<p><strong>ನವದೆಹಲಿ</strong>: ‘ಇತಿಹಾಸ ತಿರುಚುವುದರಲ್ಲಿ ಪ್ರಧಾನಿ ಮೋದಿ ನಿಸ್ಸೀಮರು’ ಎಂದು ಕಾಂಗ್ರೆಸ್ ಶುಕ್ರವಾರ ಟೀಕಿಸಿದೆ.</p>.<p>ಸಂಸತ್ತಿನಲ್ಲಿ ಕಳೆದ ತಿಂಗಳು ನಡೆದ ವಂದೇ ಮಾತರಂ ಗೀತೆ ಕುರಿತ ಚರ್ಚೆಯಲ್ಲಿ, ರಾಷ್ಟ್ರಗೀತೆಯ ಇತಿಹಾಸವನ್ನು ವಿರೂಪಗೊಳಿಸಲು ಹಾಗೂ ರವೀಂದ್ರನಾಥ ಟ್ಯಾಗೋರ್ ಅವರಿಗೆ ‘ಅಪಖ್ಯಾತಿ’ ತರಲು ಯತ್ನಿಸಿದರು ಎಂದು ದೂರಿದೆ. </p>.<p>‘ಮಹಾತ್ಮ ಗಾಂಧಿ ಅವರ ಸ್ಮರಣೆ ಮತ್ತು ಪರಂಪರೆಯನ್ನು ಪ್ರಧಾನಿ ವ್ಯವಸ್ಥಿತವಾಗಿ ಕೆಡವುತ್ತಿದ್ದಾರೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಆರೋಪಿಸಿದ್ದಾರೆ.</p>.<p>ನೇತಾಜಿ ಸುಭಾಷ್ಚಂದ್ರ ಬೋಸ್ ಅವರ 129ನೇ ಜನ್ಮದಿನಾಚರಣೆಯಂದು ರಮೇಶ್ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಈ ಅಂಶಗಳನ್ನು ಉಲ್ಲೇಖಿಸಿದ್ದಾರೆ.</p>.<p>‘ಜ.23 ನೇತಾಜಿಯ ಜನ್ಮದಿನ. 1937ರಲ್ಲಿ ವಂದೇ ಮಾತರಂ ಗೀತೆಯಲ್ಲಿನ ಸಾಲುಗಳ ವಿವಾದವನ್ನು ಪರಿಹರಿಸಲು ಬೋಸ್ ಪ್ರಮುಖ ಪಾತ್ರ ವಹಿಸಿದ್ದರು. ಆದರೆ, ಸಂಸತ್ತಿನಲ್ಲಿ ಚರ್ಚೆಯ ವೇಳೆ ಪ್ರಧಾನಿ ಮೋದಿ ಅವರು ಉದ್ದೇಶಪೂರ್ವಕವಾಗಿ ಈ ವಿಷಯವನ್ನು ನಿಗ್ರಹಿಸಿದರು’ ಎಂದಿದ್ದಾರೆ.</p>.<p>ಬೋಸ್ ಪಾತ್ರದ ಕುರಿತಂತೆ ಅವರ ಮೊಮ್ಮಗ, ಇತಿಹಾಸಕಾರ ಸುಗತ ಬೋಸ್ ಅವರೇ ಉಲ್ಲೇಖಿಸಿದ್ದಾರೆ. ಆದರೂ, ಬಿಜೆಪಿ ಮುಖಂಡರು ಇತಿಹಾಸ ತಿರುಚುವುದರಲ್ಲಿ ನಿರತರಾಗಿದ್ದಾರೆ ಎಂದು ಜೈರಾಮ್ ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಇತಿಹಾಸ ತಿರುಚುವುದರಲ್ಲಿ ಪ್ರಧಾನಿ ಮೋದಿ ನಿಸ್ಸೀಮರು’ ಎಂದು ಕಾಂಗ್ರೆಸ್ ಶುಕ್ರವಾರ ಟೀಕಿಸಿದೆ.</p>.<p>ಸಂಸತ್ತಿನಲ್ಲಿ ಕಳೆದ ತಿಂಗಳು ನಡೆದ ವಂದೇ ಮಾತರಂ ಗೀತೆ ಕುರಿತ ಚರ್ಚೆಯಲ್ಲಿ, ರಾಷ್ಟ್ರಗೀತೆಯ ಇತಿಹಾಸವನ್ನು ವಿರೂಪಗೊಳಿಸಲು ಹಾಗೂ ರವೀಂದ್ರನಾಥ ಟ್ಯಾಗೋರ್ ಅವರಿಗೆ ‘ಅಪಖ್ಯಾತಿ’ ತರಲು ಯತ್ನಿಸಿದರು ಎಂದು ದೂರಿದೆ. </p>.<p>‘ಮಹಾತ್ಮ ಗಾಂಧಿ ಅವರ ಸ್ಮರಣೆ ಮತ್ತು ಪರಂಪರೆಯನ್ನು ಪ್ರಧಾನಿ ವ್ಯವಸ್ಥಿತವಾಗಿ ಕೆಡವುತ್ತಿದ್ದಾರೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಆರೋಪಿಸಿದ್ದಾರೆ.</p>.<p>ನೇತಾಜಿ ಸುಭಾಷ್ಚಂದ್ರ ಬೋಸ್ ಅವರ 129ನೇ ಜನ್ಮದಿನಾಚರಣೆಯಂದು ರಮೇಶ್ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಈ ಅಂಶಗಳನ್ನು ಉಲ್ಲೇಖಿಸಿದ್ದಾರೆ.</p>.<p>‘ಜ.23 ನೇತಾಜಿಯ ಜನ್ಮದಿನ. 1937ರಲ್ಲಿ ವಂದೇ ಮಾತರಂ ಗೀತೆಯಲ್ಲಿನ ಸಾಲುಗಳ ವಿವಾದವನ್ನು ಪರಿಹರಿಸಲು ಬೋಸ್ ಪ್ರಮುಖ ಪಾತ್ರ ವಹಿಸಿದ್ದರು. ಆದರೆ, ಸಂಸತ್ತಿನಲ್ಲಿ ಚರ್ಚೆಯ ವೇಳೆ ಪ್ರಧಾನಿ ಮೋದಿ ಅವರು ಉದ್ದೇಶಪೂರ್ವಕವಾಗಿ ಈ ವಿಷಯವನ್ನು ನಿಗ್ರಹಿಸಿದರು’ ಎಂದಿದ್ದಾರೆ.</p>.<p>ಬೋಸ್ ಪಾತ್ರದ ಕುರಿತಂತೆ ಅವರ ಮೊಮ್ಮಗ, ಇತಿಹಾಸಕಾರ ಸುಗತ ಬೋಸ್ ಅವರೇ ಉಲ್ಲೇಖಿಸಿದ್ದಾರೆ. ಆದರೂ, ಬಿಜೆಪಿ ಮುಖಂಡರು ಇತಿಹಾಸ ತಿರುಚುವುದರಲ್ಲಿ ನಿರತರಾಗಿದ್ದಾರೆ ಎಂದು ಜೈರಾಮ್ ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>