<p><strong>ನವದೆಹಲಿ:</strong> ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರಿಗೆ ಬಿಜೆಪಿ ಆಮಿಷ ಒಡ್ಡಿದ್ದು, ಬೆದರಿಕೆ ಹಾಕಲಾಗುತ್ತಿದೆ. ಇದೊಂದು ಗಂಭೀರ ವಿಷಯ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.</p>.<p>ಈ ಕುರಿತು ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿ ಇಂದು ಸಭೆ ಸೇರಿ ಪರಿಸ್ಥಿತಿ ಅವಲೋಕಿಸಲಿದ್ದೇವೆ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/bihar-politics-vijay-kumar-sinha-resigns-as-speaker-ahead-of-mahagathbandhan-floor-test-966055.html" itemprop="url">ಬಿಹಾರ: ವಿಶ್ವಾಸಮತ ಯಾಚನೆಗೂ ಮುನ್ನ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ರಾಜೀನಾಮೆ </a></p>.<p>ಪಕ್ಷ ಒಡೆಯಲು ಆಮಿಷ ಒಡ್ಡಿದ್ದು, ಬೆದರಿಕೆ ಹಾಕಿದ್ದಾರೆ ಎಂದು ಕೆಲವು ಶಾಸಕರು ನನ್ನ ಬಳಿ ಬಂದು ಹೇಳಿದ್ದಾರೆ. ಇದು ಅತ್ಯಂತ ಗಂಭೀರ ವಿಷಯವಾಗಿದೆ. ಈ ಕುರಿತು ಇಂದು ಸಂಜೆ 4 ಗಂಟೆಗೆ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಲಿದ್ದೇವೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.</p>.<p>ಸಿಬಿಐ ದಾಳಿ ಬಗ್ಗೆ ಕೇಜ್ರಿವಾಲ್, ಗುಜರಾತ್ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ತನಿಖೆ ಹಾಗೂ ದಾಳಿ ಮುಂದುವರಿಯಲಿದೆ ಎಂದು ಹೇಳಿದ್ದಾರೆ.</p>.<p>ಇತ್ತೀಚೆಗೆ ಎಎಪಿ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಿದರೆ ಸಿಎಂ ಸ್ಥಾನ ಹಾಗೂ ಸಿಬಿಐ ಹಾಗೂ ಇ.ಡಿ ಪ್ರಕರಣ ಕೈಬಿಡುವುದಾಗಿ ತಮಗೆ ಬಿಜೆಪಿ ಆಮಿಷ ಒಡ್ಡಿರುವುದಾಗಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿದ್ದರು.<br /><br />ಇದನ್ನೂ ಓದಿ:<a href="https://www.prajavani.net/india-news/cbi-raids-under-way-in-bihar-rjd-leaders-among-those-searched-966048.html" itemprop="url">ಆರ್ಜೆಡಿ ನಾಯಕರ ಮನೆ ಸೇರಿ ಬಿಹಾರದ ಹಲವೆಡೆ ಸಿಬಿಐ ದಾಳಿ, ಶೋಧ ಕಾರ್ಯಾಚರಣೆ </a></p>.<p>ಶಾಸಕರಾದ ಅಜಯ್ ದತ್, ಸಂಜೀವ್ ಜಾ, ಸೋಮನಾಥ ಭಾರತಿ ಮತ್ತು ಕುಲದೀಪ್ ಅವರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ ಎಂದು ಎಎಪಿಯ ರಾಷ್ಟ್ರೀಯ ವಕ್ತಾರ ಹಾಗೂ ರಾಜಸಭಾ ಸಂಸದ ಸಂಜಯ್ ಸಿಂಗ್ ಆರೋಪಿಸಿದ್ದಾರೆ.</p>.