<p><strong>ನವದೆಹಲಿ</strong>: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಉದ್ದೇಶಿತ ಅಬಕಾರಿ ನೀತಿ ಹಗರಣದ ವೇಳೆ ಬಳಸಿದ್ದ ಮೊಬೈಲ್ ನಾಪತ್ತೆಯಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.</p><p>ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರನ್ನು ಪ್ರಶ್ನಿಸಿದರೆ, ಮೊಬೈಲ್ ಎಲ್ಲಿದೆ ಎಂಬುದು ಗೊತ್ತಿಲ್ಲ ಎಂದು ಹೇಳಿರುವುದಾಗಿ ವರದಿಯಲ್ಲಿ ತಿಳಿಸಲಾಗಿದೆ.</p><p>ಇ.ಡಿ ಮೂಲಗಳ ಪ್ರಕಾರ, ನಾಪತ್ತೆಯಾಗಿರುವ ಮೊಬೈಲ್ನಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿ ಇರಬಹುದು. ಇದು ಈವರೆಗೆ ಕಾಣೆಯಾದ 171ನೇ ಸಾಧನವಾಗಿದೆ.</p><p>ಸದ್ಯ ಪತ್ತೆಯಾಗಿರುವ 17 ಮೊಬೈಲ್ಗಳಿಂದ ಮಾಹಿತಿ ಕಲೆಹಾಕಿದ ನಂತರ, ಇ.ಡಿ ತನಿಖೆ ವೇಗ ಪಡೆದಿದೆ. ಇವುಗಳಿಂದ ಲಭ್ಯವಾದ ಮಾಹಿತಿ ಆಧರಿಸಿ, ಮನೀಶ್ ಸಿಸೋಡಿಯಾ ಅವರ ಹೆಸರನ್ನು ಆರೋಪಪಟ್ಟಿಯಲ್ಲಿ ದಾಖಲಿಸಲಾಗಿದೆ ಎಂದು ಮೂಲಗಳು ಹೇಳಿವೆ.</p><p>ದಾಖಲೆ ನಾಶ ಮಾಡುವ ಸಲುವಾಗಿ, ನಾಪತ್ತೆಯಾಗಿರುವ ಮೊಬೈಲ್ಗಳನ್ನೂ ನಾಶ ಮಾಡಿರುವ ಸಾಧ್ಯತೆ ಇದೆ ಎಂದು ತನಿಖಾಧಿಖಾರಿಗಳು ಶಂಕಿಸಿದ್ದಾರೆ.</p><p>ಅಬಕಾರಿ ನೀತಿ ಪ್ರಕರಣದ ಹೆಚ್ಚಿನ ಆರೋಪಿಗಳು 2022ರ ಮೇ–ಆಗಸ್ಟ್ ಅವಧಿಯಲ್ಲಿ ತಮ್ಮ ಮೊಬೈಲ್ಗಳು ಮತ್ತು ಲ್ಯಾಪ್ಟಾಪ್ಗಳನ್ನು ಬದಲಿಸಿದ್ದಾರೆ. ಆರೋಪಿಗಳಿಂದ ವಶಕ್ಕೆ ಪಡೆಯಲಾದ ಮೊಬೈಲ್ಗಳು ಮತ್ತು ಲ್ಯಾಪ್ಟಾಪ್ಗಳಿಂದಲೇ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗಿದೆ ಎಂಬುದನ್ನು ಇ.ಡಿ ಆರೋಪಪಟ್ಟಿಯಲ್ಲೂ ಉಲ್ಲೇಖಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಉದ್ದೇಶಿತ ಅಬಕಾರಿ ನೀತಿ ಹಗರಣದ ವೇಳೆ ಬಳಸಿದ್ದ ಮೊಬೈಲ್ ನಾಪತ್ತೆಯಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.</p><p>ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರನ್ನು ಪ್ರಶ್ನಿಸಿದರೆ, ಮೊಬೈಲ್ ಎಲ್ಲಿದೆ ಎಂಬುದು ಗೊತ್ತಿಲ್ಲ ಎಂದು ಹೇಳಿರುವುದಾಗಿ ವರದಿಯಲ್ಲಿ ತಿಳಿಸಲಾಗಿದೆ.</p><p>ಇ.ಡಿ ಮೂಲಗಳ ಪ್ರಕಾರ, ನಾಪತ್ತೆಯಾಗಿರುವ ಮೊಬೈಲ್ನಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿ ಇರಬಹುದು. ಇದು ಈವರೆಗೆ ಕಾಣೆಯಾದ 171ನೇ ಸಾಧನವಾಗಿದೆ.</p><p>ಸದ್ಯ ಪತ್ತೆಯಾಗಿರುವ 17 ಮೊಬೈಲ್ಗಳಿಂದ ಮಾಹಿತಿ ಕಲೆಹಾಕಿದ ನಂತರ, ಇ.ಡಿ ತನಿಖೆ ವೇಗ ಪಡೆದಿದೆ. ಇವುಗಳಿಂದ ಲಭ್ಯವಾದ ಮಾಹಿತಿ ಆಧರಿಸಿ, ಮನೀಶ್ ಸಿಸೋಡಿಯಾ ಅವರ ಹೆಸರನ್ನು ಆರೋಪಪಟ್ಟಿಯಲ್ಲಿ ದಾಖಲಿಸಲಾಗಿದೆ ಎಂದು ಮೂಲಗಳು ಹೇಳಿವೆ.</p><p>ದಾಖಲೆ ನಾಶ ಮಾಡುವ ಸಲುವಾಗಿ, ನಾಪತ್ತೆಯಾಗಿರುವ ಮೊಬೈಲ್ಗಳನ್ನೂ ನಾಶ ಮಾಡಿರುವ ಸಾಧ್ಯತೆ ಇದೆ ಎಂದು ತನಿಖಾಧಿಖಾರಿಗಳು ಶಂಕಿಸಿದ್ದಾರೆ.</p><p>ಅಬಕಾರಿ ನೀತಿ ಪ್ರಕರಣದ ಹೆಚ್ಚಿನ ಆರೋಪಿಗಳು 2022ರ ಮೇ–ಆಗಸ್ಟ್ ಅವಧಿಯಲ್ಲಿ ತಮ್ಮ ಮೊಬೈಲ್ಗಳು ಮತ್ತು ಲ್ಯಾಪ್ಟಾಪ್ಗಳನ್ನು ಬದಲಿಸಿದ್ದಾರೆ. ಆರೋಪಿಗಳಿಂದ ವಶಕ್ಕೆ ಪಡೆಯಲಾದ ಮೊಬೈಲ್ಗಳು ಮತ್ತು ಲ್ಯಾಪ್ಟಾಪ್ಗಳಿಂದಲೇ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗಿದೆ ಎಂಬುದನ್ನು ಇ.ಡಿ ಆರೋಪಪಟ್ಟಿಯಲ್ಲೂ ಉಲ್ಲೇಖಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>