<p><strong>ಚೆನ್ನೈ:</strong> ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆಳವಾಗಿ ಬೇರೂರಿವ ಜಾತಿ ತಾರತಮ್ಯ ತಡೆಗೆ ವಿಳಂಬವಾಗಿ ಆದರೂ ಯುಜಿಸಿ ಸ್ವಾಗತಾರ್ಹ ಹೆಜ್ಜೆಯಿಟ್ಟಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಗುರುವಾರ ಹೇಳಿದ್ದಾರೆ. </p><p>‘ಈ ನಿಯಮಗಳನ್ನು ಇನ್ನಷ್ಟು ಬಲಪಡಿಸಿ ರಚನಾತ್ಮಕ ಅಂತರವನ್ನು ತಗ್ಗಿಸಲು ಪರಿಷ್ಕರಿಸಬೇಕು. ಅಲ್ಲದೆ ನಿಜವಾದ ಹೊಣೆಗಾರಿಕೆಯನ್ನು ನಿಗದಿಪಡಿಸಿ ಜಾರಿಗೊಳಿಸಬೇಕು’ ಎಂದು ಅವರು ‘ಎಕ್ಸ್’ನಲ್ಲಿ ಒತ್ತಾಯಿಸಿದ್ದಾರೆ. </p><p>‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿಶೇಷವಾಗಿ ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ಆತ್ಮಹತ್ಯೆ ಹೆಚ್ಚಾಗಿದೆ.</p><p>ದಕ್ಷಿಣ ಭಾರತ ಕಾಶ್ಮೀರದ ವಿದ್ಯಾರ್ಥಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಕಿರುಕುಳ ನೀಡಲಾಗುತ್ತಿದೆ. ಇಂಥ ಸಂದರ್ಭದಲ್ಲಿ ಈ ಸುಧಾರಣೆ ಅನಿವಾರ್ಯ’ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆಳವಾಗಿ ಬೇರೂರಿವ ಜಾತಿ ತಾರತಮ್ಯ ತಡೆಗೆ ವಿಳಂಬವಾಗಿ ಆದರೂ ಯುಜಿಸಿ ಸ್ವಾಗತಾರ್ಹ ಹೆಜ್ಜೆಯಿಟ್ಟಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಗುರುವಾರ ಹೇಳಿದ್ದಾರೆ. </p><p>‘ಈ ನಿಯಮಗಳನ್ನು ಇನ್ನಷ್ಟು ಬಲಪಡಿಸಿ ರಚನಾತ್ಮಕ ಅಂತರವನ್ನು ತಗ್ಗಿಸಲು ಪರಿಷ್ಕರಿಸಬೇಕು. ಅಲ್ಲದೆ ನಿಜವಾದ ಹೊಣೆಗಾರಿಕೆಯನ್ನು ನಿಗದಿಪಡಿಸಿ ಜಾರಿಗೊಳಿಸಬೇಕು’ ಎಂದು ಅವರು ‘ಎಕ್ಸ್’ನಲ್ಲಿ ಒತ್ತಾಯಿಸಿದ್ದಾರೆ. </p><p>‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿಶೇಷವಾಗಿ ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ಆತ್ಮಹತ್ಯೆ ಹೆಚ್ಚಾಗಿದೆ.</p><p>ದಕ್ಷಿಣ ಭಾರತ ಕಾಶ್ಮೀರದ ವಿದ್ಯಾರ್ಥಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಕಿರುಕುಳ ನೀಡಲಾಗುತ್ತಿದೆ. ಇಂಥ ಸಂದರ್ಭದಲ್ಲಿ ಈ ಸುಧಾರಣೆ ಅನಿವಾರ್ಯ’ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>