<p><strong>ಹೈದರಾಬಾದ್: </strong>ಆರ್ಎಸ್ ಶಾಸಕಿ ಕವಿತಾ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ತೆಲಂಗಾಣ ಜಾಗೃತಿ ಸದಸ್ಯರು ಅಮಾನತುಗೊಂಡಿರುವ ಕಾಂಗ್ರೆಸ್ ಎಂಎಲ್ಸಿ ಟೀನ್ಮಾರ್ ಮಲ್ಲಣ್ಣ ಅವರ ಕಚೇರಿಗೆ ಭಾನುವಾರ ಮುತ್ತಿಗೆ ಹಾಕಿದ್ದ ಸಂದರ್ಭದಲ್ಲಿ ಅವರ ಗನ್ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.</p> <p>‘ಪ್ರತಿಭಟನಕಾರರು ಕಚೇರಿಗೆ ನುಗ್ಗಿ ಪಿಠೋಪಕರಣಗಳಿಗೆ ಹಾನಿ ಮಾಡಿದ್ದಾರೆ. ಕೆಲ ನೌಕರರ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಆತ್ಮ ರಕ್ಷಣೆಗಾಗಿ ಗನ್ಮ್ಯಾನ್ ಗಾಳಿಯಲ್ಲಿ ಗುಂಡುಹಾರಿಸುವಂತೆ ಪ್ರಚೋದಿಸಿದ್ದಾರೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p> .<p>‘ಕವಿತಾ ಬೆಂಬಲಿಗರು ಗನ್ಮ್ಯಾನ್ನ ಕೈಯಿಂದ ಪಿಸ್ತೂಲ್ ಕಸಿದುಕೊಂಡು ಗುಂಡು ಹಾರಿಸಲು ಯತ್ನಿಸಿದ್ದಾರೆ. ಸಾಕ್ಷ್ಯ ಸಮೇತವಾಗಿ ಪೊಲೀಸರಿಗೆ ದೂರು ನೀಡಿದ್ದೇನೆ. ಕೊಲೆ ಯತ್ನಕ್ಕೆ ಪ್ರಚೋದನೆ ನೀಡಿದ ಕವಿತಾ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು’ ಎಂದು ಮಲ್ಲಣ್ಣ ಆಗ್ರಹಿಸಿದ್ದಾರೆ.</p> <p>ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್: </strong>ಆರ್ಎಸ್ ಶಾಸಕಿ ಕವಿತಾ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ತೆಲಂಗಾಣ ಜಾಗೃತಿ ಸದಸ್ಯರು ಅಮಾನತುಗೊಂಡಿರುವ ಕಾಂಗ್ರೆಸ್ ಎಂಎಲ್ಸಿ ಟೀನ್ಮಾರ್ ಮಲ್ಲಣ್ಣ ಅವರ ಕಚೇರಿಗೆ ಭಾನುವಾರ ಮುತ್ತಿಗೆ ಹಾಕಿದ್ದ ಸಂದರ್ಭದಲ್ಲಿ ಅವರ ಗನ್ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.</p> <p>‘ಪ್ರತಿಭಟನಕಾರರು ಕಚೇರಿಗೆ ನುಗ್ಗಿ ಪಿಠೋಪಕರಣಗಳಿಗೆ ಹಾನಿ ಮಾಡಿದ್ದಾರೆ. ಕೆಲ ನೌಕರರ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಆತ್ಮ ರಕ್ಷಣೆಗಾಗಿ ಗನ್ಮ್ಯಾನ್ ಗಾಳಿಯಲ್ಲಿ ಗುಂಡುಹಾರಿಸುವಂತೆ ಪ್ರಚೋದಿಸಿದ್ದಾರೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p> .<p>‘ಕವಿತಾ ಬೆಂಬಲಿಗರು ಗನ್ಮ್ಯಾನ್ನ ಕೈಯಿಂದ ಪಿಸ್ತೂಲ್ ಕಸಿದುಕೊಂಡು ಗುಂಡು ಹಾರಿಸಲು ಯತ್ನಿಸಿದ್ದಾರೆ. ಸಾಕ್ಷ್ಯ ಸಮೇತವಾಗಿ ಪೊಲೀಸರಿಗೆ ದೂರು ನೀಡಿದ್ದೇನೆ. ಕೊಲೆ ಯತ್ನಕ್ಕೆ ಪ್ರಚೋದನೆ ನೀಡಿದ ಕವಿತಾ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು’ ಎಂದು ಮಲ್ಲಣ್ಣ ಆಗ್ರಹಿಸಿದ್ದಾರೆ.</p> <p>ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>