<p> <strong>ಮೋತಿಹಾರಿ (ಬಿಹಾರ):</strong> ಆರ್ಜೆಡಿ ಪಕ್ಷವು ಯುವಕರಿಗೆ ಉದ್ಯೋಗ ನೀಡುವ ಬಗ್ಗೆ ಯೋಚಿಸುವುದಿಲ್ಲ, ಯಾಕೆಂದರೆ ಅವರು ಕೆಲಸ ನೀಡುವ ಮೊದಲು ಬಡವರ ಜಮೀನು ಕಿತ್ತುಕೊಂಡರು ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.</p>.ಬಿಹಾರ: ಆಯೋಗದ ಹೇಳಿಕೆ ತಳ್ಳಿಹಾಕಿದ ತೇಜಸ್ವಿ.<p>ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರೊಂದಿಗೆ ತಳುಕು ಹಾಕಿಕೊಂಡಿರುವ ‘ಉದ್ಯೋಗಕ್ಕಾಗಿ ಭೂಮಿ’ ಹಗರಣವನ್ನು ಉಲ್ಲೇಖಿಸಿ ಪ್ರಧಾನಿ ಹೀಗೆ ಹೇಳಿದ್ದಾರೆ.</p><p>ಕಾಂಗ್ರೆಸ್ ಹಾಗೂ ಆರ್ಜೆಡಿ ಪಕ್ಷಗಳು ಬಡವರ ಹಾಗೂ ಸಾಮಾಜಿಕವಾಗಿ ಹಿಂದುಳಿದವರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ, ಆದರೆ ಉಭಯ ಪಕ್ಷಗಳು ಈ ಹಿಂದೆ ಈ ಸಮುದಾಯಗಳನ್ನು ನಿರ್ಲಕ್ಷಿಸಿತ್ತು ಎಂದು ಪ್ರಧಾನಿ ಆರೋಪಿದ್ದಾರೆ.</p>.ಬಿಹಾರ: ಅಪರಾಧ ಹೆಚ್ಚಳಕ್ಕೆ ನಿರುದ್ಯೋಗಿ ಕೃಷಿ ಕಾರ್ಮಿಕರು ಕಾರಣ; ಪೊಲೀಸ್ ಅಧಿಕಾರಿ.<p>ಮುಂಬರುವ ವಿಧಾನಸಭೆ ಚುನಾವಣೆಯ ಅಂಗವಾಗಿ ಮೋತಿಹಾರಿಯಲ್ಲಿ ಆಯೋಜಿಸಲಾದ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಬನಾಯೇಂಗೆ ನಯಾ ಬಿಹಾರ್, ಫಿರ್ ಏಕ್ ಬಾರ್ ಎನ್ಡಿಎ ಸರ್ಕಾರ್’ (ಹೊಸ ಬಿಹಾರ ಮಾಡುತ್ತೇವೆ, ಮತ್ತೊಮ್ಮೆ ಎನ್ಡಿಎ ಸರ್ಕಾರ) ಎನ್ನುವ ಹೊಸ ಘೋಷಣೆಯನ್ನೂ ಮಾಡಿದ್ದಾರೆ.</p><p>ಅಪರೇಷನ್ ಸಿಂಧೂರ ನಡೆಯುವ ನಿರ್ಧಾರವನ್ನು ನಾನು ಬಿಹಾರದ ನೆಲದಲ್ಲೇ ನಿಂತು ಮಾಡಿದ್ದೆ. ಅದರ ಯಶಸ್ಸನ್ನು ಇಡೀ ಜಗತ್ತು ನೋಡಿದೆ ಎಂದು ಹೇಳಿದ್ದಾರೆ.</p>.ಬಿಹಾರ: ಹಲವು ಸ್ಥಳಗಳಲ್ಲಿ 5.76 ಲಕ್ಷ ಮತದಾರರ ನೋಂದಣಿ; ಚುನಾವಣಾ ಆಯೋಗ .<p>ಆರ್ಜೆಡಿ–ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿದ್ದವು. ಅವರಿಗೆ ಬಡವರ ಕಲ್ಯಾಣದ ಬಗ್ಗೆ ಯೋಚನೆಯೇ ಇಲ್ಲ. ಅವರು ಬಡವರು, ಸಾಮಾಜಿಕವಾಗಿ ಹಿಂದುಳಿದವರ ಹೆಸರಿನಲ್ಲಿ ರಾಜಕೀಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.</p><p>ಯುವಕರಿಗೆ ಹೆಚ್ಚಿನ ಅವಕಾಶ ನೀಡುತ್ತೇವೆ ಎಂದು ಭರವಸೆ ನೀಡಿದ ಅವರು, ದೇಶದಲ್ಲಿ ಯುವಕರಿಗೆ ಉದ್ಯೋಗಾವಕಾಶ ನೀಡಲು ಕೇಂದ್ರ ಸರ್ಕಾರ ಒಂದು ಲಕ್ಷ ಕೋಟಿ ಹೂಡಿಕೆ ಮಾಡಲಿದೆ ಎಂದರು.