<p><strong>ನವದೆಹಲಿ</strong>: ‘ನರೇಂದ್ರ ಮೋದಿ ಸರ್ಕಾರವು ಕೇವಲ ಬಾಯಿ ಮಾತಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸ್ಮರಿಸುತ್ತದೆ. ಅವರ ಆಶಯಗಳ ಈಡೇರಿಕೆಗೆ ಯಾವುದೇ ಯೋಜನೆಗಳನ್ನು ರೂಪಿಸುತ್ತಿಲ್ಲ. ಬಿಜೆಪಿ–ಆರ್ಎಸ್ಎಸ್ ಅಂಬೇಡ್ಕರ್ ಅವರ ಶತ್ರುಗಳು‘ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.</p>.<p>ಅಂಬೇಡ್ಕರ್ ಅವರ 134ನೇ ಜಯಂತಿ ದಿನ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ‘ಸಂವಿಧಾನ ಸದನದ ಸೆಂಟ್ರಲ್ ಹಾಲ್ನಲ್ಲಿ ಸಾಮಾನ್ಯವಾಗಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಗೌರವ ನಮನ ಸಲ್ಲಿಸಲಾಗುತ್ತದೆ. ಆದರೆ ಸೋಮವಾರ ಬೆಳಿಗ್ಗೆ 9 ಗಂಟೆಗೆ ನಮನ ಸಲ್ಲಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಈ ಬದಲಾವಣೆ ಮಾಡಲಾಗಿದೆ. ಆದರೂ ಅವರು ಸರಿಯಾದ ಸಮಯಕ್ಕೆ ತಲುಪಿಲ್ಲ’ ಎಂದು ಹೇಳಿದರು.</p>.<p>‘ನರೇಂದ್ರ ಮೋದಿ ಅವರು ಹಿಂದುಳಿದ ವರ್ಗದವರು. ಆದರೆ, ಹಿಂದುಳಿದ ವರ್ಗ ಮತ್ತು ದಲಿತರ ಮೇಲೆ ದೌರ್ಜನ್ಯಗಳು ನಡೆದಾಗ ಪ್ರಧಾನಿ ಮೌನ ವಹಿಸುತ್ತಾರೆ. ಮೋದಿ ಅವರು ಸಂವಿಧಾನವನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ ಎಂಬ ಸಂಕೇತ ಇದು‘ ಎಂದು ದೂರಿದರು.</p>.<p>’ಬಿಜೆಪಿಯು ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ. ಜನರಿಗೆ ಸತ್ಯ ಏನು ಎಂದು ತಿಳಿದಿದೆ ಎಂದು ಹೇಳಿದರು.</p>.<p>‘ದೇಶದಾದ್ಯಂತ ಜಾತಿಗಣತಿ ನಡೆಸುವ ಮತ್ತು ಖಾಸಗಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದವರಿಗೆ ಮೀಸಲಾತಿ ಅನುಷ್ಠಾನ ಮಾಡುವ ಅಗತ್ಯವಿದೆ‘ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ನರೇಂದ್ರ ಮೋದಿ ಸರ್ಕಾರವು ಕೇವಲ ಬಾಯಿ ಮಾತಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸ್ಮರಿಸುತ್ತದೆ. ಅವರ ಆಶಯಗಳ ಈಡೇರಿಕೆಗೆ ಯಾವುದೇ ಯೋಜನೆಗಳನ್ನು ರೂಪಿಸುತ್ತಿಲ್ಲ. ಬಿಜೆಪಿ–ಆರ್ಎಸ್ಎಸ್ ಅಂಬೇಡ್ಕರ್ ಅವರ ಶತ್ರುಗಳು‘ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.</p>.<p>ಅಂಬೇಡ್ಕರ್ ಅವರ 134ನೇ ಜಯಂತಿ ದಿನ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ‘ಸಂವಿಧಾನ ಸದನದ ಸೆಂಟ್ರಲ್ ಹಾಲ್ನಲ್ಲಿ ಸಾಮಾನ್ಯವಾಗಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಗೌರವ ನಮನ ಸಲ್ಲಿಸಲಾಗುತ್ತದೆ. ಆದರೆ ಸೋಮವಾರ ಬೆಳಿಗ್ಗೆ 9 ಗಂಟೆಗೆ ನಮನ ಸಲ್ಲಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಈ ಬದಲಾವಣೆ ಮಾಡಲಾಗಿದೆ. ಆದರೂ ಅವರು ಸರಿಯಾದ ಸಮಯಕ್ಕೆ ತಲುಪಿಲ್ಲ’ ಎಂದು ಹೇಳಿದರು.</p>.<p>‘ನರೇಂದ್ರ ಮೋದಿ ಅವರು ಹಿಂದುಳಿದ ವರ್ಗದವರು. ಆದರೆ, ಹಿಂದುಳಿದ ವರ್ಗ ಮತ್ತು ದಲಿತರ ಮೇಲೆ ದೌರ್ಜನ್ಯಗಳು ನಡೆದಾಗ ಪ್ರಧಾನಿ ಮೌನ ವಹಿಸುತ್ತಾರೆ. ಮೋದಿ ಅವರು ಸಂವಿಧಾನವನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ ಎಂಬ ಸಂಕೇತ ಇದು‘ ಎಂದು ದೂರಿದರು.</p>.<p>’ಬಿಜೆಪಿಯು ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ. ಜನರಿಗೆ ಸತ್ಯ ಏನು ಎಂದು ತಿಳಿದಿದೆ ಎಂದು ಹೇಳಿದರು.</p>.<p>‘ದೇಶದಾದ್ಯಂತ ಜಾತಿಗಣತಿ ನಡೆಸುವ ಮತ್ತು ಖಾಸಗಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದವರಿಗೆ ಮೀಸಲಾತಿ ಅನುಷ್ಠಾನ ಮಾಡುವ ಅಗತ್ಯವಿದೆ‘ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>