<p><strong>ಚೆನ್ನೈ</strong>: ಅಲ್ಪಸಂಖ್ಯಾತರ ಮೇಲಿನ ದಾಳಿಗಳು ಸ್ವೀಕಾರಾರ್ಹವಲ್ಲ. ಸಮಾಜವನ್ನು ವಿಭಜಿಸುವ ಗಲಭೆಕೋರರನ್ನು ನಿಗ್ರಹಿಸುವ ತುರ್ತು ಕರ್ತವ್ಯವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಗುರುವಾರ ಹೇಳಿದ್ದಾರೆ.</p>.<p>ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಿದ್ದರೂ, ಬಹುಸಂಖ್ಯಾತರ ಸೋಗಿನಲ್ಲಿ ಕೆಲವು ಬಲಪಂಥೀಯ ಹಿಂಸಾತ್ಮಕ ಗುಂಪುಗಳು ದಾಳಿ ಮತ್ತು ಗಲಭೆಗಳಲ್ಲಿ ತೊಡಗಿರುವುದು ದೇಶಕ್ಕೆ ‘ಗೊಂದಲದ ಸಂದೇಶ’ವನ್ನು ರವಾನಿಸುತ್ತದೆ ಎಂದು ಸ್ಟಾಲಿನ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. </p>.<p class="title">ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಭಾಷಣಗಳ ಪ್ರಮಾಣದಲ್ಲಿ ಶೇ 74ರಷ್ಟು ಹೆಚ್ಚಳವಾಗಿದೆ ಎಂದು ವರದಿಯಾಗಿದ್ದು, ಮುಂದೆ ಇದು ಗಂಭೀರ ಅಪಾಯವನ್ನು ತರುತ್ತದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಅಲ್ಪಸಂಖ್ಯಾತರ ಮೇಲಿನ ದಾಳಿಗಳು ಸ್ವೀಕಾರಾರ್ಹವಲ್ಲ. ಸಮಾಜವನ್ನು ವಿಭಜಿಸುವ ಗಲಭೆಕೋರರನ್ನು ನಿಗ್ರಹಿಸುವ ತುರ್ತು ಕರ್ತವ್ಯವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಗುರುವಾರ ಹೇಳಿದ್ದಾರೆ.</p>.<p>ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಿದ್ದರೂ, ಬಹುಸಂಖ್ಯಾತರ ಸೋಗಿನಲ್ಲಿ ಕೆಲವು ಬಲಪಂಥೀಯ ಹಿಂಸಾತ್ಮಕ ಗುಂಪುಗಳು ದಾಳಿ ಮತ್ತು ಗಲಭೆಗಳಲ್ಲಿ ತೊಡಗಿರುವುದು ದೇಶಕ್ಕೆ ‘ಗೊಂದಲದ ಸಂದೇಶ’ವನ್ನು ರವಾನಿಸುತ್ತದೆ ಎಂದು ಸ್ಟಾಲಿನ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. </p>.<p class="title">ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಭಾಷಣಗಳ ಪ್ರಮಾಣದಲ್ಲಿ ಶೇ 74ರಷ್ಟು ಹೆಚ್ಚಳವಾಗಿದೆ ಎಂದು ವರದಿಯಾಗಿದ್ದು, ಮುಂದೆ ಇದು ಗಂಭೀರ ಅಪಾಯವನ್ನು ತರುತ್ತದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>