<p><strong>ಠಾಣೆ:</strong> ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಂಡಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ತರೆಳಿದ್ದ ಪೊಲೀಸರ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಸುಮಾರು 50 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಹಾನಿ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. </p><p>ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯ ತಾಯಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಪೊಲೀಸರ ತಂಡ ಆಸ್ಪತ್ರೆಗೆ ತೆರಳಿತ್ತು. ಆ ಸಮಯದಲ್ಲಿ ಆಸ್ಪತ್ರೆಯ ಹೊರಗಡೆ ಜಮಾಯಿಸಿದ್ದ ಜನರ ಗುಂಪು ಪೊಲೀಸರ ಮೇಲೆಯೇ ದಾಳಿ ನಡೆಸಿತ್ತು. </p><p>ಬಳಿಕ ಆರೋಪಿ ಪತ್ತೆಗಾಗಿ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆಯೂ 20ರಿಂದ 25 ಯುವಕರ ಗುಂಪು ಪೊಲೀಸರೊಂದಿಗೆ ವಾಗ್ವಾದ ನಡೆಸಿತ್ತು. ಜತೆಗೆ ಹಲ್ಲೆ ನಡೆಸಿತ್ತು. </p><p>ಘಟನೆ ಸಂಬಂಧ ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ವಿವಿಧ ಸೆಕ್ಷನ್ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಠಾಣೆ:</strong> ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಂಡಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ತರೆಳಿದ್ದ ಪೊಲೀಸರ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಸುಮಾರು 50 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಹಾನಿ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. </p><p>ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯ ತಾಯಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಪೊಲೀಸರ ತಂಡ ಆಸ್ಪತ್ರೆಗೆ ತೆರಳಿತ್ತು. ಆ ಸಮಯದಲ್ಲಿ ಆಸ್ಪತ್ರೆಯ ಹೊರಗಡೆ ಜಮಾಯಿಸಿದ್ದ ಜನರ ಗುಂಪು ಪೊಲೀಸರ ಮೇಲೆಯೇ ದಾಳಿ ನಡೆಸಿತ್ತು. </p><p>ಬಳಿಕ ಆರೋಪಿ ಪತ್ತೆಗಾಗಿ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆಯೂ 20ರಿಂದ 25 ಯುವಕರ ಗುಂಪು ಪೊಲೀಸರೊಂದಿಗೆ ವಾಗ್ವಾದ ನಡೆಸಿತ್ತು. ಜತೆಗೆ ಹಲ್ಲೆ ನಡೆಸಿತ್ತು. </p><p>ಘಟನೆ ಸಂಬಂಧ ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ವಿವಿಧ ಸೆಕ್ಷನ್ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>