<p>ನವದೆಹಲಿ (ಪಿಟಿಐ): ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಟೀಕೆಗೆ ಗುರಿಯಾಗಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ, ‘ಗಾಂಧಿ– ನೆಹರೂ ಪರಿವಾರದವರನ್ನು ಬಿಟ್ಟು ಬೇರೆ ಯಾರ ಕೆಲಸವನ್ನೂ ಆ ಪಕ್ಷ ಗುರುತಿಸುವುದಿಲ್ಲ’ ಎಂದರು.</p>.<p>ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯಕ್ಕೆ ಮಂಗಳವಾರ ಉತ್ತರ ನೀಡಿದ ಅವರು, ‘ಮಾಜಿ ಪ್ರಧಾನಿಗಳಾದ ಅಟಲ್ಬಿಹಾರಿ ವಾಜಪೇಯಿ ಹಾಗೂ ಪಿ.ವಿ. ನರಸಿಂಹ ರಾವ್ ಅವರ ಒಳ್ಳೆಯ ಕೆಲಸಗಳ ಬಗ್ಗೆ ಕಾಂಗ್ರೆಸ್ ಎಂದೂ ಮಾತನಾಡಿಲ್ಲ’ ಎಂದರು.</p>.<p>‘ದೇಶದ ಏಳಿಗೆಗೆ ಕೆಲವೇ ಕೆಲವರು ಕಾಣಿಕೆ ನೀಡಿದ್ದಾರೆ ಎಂದು ಕೆಲವರು ಭಾವಿಸುತ್ತಾರೆ. ಅಂಥವರು ಆ ಕೆಲವು ಹೆಸರುಗಳನ್ನು ಮಾತ್ರ ಕೇಳಲು ಬಯಸುತ್ತಾರೆ. ಉಳಿದವರನ್ನು ಕಡೆಗಣಿಸುತ್ತಾರೆ. ಆದರೆ ನಾವು ಬೇರೆ ರೀತಿಯಲ್ಲಿ ಚಿಂತಿಸುತ್ತೇವೆ. ದೇಶದ ಏಳಿಗೆಗೆ ಪ್ರತಿಯೊಬ್ಬ ನಾಗರಿಕನೂ ಕಾಣಿಕೆ ನೀಡಿದ್ದಾನೆ ಎಂದು ನಾವು ಭಾವಿಸುತ್ತೇವೆ’ ಎಂದರು.</p>.<p>‘ಈ ಇಡೀ ಚರ್ಚೆಯಲ್ಲಿ ಅವರು (ಕಾಂಗ್ರೆಸ್) ಎಂದಾದರೂ ನರಸಿಂಹ ರಾವ್ ಅವರ ಕೆಲಸದ ಬಗ್ಗೆ ಮಾತನಾಡಿದರೇ? ಅವರು ಮನಮೋಹನ ಸಿಂಗ್ ಅವರ ಹೆಸರನ್ನೂ ಹೇಳಲಿಲ್ಲ ಎಂದು ಮೋದಿ ಕುಟುಕಿದರು. ತುರ್ತು ಪರಿಸ್ಥಿತಿಯ ದಿನಗಳನ್ನು ಪುನಃ ನೆನಪಿಸುತ್ತಾ, ‘ಅದು ಪ್ರಜಾಪ್ರಭುತ್ವದ ಮೇಲಿನ ಎಂದಿಗೂ ಮಾಸದ ಕಪ್ಪುಚುಕ್ಕೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಟೀಕೆಗೆ ಗುರಿಯಾಗಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ, ‘ಗಾಂಧಿ– ನೆಹರೂ ಪರಿವಾರದವರನ್ನು ಬಿಟ್ಟು ಬೇರೆ ಯಾರ ಕೆಲಸವನ್ನೂ ಆ ಪಕ್ಷ ಗುರುತಿಸುವುದಿಲ್ಲ’ ಎಂದರು.</p>.<p>ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯಕ್ಕೆ ಮಂಗಳವಾರ ಉತ್ತರ ನೀಡಿದ ಅವರು, ‘ಮಾಜಿ ಪ್ರಧಾನಿಗಳಾದ ಅಟಲ್ಬಿಹಾರಿ ವಾಜಪೇಯಿ ಹಾಗೂ ಪಿ.ವಿ. ನರಸಿಂಹ ರಾವ್ ಅವರ ಒಳ್ಳೆಯ ಕೆಲಸಗಳ ಬಗ್ಗೆ ಕಾಂಗ್ರೆಸ್ ಎಂದೂ ಮಾತನಾಡಿಲ್ಲ’ ಎಂದರು.</p>.<p>‘ದೇಶದ ಏಳಿಗೆಗೆ ಕೆಲವೇ ಕೆಲವರು ಕಾಣಿಕೆ ನೀಡಿದ್ದಾರೆ ಎಂದು ಕೆಲವರು ಭಾವಿಸುತ್ತಾರೆ. ಅಂಥವರು ಆ ಕೆಲವು ಹೆಸರುಗಳನ್ನು ಮಾತ್ರ ಕೇಳಲು ಬಯಸುತ್ತಾರೆ. ಉಳಿದವರನ್ನು ಕಡೆಗಣಿಸುತ್ತಾರೆ. ಆದರೆ ನಾವು ಬೇರೆ ರೀತಿಯಲ್ಲಿ ಚಿಂತಿಸುತ್ತೇವೆ. ದೇಶದ ಏಳಿಗೆಗೆ ಪ್ರತಿಯೊಬ್ಬ ನಾಗರಿಕನೂ ಕಾಣಿಕೆ ನೀಡಿದ್ದಾನೆ ಎಂದು ನಾವು ಭಾವಿಸುತ್ತೇವೆ’ ಎಂದರು.</p>.<p>‘ಈ ಇಡೀ ಚರ್ಚೆಯಲ್ಲಿ ಅವರು (ಕಾಂಗ್ರೆಸ್) ಎಂದಾದರೂ ನರಸಿಂಹ ರಾವ್ ಅವರ ಕೆಲಸದ ಬಗ್ಗೆ ಮಾತನಾಡಿದರೇ? ಅವರು ಮನಮೋಹನ ಸಿಂಗ್ ಅವರ ಹೆಸರನ್ನೂ ಹೇಳಲಿಲ್ಲ ಎಂದು ಮೋದಿ ಕುಟುಕಿದರು. ತುರ್ತು ಪರಿಸ್ಥಿತಿಯ ದಿನಗಳನ್ನು ಪುನಃ ನೆನಪಿಸುತ್ತಾ, ‘ಅದು ಪ್ರಜಾಪ್ರಭುತ್ವದ ಮೇಲಿನ ಎಂದಿಗೂ ಮಾಸದ ಕಪ್ಪುಚುಕ್ಕೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>