</p><p>ಪೂರ್ವ ಭಾರತದ ಅಭಿವೃದ್ಧಿಗೆ ವಿಕಸಿತ ಬಿಹಾರ ಅತಿ ಮುಖ್ಯ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಎನ್ಡಿಎ ಕಾಳಜಿ ವಹಿಸಿದೆ ಎಂದು ಮೋದಿ ಹೇಳಿದ್ದಾರೆ.</p>.ಬಿಹಾರ | ಚುನಾವಣಾ ಆಯೋಗ BJPಯ ಶಾಖೆಯಾಯಿತೇ..?: ರಾಹುಲ್ ಗಾಂಧಿ ಕಿಡಿ.<p>ಕಳೆದ 45 ದಿನಗಳಲ್ಲಿ ಬಿಹಾರದ 24 ಸಾವಿರ ಸ್ವ–ಸಹಾಯ ಸಂಘಗಳಿಗೆ ₹1 ಸಾವಿರ ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ದೇಶದಲ್ಲಿ ಒಟ್ಟು 1.5 ಕೋಟಿ ಲಖ್ಪತಿ ದೀದಿಗಳಿದ್ದು ಆ ಪೈಕಿ 20 ಕೋಟಿ ಬಿಹಾರದಲ್ಲೇ ಇದ್ದಾರೆ ಎಂದು ಹೇಳಿದ್ದಾರೆ.</p><p>ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಚಂಪರಾನ್ ಮಹಾತ್ಮ ಗಾಂಧಿ ಅವರಿಗೆ ಹೊಸ ದಿಕ್ಕನ್ನು ನೀಡಿತು. ಮೋತಿಹಾರಿಯನ್ನು ಮುಂಬೈ ಮಾದರಿಯಲ್ಲಿ ಅಭಿವೃದ್ಧಿಪಡಿಸಬೇಕಿದೆ ಎಂದರು.</p> .ಬಿಹಾರ | 125 ಯುನಿಟ್ವರೆಗೆ ಉಚಿತ ವಿದ್ಯುತ್: ನಿತೀಶ್ ಕುಮಾರ್ ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> <strong>ಮೋತಿಹಾರಿ (ಬಿಹಾರ):</strong> ಆರ್ಜೆಡಿ ಪಕ್ಷವು ಯುವಕರಿಗೆ ಉದ್ಯೋಗ ನೀಡುವ ಬಗ್ಗೆ ಯೋಚಿಸುವುದಿಲ್ಲ, ಯಾಕೆಂದರೆ ಅವರು ಕೆಲಸ ನೀಡುವ ಮೊದಲು ಬಡವರ ಜಮೀನು ಕಿತ್ತುಕೊಂಡರು ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.</p>.ಬಿಹಾರ: ಆಯೋಗದ ಹೇಳಿಕೆ ತಳ್ಳಿಹಾಕಿದ ತೇಜಸ್ವಿ.<p>ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರೊಂದಿಗೆ ತಳುಕು ಹಾಕಿಕೊಂಡಿರುವ ‘ಉದ್ಯೋಗಕ್ಕಾಗಿ ಭೂಮಿ’ ಹಗರಣವನ್ನು ಉಲ್ಲೇಖಿಸಿ ಪ್ರಧಾನಿ ಹೀಗೆ ಹೇಳಿದ್ದಾರೆ.</p><p>ಕಾಂಗ್ರೆಸ್ ಹಾಗೂ ಆರ್ಜೆಡಿ ಪಕ್ಷಗಳು ಬಡವರ ಹಾಗೂ ಸಾಮಾಜಿಕವಾಗಿ ಹಿಂದುಳಿದವರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ, ಆದರೆ ಉಭಯ ಪಕ್ಷಗಳು ಈ ಹಿಂದೆ ಈ ಸಮುದಾಯಗಳನ್ನು ನಿರ್ಲಕ್ಷಿಸಿತ್ತು ಎಂದು ಪ್ರಧಾನಿ ಆರೋಪಿದ್ದಾರೆ.</p>.ಬಿಹಾರ: ಅಪರಾಧ ಹೆಚ್ಚಳಕ್ಕೆ ನಿರುದ್ಯೋಗಿ ಕೃಷಿ ಕಾರ್ಮಿಕರು ಕಾರಣ; ಪೊಲೀಸ್ ಅಧಿಕಾರಿ.