<p><strong>ನವದೆಹಲಿ</strong>: ಲೋಕಸಭೆಯ ಸಾರ್ವತ್ರಿಕ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ, ಮಹಿಳೆಯರು ಮತ್ತು ಇತರೆ ಹಿಂದುಳಿದ ವರ್ಗಗಳ ಜನರನ್ನು ಓಲೈಸುವ ಯತ್ನವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ₹15 ಸಾವಿರ ಕೋಟಿ ವೆಚ್ಚದ ‘ವಿಶ್ವಕರ್ಮ ಯೋಜನೆ’ಯನ್ನು ಘೋಷಿಸಿದರು.</p>.<p>ಈ ಯೋಜನೆಯ ಕಾರ್ಯಕ್ರಮಗಳು ಹಣದುಬ್ಬರದ ಸಂದರ್ಭದಲ್ಲಿ ಜನರ ಮೇಲಿನ ಹೊರೆ ತಗ್ಗಿಸಲು ನೆರವಾಗಲಿದೆ ಎಂದು ತಿಳಿಸಿದರು. ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು.</p>.<p>15 ಸಾವಿರ ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್ ನಿರ್ವಹಣೆ, ದುರಸ್ತಿ ತರಬೇತಿ ನೀಡುವ ಯೋಜನೆ ಹಾಗೂ ನಗರಗಳಲ್ಲಿನ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗಾಗಿ ವಸತಿ ಯೋಜನೆ ಜಾರಿಗೊಳಿಸುವ ತೀರ್ಮಾನವನ್ನು ಪ್ರಧಾನಿ ಪ್ರಕಟಿಸಿದರು.</p>.<p>‘ವಿಶ್ವಕರ್ಮ ಜಯಂತಿಯಂದು ನಾವು ಈ ಸಂಬಂಧ ವಿವಿಧ ಯೋಜನೆಗಳನ್ನು ಪ್ರಕಟಿಸಲಿದ್ದೇವೆ. ಈ ಯೋಜನೆಗಳು ಕೌಶಲಯುಕ್ತ, ಸಾಂಪ್ರಾದಾಯಿಕ ಕುಶಲಕರ್ಮಿಗಳಿಗೆ ಮುಖ್ಯವಾಗಿ ಇತರೆ ಹಿಂದುಳಿದ ವರ್ಗಗಳ ಸಮುದಾಯವರಿಗೆ ನೆರವಾಗಲಿದೆ ಎಂದು ತಿಳಿಸಿದರು.</p>.<p>ನೇಯ್ಗೆದಾರರು, ಅಕ್ಕಸಾಲಿಗರು, ಕಂಬಾರರು, ಅಗಸರು, ಕ್ಷೌರಿಕರು ಹಾಗೂ ಇಂತಹ ವಿವಿಧ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣ ವಿಶ್ವಕರ್ಮ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯನ್ನು ಸೆಪ್ಟೆಂಬರ್ 17, 2023ರಂದು ಆರಂಭಿಸಲಾಗುವುದು ಎಂದು ಹೇಳಿದರು.</p>.<p>ವಿಶ್ವಕರ್ಮ ಜಯಂತಿ ದಿನದಂದು ಈ ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದು ಪ್ರಧಾನಿ ಪ್ರಕಟಿಸಿದರಾದರೂ, ಕಾಕತಾಳೀಯ ಎಂಬಂತೆ ಆ ದಿನ ಅವರ ಜನ್ಮದಿನವೂ ಆಗಿದೆ. ಸೆ. 17ರಂದು ಮೋದಿ 73ನೇ ವರ್ಷಕ್ಕೆ ಪದಾರ್ಪಣೆ ಮಾಡಲಿದ್ದಾರೆ.</p>.