<p><strong>ಠಾಣೆ:</strong> ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್ಎಸ್) ಕಾರ್ಯಕರ್ತರು ಡ್ಯಾನ್ಸ್ ಬಾರ್ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.</p><p>ಶನಿವಾರ ತಡರಾತ್ರಿ ಪನ್ವೆಲ್ ಹೊರವಲಯದ ‘ನೈಟ್ ರೈಡರ್ಸ್ ಬಾರ್‘ನಲ್ಲಿ ಈ ಘಟನೆ ನಡೆದಿದೆ. ಎಂಎನ್ಎಸ್ ಕಾರ್ಯಕರ್ತರ ಗುಂಪು ಬಾರ್ ಒಳಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಮದ್ಯದ ಬಾಟಲಿಗಳನ್ನು ಒಡೆದುಹಾಕಿ ಭಾರೀ ಹಾನಿ ಉಂಟುಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಈ ದಾಳಿಯ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮುರಿದ ಟೇಬಲ್, ಕುರ್ಚಿಗಳು, ಪುಡಿ ಪುಡಿಯಾದ ಕಿಟಕಿ ಗಾಜುಗಳನ್ನು ವಿಡಿಯೊದಲ್ಲಿ ಕಾಣಬಹುದು.</p><p>ಛತ್ರಪತಿ ಶಿವಾಜಿ ಮಹಾರಾಜರ ಪವಿತ್ರ ಭೂಮಿಯಲ್ಲಿ ಡ್ಯಾನ್ಸ್ ಬಾರ್ಗಳಿಗೆ ಸ್ಥಾನವಿಲ್ಲ. ಇಂತಹ ಅಶ್ಲೀಲತೆಯನ್ನು ನಾವು ರಾಜ್ಯದ ಯಾವುದೇ ಭಾಗದಲ್ಲಿಯೂ ಸಹಿಸುವುದಿಲ್ಲ ಎಂದು ಎಂಎನ್ಎಸ್ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.</p><p>ಈ ಘಟನೆ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಠಾಣೆ:</strong> ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್ಎಸ್) ಕಾರ್ಯಕರ್ತರು ಡ್ಯಾನ್ಸ್ ಬಾರ್ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.</p><p>ಶನಿವಾರ ತಡರಾತ್ರಿ ಪನ್ವೆಲ್ ಹೊರವಲಯದ ‘ನೈಟ್ ರೈಡರ್ಸ್ ಬಾರ್‘ನಲ್ಲಿ ಈ ಘಟನೆ ನಡೆದಿದೆ. ಎಂಎನ್ಎಸ್ ಕಾರ್ಯಕರ್ತರ ಗುಂಪು ಬಾರ್ ಒಳಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಮದ್ಯದ ಬಾಟಲಿಗಳನ್ನು ಒಡೆದುಹಾಕಿ ಭಾರೀ ಹಾನಿ ಉಂಟುಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಈ ದಾಳಿಯ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮುರಿದ ಟೇಬಲ್, ಕುರ್ಚಿಗಳು, ಪುಡಿ ಪುಡಿಯಾದ ಕಿಟಕಿ ಗಾಜುಗಳನ್ನು ವಿಡಿಯೊದಲ್ಲಿ ಕಾಣಬಹುದು.</p><p>ಛತ್ರಪತಿ ಶಿವಾಜಿ ಮಹಾರಾಜರ ಪವಿತ್ರ ಭೂಮಿಯಲ್ಲಿ ಡ್ಯಾನ್ಸ್ ಬಾರ್ಗಳಿಗೆ ಸ್ಥಾನವಿಲ್ಲ. ಇಂತಹ ಅಶ್ಲೀಲತೆಯನ್ನು ನಾವು ರಾಜ್ಯದ ಯಾವುದೇ ಭಾಗದಲ್ಲಿಯೂ ಸಹಿಸುವುದಿಲ್ಲ ಎಂದು ಎಂಎನ್ಎಸ್ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.</p><p>ಈ ಘಟನೆ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>