<p>ಬಿಜೆಪಿಗೆ ಸೇರಿದರೆ ತಲಾ ₹20 ಕೋಟಿ ಮತ್ತು ಇತರೆ ಶಾಸಕರನ್ನು ಕರೆತಂದರೆ ₹25 ಕೋಟಿ ನೀಡುವ ಆಮಿಷ ಒಡ್ಡಿರುವುದಾಗಿ ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರಿಗೆ ಬಿಜೆಪಿ ಆಮಿಷ ಒಡ್ಡಿದ್ದು, ಬೆದರಿಕೆ ಹಾಕಲಾಗುತ್ತಿದೆ. ಇದೊಂದು ಗಂಭೀರ ವಿಷಯ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.</p>.<p>ಈ ಕುರಿತು ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿ ಇಂದು ಸಭೆ ಸೇರಿ ಪರಿಸ್ಥಿತಿ ಅವಲೋಕಿಸಲಿದ್ದೇವೆ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/bihar-politics-vijay-kumar-sinha-resigns-as-speaker-ahead-of-mahagathbandhan-floor-test-966055.html" itemprop="url">ಬಿಹಾರ: ವಿಶ್ವಾಸಮತ ಯಾಚನೆಗೂ ಮುನ್ನ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ರಾಜೀನಾಮೆ </a></p>.<p>ಪಕ್ಷ ಒಡೆಯಲು ಆಮಿಷ ಒಡ್ಡಿದ್ದು, ಬೆದರಿಕೆ ಹಾಕಿದ್ದಾರೆ ಎಂದು ಕೆಲವು ಶಾಸಕರು ನನ್ನ ಬಳಿ ಬಂದು ಹೇಳಿದ್ದಾರೆ. ಇದು ಅತ್ಯಂತ ಗಂಭೀರ ವಿಷಯವಾಗಿದೆ. ಈ ಕುರಿತು ಇಂದು ಸಂಜೆ 4 ಗಂಟೆಗೆ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಲಿದ್ದೇವೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.</p>.<p>ಸಿಬಿಐ ದಾಳಿ ಬಗ್ಗೆ ಕೇಜ್ರಿವಾಲ್, ಗುಜರಾತ್ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ತನಿಖೆ ಹಾಗೂ ದಾಳಿ ಮುಂದುವರಿಯಲಿದೆ ಎಂದು ಹೇಳಿದ್ದಾರೆ.</p>.<p>ಇತ್ತೀಚೆಗೆ ಎಎಪಿ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಿದರೆ ಸಿಎಂ ಸ್ಥಾನ ಹಾಗೂ ಸಿಬಿಐ ಹಾಗೂ ಇ.ಡಿ ಪ್ರಕರಣ ಕೈಬಿಡುವುದಾಗಿ ತಮಗೆ ಬಿಜೆಪಿ ಆಮಿಷ ಒಡ್ಡಿರುವುದಾಗಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿದ್ದರು.<br /><br />ಇದನ್ನೂ ಓದಿ:<a href="https://www.prajavani.net/india-news/cbi-raids-under-way-in-bihar-rjd-leaders-among-those-searched-966048.html" itemprop="url">ಆರ್ಜೆಡಿ ನಾಯಕರ ಮನೆ ಸೇರಿ ಬಿಹಾರದ ಹಲವೆಡೆ ಸಿಬಿಐ ದಾಳಿ, ಶೋಧ ಕಾರ್ಯಾಚರಣೆ </a></p>.<p>ಶಾಸಕರಾದ ಅಜಯ್ ದತ್, ಸಂಜೀವ್ ಜಾ, ಸೋಮನಾಥ ಭಾರತಿ ಮತ್ತು ಕುಲದೀಪ್ ಅವರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ ಎಂದು ಎಎಪಿಯ ರಾಷ್ಟ್ರೀಯ ವಕ್ತಾರ ಹಾಗೂ ರಾಜಸಭಾ ಸಂಸದ ಸಂಜಯ್ ಸಿಂಗ್ ಆರೋಪಿಸಿದ್ದಾರೆ.</p>.<p>ಬಿಜೆಪಿಗೆ ಸೇರಿದರೆ ತಲಾ ₹20 ಕೋಟಿ ಮತ್ತು ಇತರೆ ಶಾಸಕರನ್ನು ಕರೆತಂದರೆ ₹25 ಕೋಟಿ ನೀಡುವ ಆಮಿಷ ಒಡ್ಡಿರುವುದಾಗಿ ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>