<p>ಮಹಿಳಾ ಸಂಘಗಳಿಗೆ ತರಬೇತಿ: ಮಹಿಳಾ ಮತದಾರರನ್ನು ಗುರಿಯಾಗಿಸಿಕೊಂಡು, ಮಹಿಳಾ ಸ್ವಸಹಾಯ ಗುಂಪುಗಳಿಗೆ (ಎಸ್ಎಚ್ಜಿ) ಡ್ರೋನ್ ತರಬೇತಿ ನೀಡುವ ಯೋಜನೆಯನ್ನು ಅವರು ಪ್ರಕಟಿಸಿದರು.</p>.<p>ಈ ಯೋಜನೆಯಡಿ 15,000 ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಾಲ ನೀಡಲಾಗುವುದು ಹಾಗೂ ಡ್ರೋನ್ನ ನಿರ್ವಹಣೆ ಮತ್ತು ದುರಸ್ತಿ ಕುರಿತು ತರಬೇತಿ ನೀಡಲಾಗುತ್ತದೆ ಎಂದು ಹೇಳಿದರು.</p>.<p>ಹಣದುಬ್ಬರ,ಬೆಲೆ ಏರಿಕೆ ಉಲ್ಲೇಖ: ಅಗತ್ಯವಸ್ತುಗಳ ಬೆಲೆ ಏರಿಕೆ ವಿಷಯವನ್ನು ಭಾಷಣದಲ್ಲಿ ಉಲ್ಲೇಖಿಸಿದ ಅವರು, ಹಣದುಬ್ಬರಕ್ಕೆ ಕಡಿವಾಣ ಹಾಕಲು ಸರ್ಕಾರ ಇನ್ನಷ್ಟು ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.</p>.<p>ಹಣದುಬ್ಬರವನ್ನು ತಡೆಯಲು, ದೇಶವಾಸಿಗಳ ಮೇಲಿನ ಹೊರೆ ತಪ್ಪಿಸಲು ನಾನು ಇನ್ನಷ್ಟು ಕ್ರಮ ಕೈಗೊಳ್ಳಬೇಕಾಗಿದೆ. ಈ ಬಗ್ಗೆ ನನ್ನ ಪ್ರಯತ್ನ ಮುಂದುವರಿಯಲಿದೆ. ಹಣದುಬ್ಬರ ತಡೆಯುವ ವಿಷಯದಲ್ಲಿ ಹಿಂದಿನ ಅವಧಿಗೆ ಹೋಲಿಸಿದರೆ, ನಾವು ಸ್ವಲ್ಪ ಯಶಸ್ಸು ಕಂಡಿದ್ದೇವೆ ಎಂದರು.</p>.<p>ದೇಶದಲ್ಲಿ ಚಿಲ್ಲರೆ ಹಣದುಬ್ಬರ ದರವು ಈಗ ಗರಿಷ್ಠ ಮಟ್ಟವನ್ನು ಮೀರಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಪ್ರಕಟಿಸಿದ ಮಾರನೇ ದಿನವೇ ಈ ಅಂಶವನ್ನು ಅವರು ಪ್ರಮುಖವಾಗಿ ಉಲ್ಲೇಖಿಸಿದ್ದಾರೆ.</p>.<p>ಅಗತ್ಯ ವಸ್ತುಗಳ ದರ ಏರಿಕೆಗೆ ರಷ್ಯಾ –ಉಕ್ರೇನ್ ಯುದ್ಧ ಕಾರಣ ಎಂದು ಹೇಳಿದ ಅವರು, ಕೊರೊನಾದ ಪ್ರತಿಕೂಲ ಪರಿಣಾಮಗಳಿಂದ ಜಗತ್ತು ಇನ್ನೂ ಹೊರಬಂದಿಲ್ಲ. ಇದರ ಜೊತೆಗೆ ಯುದ್ಧ ಹೆಚ್ಚುವರಿ ಸಮಸ್ಯೆಯಗಳನ್ನು ಸೃಷ್ಟಿಸಿದೆ ಎಂದು ದೂರಿದರು.</p>.<p>ಇದು, ಇಡೀ ಜಗತ್ತು ಹಣದುಬ್ಬರ ಸಮಸ್ಯೆ ಎದುರಿಸುತ್ತಿದೆ. ಜಾಗತಿಕ ಆರ್ಥಿಕತೆಗೆ ಹಣದುಬ್ಬರ ಅಡ್ಡಿಯಾಗಿದೆ. ನಾವು ಕೆಲವು ವಸ್ತುಗಳನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ. ಏರಿಕೆಯಾಗಿರುವ ದರದಲ್ಲಿಯೇ ಇವುಗಳನ್ನು ಆಮದು ಮಾಡಿಕೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲೋಕಸಭೆಯ ಸಾರ್ವತ್ರಿಕ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ, ಮಹಿಳೆಯರು ಮತ್ತು ಇತರೆ ಹಿಂದುಳಿದ ವರ್ಗಗಳ ಜನರನ್ನು ಓಲೈಸುವ ಯತ್ನವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ₹15 ಸಾವಿರ ಕೋಟಿ ವೆಚ್ಚದ ‘ವಿಶ್ವಕರ್ಮ ಯೋಜನೆ’ಯನ್ನು ಘೋಷಿಸಿದರು.</p>.<p>ಈ ಯೋಜನೆಯ ಕಾರ್ಯಕ್ರಮಗಳು ಹಣದುಬ್ಬರದ ಸಂದರ್ಭದಲ್ಲಿ ಜನರ ಮೇಲಿನ ಹೊರೆ ತಗ್ಗಿಸಲು ನೆರವಾಗಲಿದೆ ಎಂದು ತಿಳಿಸಿದರು. ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು.</p>.<p>15 ಸಾವಿರ ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್ ನಿರ್ವಹಣೆ, ದುರಸ್ತಿ ತರಬೇತಿ ನೀಡುವ ಯೋಜನೆ ಹಾಗೂ ನಗರಗಳಲ್ಲಿನ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗಾಗಿ ವಸತಿ ಯೋಜನೆ ಜಾರಿಗೊಳಿಸುವ ತೀರ್ಮಾನವನ್ನು ಪ್ರಧಾನಿ ಪ್ರಕಟಿಸಿದರು.</p>.<p>‘ವಿಶ್ವಕರ್ಮ ಜಯಂತಿಯಂದು ನಾವು ಈ ಸಂಬಂಧ ವಿವಿಧ ಯೋಜನೆಗಳನ್ನು ಪ್ರಕಟಿಸಲಿದ್ದೇವೆ. ಈ ಯೋಜನೆಗಳು ಕೌಶಲಯುಕ್ತ, ಸಾಂಪ್ರಾದಾಯಿಕ ಕುಶಲಕರ್ಮಿಗಳಿಗೆ ಮುಖ್ಯವಾಗಿ ಇತರೆ ಹಿಂದುಳಿದ ವರ್ಗಗಳ ಸಮುದಾಯವರಿಗೆ ನೆರವಾಗಲಿದೆ ಎಂದು ತಿಳಿಸಿದರು.</p>.<p>ನೇಯ್ಗೆದಾರರು, ಅಕ್ಕಸಾಲಿಗರು, ಕಂಬಾರರು, ಅಗಸರು, ಕ್ಷೌರಿಕರು ಹಾಗೂ ಇಂತಹ ವಿವಿಧ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣ ವಿಶ್ವಕರ್ಮ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯನ್ನು ಸೆಪ್ಟೆಂಬರ್ 17, 2023ರಂದು ಆರಂಭಿಸಲಾಗುವುದು ಎಂದು ಹೇಳಿದರು.</p>.<p>ವಿಶ್ವಕರ್ಮ ಜಯಂತಿ ದಿನದಂದು ಈ ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದು ಪ್ರಧಾನಿ ಪ್ರಕಟಿಸಿದರಾದರೂ, ಕಾಕತಾಳೀಯ ಎಂಬಂತೆ ಆ ದಿನ ಅವರ ಜನ್ಮದಿನವೂ ಆಗಿದೆ. ಸೆ. 17ರಂದು ಮೋದಿ 73ನೇ ವರ್ಷಕ್ಕೆ ಪದಾರ್ಪಣೆ ಮಾಡಲಿದ್ದಾರೆ.</p>.