<p><strong>ನವದೆಹಲಿ</strong>: ‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಪ್ರತಿಯೊಂದು ಕ್ಷೇತ್ರದಲ್ಲೂ ‘ಏಕಸ್ವಾಮ್ಯ’ವನ್ನು ಸೃಷ್ಟಿಸುತ್ತಿದೆ’ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಭಾರತದ ಆರ್ಥಿಕತೆ ನಿಯಂತ್ರಣವನ್ನು ಪುನಃ ಎಂಎಸ್ಎಂಇಗಳ ಕೈಗೆ ನೀಡಬೇಕೆಂದು’ ಒತ್ತಾಯಿಸಿದ್ದಾರೆ.</p><p>ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಿರುವ ಅವರು, ಅತಿಸಣ್ಣ, ಸಣ್ಣ ಮತ್ತು ಮಧ್ಯಮವರ್ಗದ ಕೈಗಾರಿಕಾ ವಲಯದ ಐಸ್ಕ್ರೀಂ ತಯಾರಕ ಕಂಪನಿಗಳ ನಿಯೋಗವನ್ನು ಭೇಟಿಯಾಗಿ, ಅವರ ಸಮಸ್ಯೆಗಳನ್ನು ಆಲಿಸಿದ ನಂತರ ಸಾಮಾಜಿಕ ಜಾಲತಾಣವೊಂದರಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.</p>.<p>‘ಒಬ್ಬರು ಅಥವಾ ಇಬ್ಬರು ಎಲ್ಲ ಕ್ಷೇತ್ರಗಳ ಮೇಲೆ ಹಿಡಿತ ಸಾಧಿಸುತ್ತಿರುವುದು ಭಾರತಕ್ಕೆ ಅಂಟಿರುವ ಶಾಪ. ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಎಲ್ಲ ಕ್ಷೇತ್ರಗಳಲ್ಲೂ ಒಬ್ಬರು ಅಥವಾ ಇಬ್ಬರ ಪಾರಮ್ಯಕ್ಕೆ ಅವಕಾಶ ಕಲ್ಪಿಸುತ್ತಿದೆ’ ಎಂದು ಟೀಕಿಸಿದ್ದಾರೆ.</p>.<p>‘ಸಣ್ಣ ಮತ್ತು ಮಧ್ಯಮವರ್ಗದ ಐಸ್ಕ್ರೀಂ ತಯಾರಕರನ್ನು ಭೇಟಿಯಾಗಿ ಚರ್ಚಿಸಿದ ನಂತರ, ಸರ್ಕಾರ ತನಗೆ ಅನುಕೂಲವಾಗಿರುವ ಕೈಗಾರಿಕೋದ್ಯಮಿಗಳ ಲಾಭಕ್ಕಾಗಿ ಸಣ್ಣ ವ್ಯವಹಾರಗಳನ್ನು ನಾಶ ಮಾಡಲು ನಿರ್ಧರಿಸಿರುವುದು ಸ್ಪಷ್ಟವಾಗಿದೆ’ ಎಂದು ಹೇಳಿದ್ದಾರೆ.</p>.<p>‘ಸಣ್ಣ ಐಸ್ ಕ್ರೀಮ್ ತಯಾರಕರು, ಭಾರತದ ಬಡ ಮತ್ತು ಕೆಳ ಮಧ್ಯಮ ವರ್ಗದವರಾಗಿದ್ದಾರೆ. ಇಂಥವರು ದೇಶದಾದ್ಯಂತ ಸಾವಿರಾರು ಮಂದಿ ಇದ್ದಾರೆ. ಲಕ್ಷಾಂತರ ಜನರಿಗೆ ಉದ್ಯೋಗ ಒದಗಿಸುತ್ತಿದ್ದಾರೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಪ್ರತಿಯೊಂದು ಕ್ಷೇತ್ರದಲ್ಲೂ ‘ಏಕಸ್ವಾಮ್ಯ’ವನ್ನು ಸೃಷ್ಟಿಸುತ್ತಿದೆ’ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಭಾರತದ ಆರ್ಥಿಕತೆ ನಿಯಂತ್ರಣವನ್ನು ಪುನಃ ಎಂಎಸ್ಎಂಇಗಳ ಕೈಗೆ ನೀಡಬೇಕೆಂದು’ ಒತ್ತಾಯಿಸಿದ್ದಾರೆ.</p><p>ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಿರುವ ಅವರು, ಅತಿಸಣ್ಣ, ಸಣ್ಣ ಮತ್ತು ಮಧ್ಯಮವರ್ಗದ ಕೈಗಾರಿಕಾ ವಲಯದ ಐಸ್ಕ್ರೀಂ ತಯಾರಕ ಕಂಪನಿಗಳ ನಿಯೋಗವನ್ನು ಭೇಟಿಯಾಗಿ, ಅವರ ಸಮಸ್ಯೆಗಳನ್ನು ಆಲಿಸಿದ ನಂತರ ಸಾಮಾಜಿಕ ಜಾಲತಾಣವೊಂದರಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.</p>.<p>‘ಒಬ್ಬರು ಅಥವಾ ಇಬ್ಬರು ಎಲ್ಲ ಕ್ಷೇತ್ರಗಳ ಮೇಲೆ ಹಿಡಿತ ಸಾಧಿಸುತ್ತಿರುವುದು ಭಾರತಕ್ಕೆ ಅಂಟಿರುವ ಶಾಪ. ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಎಲ್ಲ ಕ್ಷೇತ್ರಗಳಲ್ಲೂ ಒಬ್ಬರು ಅಥವಾ ಇಬ್ಬರ ಪಾರಮ್ಯಕ್ಕೆ ಅವಕಾಶ ಕಲ್ಪಿಸುತ್ತಿದೆ’ ಎಂದು ಟೀಕಿಸಿದ್ದಾರೆ.</p>.<p>‘ಸಣ್ಣ ಮತ್ತು ಮಧ್ಯಮವರ್ಗದ ಐಸ್ಕ್ರೀಂ ತಯಾರಕರನ್ನು ಭೇಟಿಯಾಗಿ ಚರ್ಚಿಸಿದ ನಂತರ, ಸರ್ಕಾರ ತನಗೆ ಅನುಕೂಲವಾಗಿರುವ ಕೈಗಾರಿಕೋದ್ಯಮಿಗಳ ಲಾಭಕ್ಕಾಗಿ ಸಣ್ಣ ವ್ಯವಹಾರಗಳನ್ನು ನಾಶ ಮಾಡಲು ನಿರ್ಧರಿಸಿರುವುದು ಸ್ಪಷ್ಟವಾಗಿದೆ’ ಎಂದು ಹೇಳಿದ್ದಾರೆ.</p>.<p>‘ಸಣ್ಣ ಐಸ್ ಕ್ರೀಮ್ ತಯಾರಕರು, ಭಾರತದ ಬಡ ಮತ್ತು ಕೆಳ ಮಧ್ಯಮ ವರ್ಗದವರಾಗಿದ್ದಾರೆ. ಇಂಥವರು ದೇಶದಾದ್ಯಂತ ಸಾವಿರಾರು ಮಂದಿ ಇದ್ದಾರೆ. ಲಕ್ಷಾಂತರ ಜನರಿಗೆ ಉದ್ಯೋಗ ಒದಗಿಸುತ್ತಿದ್ದಾರೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>