<p>ಮುಂಬರುವ ವಿಧಾನಸಭೆ ಚುನಾವಣೆಯ ಅಂಗವಾಗಿ ಮೋತಿಹಾರಿಯಲ್ಲಿ ಆಯೋಜಿಸಲಾದ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಬನಾಯೇಂಗೆ ನಯಾ ಬಿಹಾರ್, ಫಿರ್ ಏಕ್ ಬಾರ್ ಎನ್ಡಿಎ ಸರ್ಕಾರ್’ (ಹೊಸ ಬಿಹಾರ ಮಾಡುತ್ತೇವೆ, ಮತ್ತೊಮ್ಮೆ ಎನ್ಡಿಎ ಸರ್ಕಾರ) ಎನ್ನುವ ಹೊಸ ಘೋಷಣೆಯನ್ನೂ ಮಾಡಿದ್ದಾರೆ.</p><p>ಅಪರೇಷನ್ ಸಿಂಧೂರ ನಡೆಯುವ ನಿರ್ಧಾರವನ್ನು ನಾನು ಬಿಹಾರದ ನೆಲದಲ್ಲೇ ನಿಂತು ಮಾಡಿದ್ದೆ. ಅದರ ಯಶಸ್ಸನ್ನು ಇಡೀ ಜಗತ್ತು ನೋಡಿದೆ ಎಂದು ಹೇಳಿದ್ದಾರೆ.</p>.ಬಿಹಾರ: ಹಲವು ಸ್ಥಳಗಳಲ್ಲಿ 5.76 ಲಕ್ಷ ಮತದಾರರ ನೋಂದಣಿ; ಚುನಾವಣಾ ಆಯೋಗ .<p>ಆರ್ಜೆಡಿ–ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿದ್ದವು. ಅವರಿಗೆ ಬಡವರ ಕಲ್ಯಾಣದ ಬಗ್ಗೆ ಯೋಚನೆಯೇ ಇಲ್ಲ. ಅವರು ಬಡವರು, ಸಾಮಾಜಿಕವಾಗಿ ಹಿಂದುಳಿದವರ ಹೆಸರಿನಲ್ಲಿ ರಾಜಕೀಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.</p><p>ಯುವಕರಿಗೆ ಹೆಚ್ಚಿನ ಅವಕಾಶ ನೀಡುತ್ತೇವೆ ಎಂದು ಭರವಸೆ ನೀಡಿದ ಅವರು, ದೇಶದಲ್ಲಿ ಯುವಕರಿಗೆ ಉದ್ಯೋಗಾವಕಾಶ ನೀಡಲು ಕೇಂದ್ರ ಸರ್ಕಾರ ಒಂದು ಲಕ್ಷ ಕೋಟಿ ಹೂಡಿಕೆ ಮಾಡಲಿದೆ ಎಂದರು.</p><p>ಪೂರ್ವ ಭಾರತದ ಅಭಿವೃದ್ಧಿಗೆ ವಿಕಸಿತ ಬಿಹಾರ ಅತಿ ಮುಖ್ಯ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಎನ್ಡಿಎ ಕಾಳಜಿ ವಹಿಸಿದೆ ಎಂದು ಮೋದಿ ಹೇಳಿದ್ದಾರೆ.</p>.ಬಿಹಾರ | ಚುನಾವಣಾ ಆಯೋಗ BJPಯ ಶಾಖೆಯಾಯಿತೇ..?: ರಾಹುಲ್ ಗಾಂಧಿ ಕಿಡಿ.<p>ಕಳೆದ 45 ದಿನಗಳಲ್ಲಿ ಬಿಹಾರದ 24 ಸಾವಿರ ಸ್ವ–ಸಹಾಯ ಸಂಘಗಳಿಗೆ ₹1 ಸಾವಿರ ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ದೇಶದಲ್ಲಿ ಒಟ್ಟು 1.5 ಕೋಟಿ ಲಖ್ಪತಿ ದೀದಿಗಳಿದ್ದು ಆ ಪೈಕಿ 20 ಕೋಟಿ ಬಿಹಾರದಲ್ಲೇ ಇದ್ದಾರೆ ಎಂದು ಹೇಳಿದ್ದಾರೆ.</p><p>ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಚಂಪರಾನ್ ಮಹಾತ್ಮ ಗಾಂಧಿ ಅವರಿಗೆ ಹೊಸ ದಿಕ್ಕನ್ನು ನೀಡಿತು. ಮೋತಿಹಾರಿಯನ್ನು ಮುಂಬೈ ಮಾದರಿಯಲ್ಲಿ ಅಭಿವೃದ್ಧಿಪಡಿಸಬೇಕಿದೆ ಎಂದರು.</p> .ಬಿಹಾರ | 125 ಯುನಿಟ್ವರೆಗೆ ಉಚಿತ ವಿದ್ಯುತ್: ನಿತೀಶ್ ಕುಮಾರ್ ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>