<p>ಮಹಿಳಾ ಸಂಘಗಳಿಗೆ ತರಬೇತಿ: ಮಹಿಳಾ ಮತದಾರರನ್ನು ಗುರಿಯಾಗಿಸಿಕೊಂಡು, ಮಹಿಳಾ ಸ್ವಸಹಾಯ ಗುಂಪುಗಳಿಗೆ (ಎಸ್ಎಚ್ಜಿ) ಡ್ರೋನ್ ತರಬೇತಿ ನೀಡುವ ಯೋಜನೆಯನ್ನು ಅವರು ಪ್ರಕಟಿಸಿದರು.</p>.<p>ಈ ಯೋಜನೆಯಡಿ 15,000 ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಾಲ ನೀಡಲಾಗುವುದು ಹಾಗೂ ಡ್ರೋನ್ನ ನಿರ್ವಹಣೆ ಮತ್ತು ದುರಸ್ತಿ ಕುರಿತು ತರಬೇತಿ ನೀಡಲಾಗುತ್ತದೆ ಎಂದು ಹೇಳಿದರು.</p>.<p>ಹಣದುಬ್ಬರ,ಬೆಲೆ ಏರಿಕೆ ಉಲ್ಲೇಖ: ಅಗತ್ಯವಸ್ತುಗಳ ಬೆಲೆ ಏರಿಕೆ ವಿಷಯವನ್ನು ಭಾಷಣದಲ್ಲಿ ಉಲ್ಲೇಖಿಸಿದ ಅವರು, ಹಣದುಬ್ಬರಕ್ಕೆ ಕಡಿವಾಣ ಹಾಕಲು ಸರ್ಕಾರ ಇನ್ನಷ್ಟು ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.</p>.<p>ಹಣದುಬ್ಬರವನ್ನು ತಡೆಯಲು, ದೇಶವಾಸಿಗಳ ಮೇಲಿನ ಹೊರೆ ತಪ್ಪಿಸಲು ನಾನು ಇನ್ನಷ್ಟು ಕ್ರಮ ಕೈಗೊಳ್ಳಬೇಕಾಗಿದೆ. ಈ ಬಗ್ಗೆ ನನ್ನ ಪ್ರಯತ್ನ ಮುಂದುವರಿಯಲಿದೆ. ಹಣದುಬ್ಬರ ತಡೆಯುವ ವಿಷಯದಲ್ಲಿ ಹಿಂದಿನ ಅವಧಿಗೆ ಹೋಲಿಸಿದರೆ, ನಾವು ಸ್ವಲ್ಪ ಯಶಸ್ಸು ಕಂಡಿದ್ದೇವೆ ಎಂದರು.</p>.<p>ದೇಶದಲ್ಲಿ ಚಿಲ್ಲರೆ ಹಣದುಬ್ಬರ ದರವು ಈಗ ಗರಿಷ್ಠ ಮಟ್ಟವನ್ನು ಮೀರಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಪ್ರಕಟಿಸಿದ ಮಾರನೇ ದಿನವೇ ಈ ಅಂಶವನ್ನು ಅವರು ಪ್ರಮುಖವಾಗಿ ಉಲ್ಲೇಖಿಸಿದ್ದಾರೆ.</p>.<p>ಅಗತ್ಯ ವಸ್ತುಗಳ ದರ ಏರಿಕೆಗೆ ರಷ್ಯಾ –ಉಕ್ರೇನ್ ಯುದ್ಧ ಕಾರಣ ಎಂದು ಹೇಳಿದ ಅವರು, ಕೊರೊನಾದ ಪ್ರತಿಕೂಲ ಪರಿಣಾಮಗಳಿಂದ ಜಗತ್ತು ಇನ್ನೂ ಹೊರಬಂದಿಲ್ಲ. ಇದರ ಜೊತೆಗೆ ಯುದ್ಧ ಹೆಚ್ಚುವರಿ ಸಮಸ್ಯೆಯಗಳನ್ನು ಸೃಷ್ಟಿಸಿದೆ ಎಂದು ದೂರಿದರು.</p>.<p>ಇದು, ಇಡೀ ಜಗತ್ತು ಹಣದುಬ್ಬರ ಸಮಸ್ಯೆ ಎದುರಿಸುತ್ತಿದೆ. ಜಾಗತಿಕ ಆರ್ಥಿಕತೆಗೆ ಹಣದುಬ್ಬರ ಅಡ್ಡಿಯಾಗಿದೆ. ನಾವು ಕೆಲವು ವಸ್ತುಗಳನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ. ಏರಿಕೆಯಾಗಿರುವ ದರದಲ್ಲಿಯೇ ಇವುಗಳನ್ನು ಆಮದು ಮಾಡಿಕೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>