<p><strong>ನವದೆಹಲಿ:</strong> ‘ಆಹಾರ ಪದಾರ್ಥಗಳ ಬೆಲೆ ಗಗನಮುಖಿಯಾಗಿದ್ದು ಇದನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಒಪ್ಪಿಕೊಳ್ಳಬೇಕು. ಜನರ ಕುರಿತು ಕಿಂಚಿತ್ತಾದರೂ ಕಾಳಜಿ ತೋರಿಸುವ ಮೂಲಕ ಜನರಿಗೆ ಅಗತ್ಯ ಪರಿಹಾರ ಒದಗಿಸಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ.</p><p>ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಈ ಕುರಿತು ಮಾಧ್ಯಮ ವರದಿ ಬಿಡುಗಡೆ ಮಾಡಿದ್ದು, ‘ತರಕಾರಿ ಬೆಲೆ ಕುಸಿತದಿಂದ ಸರಾಸರಿ ಹಣದುಬ್ಬರ ಪ್ರಮಾಣ ತಗ್ಗಿದೆ. ಆದರೆ ಬೇಳೆಕಾಳು ಸಹಿತ ಈಗಲೂ ಕೆಲ ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗಿದೆ’ ಎಂದಿದ್ದಾರೆ.</p><p>‘ಮೋದಿ ಸರ್ಕಾರದಲ್ಲಿ ಹಣದುಬ್ಬರ ಉಂಟಾಗಿರುವುದರಿಂದ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಬಡವರಿಗೆ ಹೊತ್ತಿನ ಊಟಕ್ಕೂ ತೊಂದರೆಯಾಗಿದೆ. ಎಲ್ಲಾ ಕ್ಷೇತ್ರಗಳಲ್ಲೂ ಹಣದುಬ್ಬರ ಗಗನಮುಖಿಯಾಗಿದೆ. ಹಣದುಬ್ಬರ ಮತ್ತು ನಿರುದ್ಯೋಗ ಕುರಿತು ಮಾತನಾಡಲು ಮೋದಿ ಸರ್ಕಾರ ನಿರಾಕರಿಸಿದರೂ, ಕಾಲಕಾಲಕ್ಕೆ ವಾಸ್ತವಾಂಶ ಬಹಿರಂಗವಾಗುತ್ತಲೇ ಇವೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>‘ಭಾರತೀಯ ರಿಸರ್ವ್ ಬ್ಯಾಂಕ್ನ ಮಾಸಿಕ ವರದಿಯಲ್ಲಿ ಊಟದ ‘ಥಾಲಿ’ ಕೂಡಾ ದುಬಾರಿಯಾಗಿರುವುದು ತೋರಿಸುತ್ತಿದೆ. ತೊಗರಿ ಬೇಳೆ ಪ್ರತಿ ಕೆ.ಜಿ.ಗೆ ₹140ರ ಗಡಿ ದಾಟಿದೆ. ಇ–ಕಾಮರ್ಸ್ ಕಂಪನಿಗಳು ಇದನ್ನೇ ₹200ಕ್ಕೆ ಮಾರಾಟ ಮಾಡುತ್ತಿವೆ. ಆರ್ಬಿಐ ಪ್ರಕಾರ ಅಡುಗೆ ಎಣ್ಣೆಯ ದರ ಅಕ್ಟೋಬರ್ನಿಂದ ಈಚೆ ಏರಿಕೆಯಾಗಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಆಹಾರ ಪದಾರ್ಥಗಳ ಬೆಲೆ ಗಗನಮುಖಿಯಾಗಿದ್ದು ಇದನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಒಪ್ಪಿಕೊಳ್ಳಬೇಕು. ಜನರ ಕುರಿತು ಕಿಂಚಿತ್ತಾದರೂ ಕಾಳಜಿ ತೋರಿಸುವ ಮೂಲಕ ಜನರಿಗೆ ಅಗತ್ಯ ಪರಿಹಾರ ಒದಗಿಸಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ.</p><p>ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಈ ಕುರಿತು ಮಾಧ್ಯಮ ವರದಿ ಬಿಡುಗಡೆ ಮಾಡಿದ್ದು, ‘ತರಕಾರಿ ಬೆಲೆ ಕುಸಿತದಿಂದ ಸರಾಸರಿ ಹಣದುಬ್ಬರ ಪ್ರಮಾಣ ತಗ್ಗಿದೆ. ಆದರೆ ಬೇಳೆಕಾಳು ಸಹಿತ ಈಗಲೂ ಕೆಲ ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗಿದೆ’ ಎಂದಿದ್ದಾರೆ.</p><p>‘ಮೋದಿ ಸರ್ಕಾರದಲ್ಲಿ ಹಣದುಬ್ಬರ ಉಂಟಾಗಿರುವುದರಿಂದ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಬಡವರಿಗೆ ಹೊತ್ತಿನ ಊಟಕ್ಕೂ ತೊಂದರೆಯಾಗಿದೆ. ಎಲ್ಲಾ ಕ್ಷೇತ್ರಗಳಲ್ಲೂ ಹಣದುಬ್ಬರ ಗಗನಮುಖಿಯಾಗಿದೆ. ಹಣದುಬ್ಬರ ಮತ್ತು ನಿರುದ್ಯೋಗ ಕುರಿತು ಮಾತನಾಡಲು ಮೋದಿ ಸರ್ಕಾರ ನಿರಾಕರಿಸಿದರೂ, ಕಾಲಕಾಲಕ್ಕೆ ವಾಸ್ತವಾಂಶ ಬಹಿರಂಗವಾಗುತ್ತಲೇ ಇವೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>‘ಭಾರತೀಯ ರಿಸರ್ವ್ ಬ್ಯಾಂಕ್ನ ಮಾಸಿಕ ವರದಿಯಲ್ಲಿ ಊಟದ ‘ಥಾಲಿ’ ಕೂಡಾ ದುಬಾರಿಯಾಗಿರುವುದು ತೋರಿಸುತ್ತಿದೆ. ತೊಗರಿ ಬೇಳೆ ಪ್ರತಿ ಕೆ.ಜಿ.ಗೆ ₹140ರ ಗಡಿ ದಾಟಿದೆ. ಇ–ಕಾಮರ್ಸ್ ಕಂಪನಿಗಳು ಇದನ್ನೇ ₹200ಕ್ಕೆ ಮಾರಾಟ ಮಾಡುತ್ತಿವೆ. ಆರ್ಬಿಐ ಪ್ರಕಾರ ಅಡುಗೆ ಎಣ್ಣೆಯ ದರ ಅಕ್ಟೋಬರ್ನಿಂದ ಈಚೆ ಏರಿಕೆಯಾಗಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>