ದೆಹಲಿಯ ಕೇಸರಿ ಒಳಸಂಚು’ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಡಿಎಂಕೆ ಅಧ್ಯಕ್ಷ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಂಗಳವಾರ ಕಾರ್ಯಕ್ರಮವೊಂದರಲ್ಲಿ ಹೇಳಿದರು.</p>.<p>ಮುಂಬರುವ 2026ರ ಚುನಾವಣೆಯಲ್ಲಿ ತಮ್ಮನ್ನು ಎದುರಿಸಲು ತಯಾರಿ ನಡೆಸುತ್ತಿರುವ ಎಐಎಡಿಎಂಕೆ – ಬಿಜೆಪಿ ಮೈತ್ರಿಯನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದರು.</p>.<p>ಸ್ಟಾಲಿನ್ ಅವರಿಗೂ ಮೊದಲು ಮಾತನಾಡಿದ ಆಡಳಿತರೂಢ ಮೈತ್ರಿಕೂಟದ ಭಾಗವಾಗಿರುವ ವಿಸಿಕೆ ಮುಖ್ಯಸ್ಥ ತೋಳ್ ತಿರುಮಾವಲನ್, ತಮ್ಮ ಪಕ್ಷವು ಡಿಎಂಕೆ ಜೊತೆಗಿನ ಮೈತ್ರಿಯನ್ನು ಮುಂದುವರೆಸುತ್ತದೆ ಎಂದು ಹೇಳಿದರು. ಜೊತೆಗೆ, ತಮ್ಮ ಪಕ್ಷದ ಕಾರ್ಯಕರ್ತರು ಮೈತ್ರಿಯ ಗೆಲುವಿಗಾಗಿ ಕೆಲಸ ಮಾಡಲಿದ್ದಾರೆ ಎಂದು ಖಚಿತಪಡಿಸಿದರು.</p>.<p class="title">‘ಈ ವೇದಿಕೆಯಲ್ಲಿ ಪೆರಿಯಾರ್ ದಾರಿಯನ್ನು ಅನುಸರಿಸುವ ಡ್ರಾವಿಡ ಚಳವಳಿಯ ನಾಯಕರು, ಮಾರ್ಕ್ಸ್ವಾದಿ ಕಮ್ಯುನಿಸ್ಟ್ ನಾಯಕರು, ಗಾಂಧಿವಾದಿ ನಾಯಕರು ಮತ್ತು ಅಂಬೇಡ್ಕರ್ವಾದಿ ನಾಯಕರಿದ್ದಾರೆ. ಇದುವೇ ತಮಿಳುನಾಡು, ಇವರೆಲ್ಲರೂ ಒಂದಾಗಿದ್ದಾರೆ’ ಎಂದು ಹೇಳಿದರು.</p>.<p>ಅವರ ಹೇಳಿಕೆಗೆ ಒಪ್ಪಿಗೆ ಸೂಚಿಸುತ್ತಾ ಮುಖ್ಯಮಂತ್ರಿ ಸ್ಟಾಲಿನ್, ‘ತಮಿಳುನಾಡು ಒಂದಾಗಿರುವವರೆಗೆ ದೆಹಲಿಯ ಯಾವುದೇ ಕೇಸರಿ ಒಳಸಂಚು ಇಲ್ಲಿ ಯಶಸ್ವಿಯಾಗುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ತಮಿಳುನಾಡನ್ನು ವಿಭಜಿಸುವ ‘ದೆಹಲಿಯ ಕೇಸರಿ ಒಳಸಂಚು’ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಡಿಎಂಕೆ ಅಧ್ಯಕ್ಷ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಂಗಳವಾರ ಕಾರ್ಯಕ್ರಮವೊಂದರಲ್ಲಿ ಹೇಳಿದರು.</p>.<p>ಮುಂಬರುವ 2026ರ ಚುನಾವಣೆಯಲ್ಲಿ ತಮ್ಮನ್ನು ಎದುರಿಸಲು ತಯಾರಿ ನಡೆಸುತ್ತಿರುವ ಎಐಎಡಿಎಂಕೆ – ಬಿಜೆಪಿ ಮೈತ್ರಿಯನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದರು.</p>.<p>ಸ್ಟಾಲಿನ್ ಅವರಿಗೂ ಮೊದಲು ಮಾತನಾಡಿದ ಆಡಳಿತರೂಢ ಮೈತ್ರಿಕೂಟದ ಭಾಗವಾಗಿರುವ ವಿಸಿಕೆ ಮುಖ್ಯಸ್ಥ ತೋಳ್ ತಿರುಮಾವಲನ್, ತಮ್ಮ ಪಕ್ಷವು ಡಿಎಂಕೆ ಜೊತೆಗಿನ ಮೈತ್ರಿಯನ್ನು ಮುಂದುವರೆಸುತ್ತದೆ ಎಂದು ಹೇಳಿದರು. ಜೊತೆಗೆ, ತಮ್ಮ ಪಕ್ಷದ ಕಾರ್ಯಕರ್ತರು ಮೈತ್ರಿಯ ಗೆಲುವಿಗಾಗಿ ಕೆಲಸ ಮಾಡಲಿದ್ದಾರೆ ಎಂದು ಖಚಿತಪಡಿಸಿದರು.</p>.<p class="title">‘ಈ ವೇದಿಕೆಯಲ್ಲಿ ಪೆರಿಯಾರ್ ದಾರಿಯನ್ನು ಅನುಸರಿಸುವ ಡ್ರಾವಿಡ ಚಳವಳಿಯ ನಾಯಕರು, ಮಾರ್ಕ್ಸ್ವಾದಿ ಕಮ್ಯುನಿಸ್ಟ್ ನಾಯಕರು, ಗಾಂಧಿವಾದಿ ನಾಯಕರು ಮತ್ತು ಅಂಬೇಡ್ಕರ್ವಾದಿ ನಾಯಕರಿದ್ದಾರೆ. ಇದುವೇ ತಮಿಳುನಾಡು, ಇವರೆಲ್ಲರೂ ಒಂದಾಗಿದ್ದಾರೆ’ ಎಂದು ಹೇಳಿದರು.</p>.<p>ಅವರ ಹೇಳಿಕೆಗೆ ಒಪ್ಪಿಗೆ ಸೂಚಿಸುತ್ತಾ ಮುಖ್ಯಮಂತ್ರಿ ಸ್ಟಾಲಿನ್, ‘ತಮಿಳುನಾಡು ಒಂದಾಗಿರುವವರೆಗೆ ದೆಹಲಿಯ ಯಾವುದೇ ಕೇಸರಿ ಒಳಸಂಚು ಇಲ್ಲಿ ಯಶಸ್ವಿಯಾಗುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>